AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓವರ್ ಕಾನ್ಫಿಡೆನ್ಸ್​ನಿಂದ ಸಿಕ್ಕ ಅವಕಾಶ ಕಳೆದುಕೊಂಡ ಗುರೂಜಿ; ಮನೆಯಿಂದ ಹೊರಹೋಗಲು ಇದೂ ಕಾರಣ ಆಗಬಹುದು

‘ಬಿಗ್ ಬಾಸ್’ ಮನೆಗೆ ಆರ್ಯವರ್ಧನ್ ಎಂಟ್ರಿಕೊಟ್ಟಾಗ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗಿತ್ತು. ಅವರು ಹೇಳುವ ಸಂಖ್ಯಾಶಾಸ್ತ್ರ ವರ್ಕ್​ ಆಗಲ್ಲ ಎಂಬುದು ಅನೇಕರ ಅಭಿಪ್ರಾಯ. ಈ ಕಾರಣದಿಂದಲೂ ಅವರು ಟ್ರೋಲ್ ಆಗಿದ್ದರು. ಅ

ಓವರ್ ಕಾನ್ಫಿಡೆನ್ಸ್​ನಿಂದ ಸಿಕ್ಕ ಅವಕಾಶ ಕಳೆದುಕೊಂಡ ಗುರೂಜಿ; ಮನೆಯಿಂದ ಹೊರಹೋಗಲು ಇದೂ ಕಾರಣ ಆಗಬಹುದು
ಆರ್ಯವರ್ಧನ್
TV9 Web
| Edited By: |

Updated on: Sep 13, 2022 | 9:05 PM

Share

ಆರ್ಯವರ್ಧನ್​ ಗುರೂಜಿ (Aryvardhan Guruji) ಅವರು ಸೈಲೆಂಟ್ ವ್ಯಕ್ತಿಯಾಗಿ ಬಿಗ್ ಬಾಸ್ ಮನೆಯಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಯಾರ ತಂಟೆಗೂ ಅಷ್ಟಾಗಿ ಹೋಗುವುದಿಲ್ಲ. ಅವರಿಗೆ ಯಾರೇ ಬೈದರೂ ತಿರುಗಿ ಬೈಯ್ಯೋಕೆ ಹೋಗುವುದಿಲ್ಲ. ಮನೆ ಮಂದಿಯ ಜತೆ ವೈರತ್ವ ಕಟ್ಟಿಕೊಳ್ಳುವುದು ಎಂದರೆ ಅವರಿಗೆ ಇಷ್ಟ ಆಗುವುದಿಲ್ಲ. ಆದರೆ, ಎಲ್ಲರಿಗಿಂತ ಮನೆಯಲ್ಲಿ ತಾವು ಬುದ್ಧಿವಂತರು ಎಂಬುದನ್ನು ಸಾಬೀತು ಮಾಡಿದ್ದಾರೆ. ಇದರಿಂದ ಅವರಿಗೆ ಓವರ್​ ಕಾನ್ಫಿಡೆನ್ಸ್​ ಬಂದಿದೆ. ಇದರಿಂದ ಅವರು ಎಡವಟ್ಟೊಂದನ್ನು ಮಾಡಿಕೊಂಡಿದ್ದಾರೆ.

‘ಬಿಗ್ ಬಾಸ್’ ಮನೆಗೆ ಆರ್ಯವರ್ಧನ್ ಎಂಟ್ರಿಕೊಟ್ಟಾಗ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗಿತ್ತು. ಅವರು ಹೇಳುವ ಸಂಖ್ಯಾಶಾಸ್ತ್ರ ವರ್ಕ್​ ಆಗಲ್ಲ ಎಂಬುದು ಅನೇಕರ ಅಭಿಪ್ರಾಯ. ಈ ಕಾರಣದಿಂದಲೂ ಅವರು ಟ್ರೋಲ್ ಆಗಿದ್ದರು. ಅವರು ಮನೆ ಒಳಗೆ ಬಂದಾಗ ಬೇರೆಯದೇ ಮುಖ ಅನಾವರಣ ಆಯ್ತು. ಅವರ ಮುಗ್ಧ ಮುಖವನ್ನು ಜನರು ನೋಡಿದರು. ಇದರ ಜತೆಗೆ ಅವರು ಎಷ್ಟು ಬ್ರಿಲಿಯಂಟ್ ಎಂಬುದೂ ಗೊತ್ತಾಗಿದೆ.

‘ಬಿಗ್ ಬಾಸ್​ ಒಟಿಟಿ’ ಫಿನಾಲೆ ವೀಕ್​ನಲ್ಲಿ ಹಲವು ಟಾಸ್ಕ್​ಗಳನ್ನು ನೀಡಲಾಗುತ್ತಿದೆ. ಮೊದಲ ಟಾಸ್ಕ್​​ ಗೆದ್ದ ಗುರೂಜಿ ಅವರು ಪ್ರತಿ ಸ್ಪರ್ಧಿಯನ್ನು ಆಯ್ಕೆ ಮಾಡಿಕೊಳ್ಳಬೇಕು. ಸ್ವಿಮ್ಮಿಂಗ್​ಪೂಲ್ ಟಾಸ್ಕ್ ಬಂದಿದ್ದರಿಂದ ಗುರೂಜಿ ಅವರು ಪ್ರತಿಸ್ಪರ್ಧಿಯಾಗಿ ಸೋಮಣ್ಣ ಅವರನ್ನು ಸೆಲೆಕ್ಟ್ ಮಾಡಿದರು. ಸೋಮಣ್ಣಗೆ ಈಜುಕೊಳದಲ್ಲಿ ಹೆಚ್ಚು ಸಮಯ ಇರೋಕೆ ಆಗುವುದಿಲ್ಲ. ಈ ಕಾರಣದಿಂದಲೇ ಗುರೂಜಿ ಅವರು ಸೋಮಣ್ಣ ಅವರನ್ನು ಪ್ರತಿಸ್ಪರ್ಧಿಯಾಗಿ ಆಯ್ಕೆ ಮಾಡಿದರು ಮತ್ತು ಈ ಆಟ ಗೆದ್ದರು. ನಂತರದ ಆಟದಲ್ಲಿ ಎದುರಾಳಿಯಾಗಿ ಜಯಶ್ರೀಯನ್ನು ಆಯ್ಕೆ ಮಾಡಿಕೊಂಡರು ಗುರೂಜಿ. ಆ ಆಟ ಕೂಡ ಗೆದ್ದರು. ಆರ್ಯವರ್ಧನ್ ಸ್ಮಾರ್ಟ್​​ನೆಸ್​ನೋಡಿ ಮನೆ ಮಂದಿ ಮೆಚ್ಚುಗೆ ಸೂಚಿಸಿದರು.

ಇದನ್ನೂ ಓದಿ
Image
ದೊಡ್ಮನೆಯಲ್ಲಿ ಎದೆ ಬಡಿದುಕೊಂಡು ಅತ್ತ ಜಯಶ್ರೀ; ಬಿಗ್​ ಬಾಸ್​ ಶೋನಲ್ಲಿ ಅಂಥದ್ದೇನಾಯ್ತು?
Image
BBK: ಬಿಗ್​ ಬಾಸ್​ಗೆ ಅವಮಾನ ಮಾಡಿದ ಸೋನು ಗೌಡ; ಮುಲಾಜಿಲ್ಲದೇ ಕ್ಲಾಸ್​ ತೆಗೆದುಕೊಂಡ ಕಿಚ್ಚ ಸುದೀಪ್​
Image
ಬಿಗ್​ ಬಾಸ್​ನಲ್ಲಿ ಹುಡುಗರಿಗೆ ಹೊರಗಿನಿಂದ ಸಿಗುತ್ತಿದೆ ಆ ಒಂದು ವಸ್ತು; ಸೋನು ಹೇಳಿಯೇ ಬಿಟ್ರು
Image
‘ಬಿಗ್​ ಬಾಸ್​ ಒಟಿಟಿ’ ಮನೆಯೊಳಗೆ ನಿಜವಾಗಿ ಏನೆಲ್ಲ ನಡೆಯಿತು? ಎಲ್ಲವನ್ನೂ ವಿವರಿಸಿದ ಸ್ಫೂರ್ತಿ ಗೌಡ

ಇದನ್ನೂ ಓದಿ: ‘ಕಳ್ಳ ಸ್ವಾಮೀಜಿ ಎನ್ನಬೇಕೆ?’ ಎಂದ ಸೋನು; ಆರ್ಯವರ್ಧನ್​ ಗುರೂಜಿ ತಿರುಗೇಟಿಗೆ ವೈರಲ್ ಹುಡುಗಿ ಗಪ್​ಚುಪ್​​

ಈ ವಿಚಾರದಿಂದ ಆರ್ಯವರ್ಧನ್ ಅವರಿಗೆ ಓವರ್ ಕಾನ್ಫಿಡೆನ್ಸ್ ಬಂದಿತ್ತು. ಹೀಗಾಗಿ, ಮತ್ತೊಂದು ಗೇಮ್​ನಲ್ಲಿ ಫೌಲ್ ಮಾಡಿ ಆಟ ಸೋತಿದ್ದಾರೆ. ಈ ಕಾರಣಕ್ಕೆ ಅವರು ಆಟದಿಂದ ಹೊರಹೋಗಬೇಕಾಯಿತು. ಗುರೂಜಿ ಆಟದಲ್ಲಿ ಗೆದ್ದಾಗ ಒಂದು ರೀತಿ ಇರುತ್ತಾರೆ ಹಾಗೂ ಸೋತಾಗ ಒಂದು ರೀತಿ ಆಡುತ್ತಾರೆ ಎಂದು ಅನೇಕರು ಹೇಳಿದ್ದಾರೆ. ಇದೇ ವಿಚಾರದಿಂದ ಅವರು ಎಲಿಮಿನೇಟ್ ಆಗುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ