AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ಸಂಬರಗಿ ವೀಕ್​ನೆಸ್​ ಮನೆಯವರಿಗೆ ಗೊತ್ತಾಗಿಹೋಯ್ತು; ಇನ್ನು ಎಲ್ಲವೂ ಸುಲಭ

ಬಿಗ್​ ಬಾಸ್ ಮನೆಯಲ್ಲಿ ಎಲ್ಲಾ ಸ್ಪರ್ಧಿಗಳಿಗೂ ಪ್ರಶಾಂತ್​ ಮೇಲೆ ಅಸಮಾಧಾನವಿದೆ. ಹೀಗಾಗಿಯೇ, ಅವರಿಂದ ಆದಷ್ಟು ದೂರ ಇರೋಕೆ ಇಷ್ಟಪಡುತ್ತಾರೆ. ಮಾಡಿದ್ದು ತಪ್ಪು ಎಂದು ಯಾರಾದರೂ ಎತ್ತಿ ತೋರಿಸಿದರೆ, ಅವರಿಗೆ ಸಿಟ್ಟು ಬಂದು ಬಿಡುತ್ತದೆ. ಆದರೆ, ಮನೆಯಲ್ಲಿ ಅವರು ಸ್ಟ್ರಾಂಗ್​ ಸ್ಪರ್ಧಿ ಆಗಿದ್ದರಿಂದಲೇ ಪ್ರತಿ ಬಾರಿಯೂ ಎಲಿಮಿನೇಷನ್​ಗೆ ನಾಮಿನೇಟ್​ ಆದರೂ ಬಚಾವ್​ ಆಗುತ್ತಿದ್ದಾರೆ.

ಪ್ರಶಾಂತ್​ ಸಂಬರಗಿ ವೀಕ್​ನೆಸ್​ ಮನೆಯವರಿಗೆ ಗೊತ್ತಾಗಿಹೋಯ್ತು; ಇನ್ನು ಎಲ್ಲವೂ ಸುಲಭ
ಪ್ರಶಾಂತ್​ ಸಂಬರಗಿ
ರಾಜೇಶ್ ದುಗ್ಗುಮನೆ
| Edited By: |

Updated on: Apr 08, 2021 | 7:26 AM

Share

ಪ್ರಶಾಂತ್​ ಸಂಬರಗಿ ಬಿಗ್​ ಬಾಸ್​ ಮನೆ ಸೇರಿರುವ ಸ್ಟ್ರಾಂಗ್​ ಕಂಟೆಸ್ಟಂಟ್​​​​ಗಳಲ್ಲಿ ಒಬ್ಬರು. ಮಾತಿಗೆ ನಿಂತರೆ ಅವರನ್ನು ಸೋಲಿಸೋದು ಅಷ್ಟು ಸುಲಭ ಅಲ್ಲವೇ ಅಲ್ಲ. ಅವರು ಜಗಳವಾಡೋಕೆ ಇಳಿದರಂತೂ ಮುಗಿದೇ ಹೋಯಿತು. ಅವರ ಎದುರು ನಿಲ್ಲೋಕೆ ಎಲ್ಲರೂ ಭಯ ಪಡುತ್ತಾರೆ. ಆದರೆ, ಈಗ ಪ್ರಶಾಂತ್​ ಸಂಬರಗಿ ವೀಕ್​ನೆಸ್​ ಮನೆ ಮಂದಿಗೆಲ್ಲ ಗೊತ್ತಾಗಿದೆ. ಇನ್ನು ಮುಂದಿನ ಆಟಗಳೆಲ್ಲವೂ ತುಂಬಾನೇ ಸುಲಭ ಎಂದು ಮನೆ ಮಂದಿ ಖುಷಿಯಾಗಿದ್ದಾರೆ. ಬಿಗ್​ ಬಾಸ್ ಮನೆಯಲ್ಲಿ ಎಲ್ಲಾ ಸ್ಪರ್ಧಿಗಳಿಗೂ ಪ್ರಶಾಂತ್​ ಮೇಲೆ ಅಸಮಾಧಾನವಿದೆ. ಹೀಗಾಗಿಯೇ, ಅವರಿಂದ ಆದಷ್ಟು ದೂರ ಇರೋಕೆ ಇಷ್ಟಪಡುತ್ತಾರೆ. ಮಾಡಿದ್ದು ತಪ್ಪು ಎಂದು ಯಾರಾದರೂ ಎತ್ತಿ ತೋರಿಸಿದರೆ, ಅವರಿಗೆ ಸಿಟ್ಟು ಬಂದು ಬಿಡುತ್ತದೆ. ಮನೆಯಲ್ಲಿ ಅವರು ಸ್ಟ್ರಾಂಗ್​ ಸ್ಪರ್ಧಿ ಆಗಿದ್ದರಿಂದಲೇ ಪ್ರತಿ ಬಾರಿಯೂ ಎಲಿಮಿನೇಷನ್​ಗೆ ನಾಮಿನೇಟ್​ ಆದರೂ ಬಚಾವ್​ ಆಗುತ್ತಿದ್ದಾರೆ. ಆದರೆ, ಪ್ರತಿ ವ್ಯಕ್ತಿಗೂ ಒಂದು ಮೈನಸ್​ ಪಾಯಿಂಟ್​ ಅನ್ನೋದು ಇದ್ದೇ ಇರುತ್ತದೆ. ಇದಕ್ಕೆ ಪ್ರಶಾಂತ್​ ಕೂಡ ಹೊರತಾಗಿಲ್ಲ.

ಪ್ರಶಾಂತ್​ ಸಂಬರಗಿ ಯಾವುದೇ ಟಾಸ್ಕ್​ ನೀಡಲಿ ಅದನ್ನು ಸರಿಯಾಗಿ ಆಡಿದ ಉದಾಹರಣೆ ತುಂಬಾನೇ ಕಡಿಮೆ. ಇದು ಮನೆ ಮಂದಿಗೆಲ್ಲ ಗೊತ್ತಾಗಿದೆ. ಕೆಲ ವಾರಗಳ ಹಿಂದೆ ಟಾಸ್ಕ್​ ಒಂದರಲ್ಲಿ ರಘು ಗೌಡ ತಪ್ಪು ಮಾಡಿದಾಗ ಅದನ್ನು ಹೀಯಾಳಿಸಿ ನಕ್ಕಿದ್ದರು. ಆದರೆ, ಅಲ್ಲಿ ಅವರೇ ಟಾಸ್ಕ್​ ಮಾಡುವಾಗ ಎಡವಿದ್ದರು.

ಏಪ್ರಿಲ್​​ 7 ರ ಸಂಚಿಕೆಯಲ್ಲೂ ಇದೇ ರೀತಿ ಆಗಿದೆ. ಪ್ರಶಾಂತ್​ ಗೇಮ್​ ಆಡುವಾಗ ಕಳಪೆ ಪ್ರದರ್ಶನ ನೀಡಿದ್ದಾರೆ. ಇದನ್ನು ಪ್ರಶಾಂತ್​ ಕೂಡ ಒಪ್ಪಿಕೊಂಡಿದ್ದಾರೆ. ನಾನು ಕಳಪೆಯಾಗಿ ಆಟವಾಡಿದ್ದೇನೆ. ಇದಕ್ಕೆ ಕ್ಷಮೆಯಾಚಿಸುತ್ತೇನೆ ಎಂದರು. ಮನೆ ಮಂದಿ ಕೂಡ ಈ ಬಗ್ಗೆ ಚರ್ಚೆ ಮಾಡಿದ್ದಾರೆ. ಪ್ರಶಾಂತ್​ ವೈಯಕ್ತಿಕವಾಗಿ ಟಾಸ್ಕ್​ ಅನ್ನು ಸರಿಯಾಗಿ ನಿಭಾಯಿಸುವುದಿಲ್ಲ. ಅವರು ಗುಂಪಿನಲ್ಲಿದ್ದಾಗ ಮಾತ್ರ ಹುಲಿ ಎಂದು ಹೀಯಾಳಿಸಿದರು.

ಇಷ್ಟು ದಿನ ಮನೆಯಲ್ಲಿರುವ ಪ್ರಶಾಂತ್​ ಅವರ ಮೈನಸ್​ ಪಾಯಿಂಟ್​ಗಳು ಏನು ಎನ್ನುವುದು ಅನೇಕರಿಗೆ ಗೊತ್ತೇ ಇರಲಿಲ್ಲ. ಈಗ ಈ ವಿಚಾರ ತಿಳಿದು ಮನೆ ಮಂದಿಗೆ ಒಂದು ಅಸ್ತ್ರ ಸಿಕ್ಕಂತಾಗಿದೆ.

ಇದನ್ನೂ ಓದಿ: Bigg Boss Kannada: ಕಳ್ಳ​ ನನ್ಮಗ ಎಂದು ಪ್ರಶಾಂತ್​ಗೆ ಬೈಯ್ದ ನಿಧಿ! ಅಚ್ಚರಿ ಹುಟ್ಟಿಸಿದ ಸಂಬರಗಿ ಪ್ರತಿಕ್ರಿಯೆ

Follow Us
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ