AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಘು-ವಿಶ್ವಗೆ ಬಿಗ್​ ಬಾಸ್​ ಮನೆಯಲ್ಲಿ ಮಾಡುತ್ತಿರುವ ದೊಡ್ಡ ತಪ್ಪಿನ ಅರಿವಾಗಿದೆ!

ಇತ್ತೀಚೆಗೆ ಬಿಗ್​ ಬಾಸ್​ ಮನೆಯಲ್ಲಿ ರಘು ಮತ್ತು ವಿಶ್ವ ಒಟ್ಟಾಗಿ ಇರುತ್ತಿದ್ದಾರೆ. ಇಬ್ಬರೂ ಅನೇಕ ವಿಚಾರಗಳ ಕುರಿತು ಚರ್ಚೆ ಮಾಡುತ್ತಿರುತ್ತಾರೆ. ಮುಂದೆ ಟಾಸ್ಕ್​ ಹೇಗೆ ಮಾಡಬೇಕು ಎನ್ನುವ ಚರ್ಚೆ ಮಾಡುತ್ತಿರುತ್ತಾರೆ.

ರಘು-ವಿಶ್ವಗೆ ಬಿಗ್​ ಬಾಸ್​ ಮನೆಯಲ್ಲಿ ಮಾಡುತ್ತಿರುವ ದೊಡ್ಡ ತಪ್ಪಿನ ಅರಿವಾಗಿದೆ!
ರಘು ಗೌಡ - ಬಿಗ್​ ಬಾಸ್
ರಾಜೇಶ್ ದುಗ್ಗುಮನೆ
| Edited By: |

Updated on: Mar 23, 2021 | 7:38 AM

Share

ಬಿಗ್​ ಬಾಸ್​ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ಕೆಲವರು ಈಗಾಗಲೇ ಮನೆಯಲ್ಲಿ ಫೇವರಿಟ್​ ಸ್ಪರ್ಧಿ ಎನ್ನುವ ಪಟ್ಟ ಪಡೆದುಕೊಂಡಿದ್ದಾರೆ. ಇನ್ನೂ ಕೆಲವರು ಆಟವನ್ನೇ ಸ್ಟಾರ್ಟ್​ ಮಾಡಿಲ್ಲ ಎನ್ನುವ ಮಾತು ಕೇಳಿ ಬಂದಿದೆ. ಇಂಥ ಸಂದರ್ಭದಲ್ಲಿ ರಘು ಹಾಗೂ ವಿಶ್ವಗೆ ದೊಡ್ಡ ತಪ್ಪಿನ ಅರಿವಾಗಿದೆ. ಇದನ್ನು ತಿದ್ದುಕೊಳ್ಳೋಕೆ ಪರಿಹಾರ ಕೂಡ ಕಂಡುಕೊಂಡಿದ್ದಾರೆ. ಇತ್ತೀಚೆಗೆ ಬಿಗ್​ ಬಾಸ್​ ಮನೆಯಲ್ಲಿ ರಘು ಮತ್ತು ವಿಶ್ವ ಒಟ್ಟಾಗಿ ಇರುತ್ತಿದ್ದಾರೆ. ಇಬ್ಬರೂ ಅನೇಕ ವಿಚಾರಗಳ ಕುರಿತು ಚರ್ಚೆ ಮಾಡುತ್ತಿರುತ್ತಾರೆ. ಮುಂದೆ ಟಾಸ್ಕ್​ ಹೇಗೆ ಮಾಡಬೇಕು ಎನ್ನುವ ಚರ್ಚೆ ಮಾಡುತ್ತಿರುತ್ತಾರೆ. ಈಗ ಇಬ್ಬರೂ ಬಿಗ್​ ಬಾಸ್​ ಮನೆಯಲ್ಲಿ ಮಾಡುತ್ತಿರುವ ತಪ್ಪಿನ ಬಗ್ಗೆ ಹೇಳಿಕೊಂಡಿದ್ದಾರೆ.

ಬಿಗ್​ ಬಾಸ್​​ಗೆ ಬರುವ ಅನೇಕ ಸ್ಪರ್ಧಿಗಳು ನಾನು ಫಿನಾಲೆವರೆಗೂ ಇರುತ್ತೇನೆ ಎನ್ನುವ ಉದ್ದೇಶ ಇಟ್ಟುಕೊಂಡು ಬರುತ್ತಾರೆ. ಇನ್ನೂ ಕೆಲ ಸ್ಪರ್ಧಿಗಳು ಎಷ್ಟು ದಿನ ಆಗತ್ತೋ ಅಷ್ಟು ದಿನ ಇರೋಣ ಎನ್ನುವ ಉದ್ದೇಶ ಇಟ್ಟುಕೊಂಡು ಬರುತ್ತಾರೆ. ಇದು ಪ್ರತಿ ಬಾರಿಯೂ ಆಗುವಂಥದ್ದೇ. ಇದೇ ಎಲ್ಲಾ ಸ್ಪರ್ಧಿಗಳು ಮಾಡುವ ದೊಡ್ಡ ತಪ್ಪು ಎಂದು ಅಭಿಪ್ರಾಯಪಟ್ಟಿದ್ದಾರೆ ರಘು.

ಬಿಗ್​ ಬಾಸ್​ ಮನೆಗೆ ಬರುವಾಗ ನಾವು ಇದ್ದಷ್ಟು ದಿನ ಚೆನ್ನಾಗಿ ಇರೋಣ ಎಂದುಕೊಂಡು ಬರುತ್ತೇವೆ. ಆದರೆ, ನಾವು ಮಾಡುವ ದೊಡ್ಡ ತಪ್ಪು ಇದು. ಬಿಗ್​ ಬಾಸ್​ಗೆ ಬಂದಮೇಲೆ ಕೊನೆವರೆಗೂ ಇರಬೇಕು ಎನ್ನುವ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕು. ಇರುವಷ್ಟು ದಿನ ಇದ್ರೆ ಆಯ್ತು ಎನ್ನುವ ಮನಸ್ಥಿತಿ ಇದ್ದರೆ ಗೆಲ್ಲೋಕೆ ಸಾಧ್ಯವಿಲ್ಲ. ಇದು ನಾವು ಮಾಡುತ್ತಿರುವ ದೊಡ್ಡ ತಪ್ಪು ಎಂದರು. ಈ ವಿಚಾರ ವಿಶ್ವ ಅವರಿಗೂ ಹೌದು ಎನಿಸಿದೆ. ಅಲ್ಲದೆ, ಈ ತಪ್ಪನ್ನು ತಿದ್ದಿಕೊಳ್ಳುವ ಭರವಸೆಯನ್ನು ಪರಸ್ಪರ ನೀಡಿಕೊಂಡಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಕೂದಲಿಗೆ ಕತ್ತರಿ! ಇದು ಹೊಸಾ ಪನಿಶ್​ಮೆಂಟ್​?

ಈ ಸಲ ಕಪ್​ ನಮ್ಮದೇ ಎಂದ ಬಿಗ್​ ಬಾಸ್​ ಸ್ಪರ್ಧಿಗೆ ಕಾದಿತ್ತು ಶಿಕ್ಷೆ!

Follow Us
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ