AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ಸಂಬರಗಿ ವೀಕ್​ನೆಸ್​ ಮನೆಯವರಿಗೆ ಗೊತ್ತಾಗಿಹೋಯ್ತು; ಇನ್ನು ಎಲ್ಲವೂ ಸುಲಭ

ಬಿಗ್​ ಬಾಸ್ ಮನೆಯಲ್ಲಿ ಎಲ್ಲಾ ಸ್ಪರ್ಧಿಗಳಿಗೂ ಪ್ರಶಾಂತ್​ ಮೇಲೆ ಅಸಮಾಧಾನವಿದೆ. ಹೀಗಾಗಿಯೇ, ಅವರಿಂದ ಆದಷ್ಟು ದೂರ ಇರೋಕೆ ಇಷ್ಟಪಡುತ್ತಾರೆ. ಮಾಡಿದ್ದು ತಪ್ಪು ಎಂದು ಯಾರಾದರೂ ಎತ್ತಿ ತೋರಿಸಿದರೆ, ಅವರಿಗೆ ಸಿಟ್ಟು ಬಂದು ಬಿಡುತ್ತದೆ. ಆದರೆ, ಮನೆಯಲ್ಲಿ ಅವರು ಸ್ಟ್ರಾಂಗ್​ ಸ್ಪರ್ಧಿ ಆಗಿದ್ದರಿಂದಲೇ ಪ್ರತಿ ಬಾರಿಯೂ ಎಲಿಮಿನೇಷನ್​ಗೆ ನಾಮಿನೇಟ್​ ಆದರೂ ಬಚಾವ್​ ಆಗುತ್ತಿದ್ದಾರೆ.

ಪ್ರಶಾಂತ್​ ಸಂಬರಗಿ ವೀಕ್​ನೆಸ್​ ಮನೆಯವರಿಗೆ ಗೊತ್ತಾಗಿಹೋಯ್ತು; ಇನ್ನು ಎಲ್ಲವೂ ಸುಲಭ
ಪ್ರಶಾಂತ್​ ಸಂಬರಗಿ
ರಾಜೇಶ್ ದುಗ್ಗುಮನೆ
| Edited By: |

Updated on: Apr 08, 2021 | 7:26 AM

Share

ಪ್ರಶಾಂತ್​ ಸಂಬರಗಿ ಬಿಗ್​ ಬಾಸ್​ ಮನೆ ಸೇರಿರುವ ಸ್ಟ್ರಾಂಗ್​ ಕಂಟೆಸ್ಟಂಟ್​​​​ಗಳಲ್ಲಿ ಒಬ್ಬರು. ಮಾತಿಗೆ ನಿಂತರೆ ಅವರನ್ನು ಸೋಲಿಸೋದು ಅಷ್ಟು ಸುಲಭ ಅಲ್ಲವೇ ಅಲ್ಲ. ಅವರು ಜಗಳವಾಡೋಕೆ ಇಳಿದರಂತೂ ಮುಗಿದೇ ಹೋಯಿತು. ಅವರ ಎದುರು ನಿಲ್ಲೋಕೆ ಎಲ್ಲರೂ ಭಯ ಪಡುತ್ತಾರೆ. ಆದರೆ, ಈಗ ಪ್ರಶಾಂತ್​ ಸಂಬರಗಿ ವೀಕ್​ನೆಸ್​ ಮನೆ ಮಂದಿಗೆಲ್ಲ ಗೊತ್ತಾಗಿದೆ. ಇನ್ನು ಮುಂದಿನ ಆಟಗಳೆಲ್ಲವೂ ತುಂಬಾನೇ ಸುಲಭ ಎಂದು ಮನೆ ಮಂದಿ ಖುಷಿಯಾಗಿದ್ದಾರೆ. ಬಿಗ್​ ಬಾಸ್ ಮನೆಯಲ್ಲಿ ಎಲ್ಲಾ ಸ್ಪರ್ಧಿಗಳಿಗೂ ಪ್ರಶಾಂತ್​ ಮೇಲೆ ಅಸಮಾಧಾನವಿದೆ. ಹೀಗಾಗಿಯೇ, ಅವರಿಂದ ಆದಷ್ಟು ದೂರ ಇರೋಕೆ ಇಷ್ಟಪಡುತ್ತಾರೆ. ಮಾಡಿದ್ದು ತಪ್ಪು ಎಂದು ಯಾರಾದರೂ ಎತ್ತಿ ತೋರಿಸಿದರೆ, ಅವರಿಗೆ ಸಿಟ್ಟು ಬಂದು ಬಿಡುತ್ತದೆ. ಮನೆಯಲ್ಲಿ ಅವರು ಸ್ಟ್ರಾಂಗ್​ ಸ್ಪರ್ಧಿ ಆಗಿದ್ದರಿಂದಲೇ ಪ್ರತಿ ಬಾರಿಯೂ ಎಲಿಮಿನೇಷನ್​ಗೆ ನಾಮಿನೇಟ್​ ಆದರೂ ಬಚಾವ್​ ಆಗುತ್ತಿದ್ದಾರೆ. ಆದರೆ, ಪ್ರತಿ ವ್ಯಕ್ತಿಗೂ ಒಂದು ಮೈನಸ್​ ಪಾಯಿಂಟ್​ ಅನ್ನೋದು ಇದ್ದೇ ಇರುತ್ತದೆ. ಇದಕ್ಕೆ ಪ್ರಶಾಂತ್​ ಕೂಡ ಹೊರತಾಗಿಲ್ಲ.

ಪ್ರಶಾಂತ್​ ಸಂಬರಗಿ ಯಾವುದೇ ಟಾಸ್ಕ್​ ನೀಡಲಿ ಅದನ್ನು ಸರಿಯಾಗಿ ಆಡಿದ ಉದಾಹರಣೆ ತುಂಬಾನೇ ಕಡಿಮೆ. ಇದು ಮನೆ ಮಂದಿಗೆಲ್ಲ ಗೊತ್ತಾಗಿದೆ. ಕೆಲ ವಾರಗಳ ಹಿಂದೆ ಟಾಸ್ಕ್​ ಒಂದರಲ್ಲಿ ರಘು ಗೌಡ ತಪ್ಪು ಮಾಡಿದಾಗ ಅದನ್ನು ಹೀಯಾಳಿಸಿ ನಕ್ಕಿದ್ದರು. ಆದರೆ, ಅಲ್ಲಿ ಅವರೇ ಟಾಸ್ಕ್​ ಮಾಡುವಾಗ ಎಡವಿದ್ದರು.

ಏಪ್ರಿಲ್​​ 7 ರ ಸಂಚಿಕೆಯಲ್ಲೂ ಇದೇ ರೀತಿ ಆಗಿದೆ. ಪ್ರಶಾಂತ್​ ಗೇಮ್​ ಆಡುವಾಗ ಕಳಪೆ ಪ್ರದರ್ಶನ ನೀಡಿದ್ದಾರೆ. ಇದನ್ನು ಪ್ರಶಾಂತ್​ ಕೂಡ ಒಪ್ಪಿಕೊಂಡಿದ್ದಾರೆ. ನಾನು ಕಳಪೆಯಾಗಿ ಆಟವಾಡಿದ್ದೇನೆ. ಇದಕ್ಕೆ ಕ್ಷಮೆಯಾಚಿಸುತ್ತೇನೆ ಎಂದರು. ಮನೆ ಮಂದಿ ಕೂಡ ಈ ಬಗ್ಗೆ ಚರ್ಚೆ ಮಾಡಿದ್ದಾರೆ. ಪ್ರಶಾಂತ್​ ವೈಯಕ್ತಿಕವಾಗಿ ಟಾಸ್ಕ್​ ಅನ್ನು ಸರಿಯಾಗಿ ನಿಭಾಯಿಸುವುದಿಲ್ಲ. ಅವರು ಗುಂಪಿನಲ್ಲಿದ್ದಾಗ ಮಾತ್ರ ಹುಲಿ ಎಂದು ಹೀಯಾಳಿಸಿದರು.

ಇಷ್ಟು ದಿನ ಮನೆಯಲ್ಲಿರುವ ಪ್ರಶಾಂತ್​ ಅವರ ಮೈನಸ್​ ಪಾಯಿಂಟ್​ಗಳು ಏನು ಎನ್ನುವುದು ಅನೇಕರಿಗೆ ಗೊತ್ತೇ ಇರಲಿಲ್ಲ. ಈಗ ಈ ವಿಚಾರ ತಿಳಿದು ಮನೆ ಮಂದಿಗೆ ಒಂದು ಅಸ್ತ್ರ ಸಿಕ್ಕಂತಾಗಿದೆ.

ಇದನ್ನೂ ಓದಿ: Bigg Boss Kannada: ಕಳ್ಳ​ ನನ್ಮಗ ಎಂದು ಪ್ರಶಾಂತ್​ಗೆ ಬೈಯ್ದ ನಿಧಿ! ಅಚ್ಚರಿ ಹುಟ್ಟಿಸಿದ ಸಂಬರಗಿ ಪ್ರತಿಕ್ರಿಯೆ

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ