Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಘು-ವಿಶ್ವಗೆ ಬಿಗ್​ ಬಾಸ್​ ಮನೆಯಲ್ಲಿ ಮಾಡುತ್ತಿರುವ ದೊಡ್ಡ ತಪ್ಪಿನ ಅರಿವಾಗಿದೆ!

ಇತ್ತೀಚೆಗೆ ಬಿಗ್​ ಬಾಸ್​ ಮನೆಯಲ್ಲಿ ರಘು ಮತ್ತು ವಿಶ್ವ ಒಟ್ಟಾಗಿ ಇರುತ್ತಿದ್ದಾರೆ. ಇಬ್ಬರೂ ಅನೇಕ ವಿಚಾರಗಳ ಕುರಿತು ಚರ್ಚೆ ಮಾಡುತ್ತಿರುತ್ತಾರೆ. ಮುಂದೆ ಟಾಸ್ಕ್​ ಹೇಗೆ ಮಾಡಬೇಕು ಎನ್ನುವ ಚರ್ಚೆ ಮಾಡುತ್ತಿರುತ್ತಾರೆ.

ರಘು-ವಿಶ್ವಗೆ ಬಿಗ್​ ಬಾಸ್​ ಮನೆಯಲ್ಲಿ ಮಾಡುತ್ತಿರುವ ದೊಡ್ಡ ತಪ್ಪಿನ ಅರಿವಾಗಿದೆ!
ರಘು ಗೌಡ - ಬಿಗ್​ ಬಾಸ್
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Mar 23, 2021 | 7:38 AM

ಬಿಗ್​ ಬಾಸ್​ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ಕೆಲವರು ಈಗಾಗಲೇ ಮನೆಯಲ್ಲಿ ಫೇವರಿಟ್​ ಸ್ಪರ್ಧಿ ಎನ್ನುವ ಪಟ್ಟ ಪಡೆದುಕೊಂಡಿದ್ದಾರೆ. ಇನ್ನೂ ಕೆಲವರು ಆಟವನ್ನೇ ಸ್ಟಾರ್ಟ್​ ಮಾಡಿಲ್ಲ ಎನ್ನುವ ಮಾತು ಕೇಳಿ ಬಂದಿದೆ. ಇಂಥ ಸಂದರ್ಭದಲ್ಲಿ ರಘು ಹಾಗೂ ವಿಶ್ವಗೆ ದೊಡ್ಡ ತಪ್ಪಿನ ಅರಿವಾಗಿದೆ. ಇದನ್ನು ತಿದ್ದುಕೊಳ್ಳೋಕೆ ಪರಿಹಾರ ಕೂಡ ಕಂಡುಕೊಂಡಿದ್ದಾರೆ. ಇತ್ತೀಚೆಗೆ ಬಿಗ್​ ಬಾಸ್​ ಮನೆಯಲ್ಲಿ ರಘು ಮತ್ತು ವಿಶ್ವ ಒಟ್ಟಾಗಿ ಇರುತ್ತಿದ್ದಾರೆ. ಇಬ್ಬರೂ ಅನೇಕ ವಿಚಾರಗಳ ಕುರಿತು ಚರ್ಚೆ ಮಾಡುತ್ತಿರುತ್ತಾರೆ. ಮುಂದೆ ಟಾಸ್ಕ್​ ಹೇಗೆ ಮಾಡಬೇಕು ಎನ್ನುವ ಚರ್ಚೆ ಮಾಡುತ್ತಿರುತ್ತಾರೆ. ಈಗ ಇಬ್ಬರೂ ಬಿಗ್​ ಬಾಸ್​ ಮನೆಯಲ್ಲಿ ಮಾಡುತ್ತಿರುವ ತಪ್ಪಿನ ಬಗ್ಗೆ ಹೇಳಿಕೊಂಡಿದ್ದಾರೆ.

ಬಿಗ್​ ಬಾಸ್​​ಗೆ ಬರುವ ಅನೇಕ ಸ್ಪರ್ಧಿಗಳು ನಾನು ಫಿನಾಲೆವರೆಗೂ ಇರುತ್ತೇನೆ ಎನ್ನುವ ಉದ್ದೇಶ ಇಟ್ಟುಕೊಂಡು ಬರುತ್ತಾರೆ. ಇನ್ನೂ ಕೆಲ ಸ್ಪರ್ಧಿಗಳು ಎಷ್ಟು ದಿನ ಆಗತ್ತೋ ಅಷ್ಟು ದಿನ ಇರೋಣ ಎನ್ನುವ ಉದ್ದೇಶ ಇಟ್ಟುಕೊಂಡು ಬರುತ್ತಾರೆ. ಇದು ಪ್ರತಿ ಬಾರಿಯೂ ಆಗುವಂಥದ್ದೇ. ಇದೇ ಎಲ್ಲಾ ಸ್ಪರ್ಧಿಗಳು ಮಾಡುವ ದೊಡ್ಡ ತಪ್ಪು ಎಂದು ಅಭಿಪ್ರಾಯಪಟ್ಟಿದ್ದಾರೆ ರಘು.

ಬಿಗ್​ ಬಾಸ್​ ಮನೆಗೆ ಬರುವಾಗ ನಾವು ಇದ್ದಷ್ಟು ದಿನ ಚೆನ್ನಾಗಿ ಇರೋಣ ಎಂದುಕೊಂಡು ಬರುತ್ತೇವೆ. ಆದರೆ, ನಾವು ಮಾಡುವ ದೊಡ್ಡ ತಪ್ಪು ಇದು. ಬಿಗ್​ ಬಾಸ್​ಗೆ ಬಂದಮೇಲೆ ಕೊನೆವರೆಗೂ ಇರಬೇಕು ಎನ್ನುವ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕು. ಇರುವಷ್ಟು ದಿನ ಇದ್ರೆ ಆಯ್ತು ಎನ್ನುವ ಮನಸ್ಥಿತಿ ಇದ್ದರೆ ಗೆಲ್ಲೋಕೆ ಸಾಧ್ಯವಿಲ್ಲ. ಇದು ನಾವು ಮಾಡುತ್ತಿರುವ ದೊಡ್ಡ ತಪ್ಪು ಎಂದರು. ಈ ವಿಚಾರ ವಿಶ್ವ ಅವರಿಗೂ ಹೌದು ಎನಿಸಿದೆ. ಅಲ್ಲದೆ, ಈ ತಪ್ಪನ್ನು ತಿದ್ದಿಕೊಳ್ಳುವ ಭರವಸೆಯನ್ನು ಪರಸ್ಪರ ನೀಡಿಕೊಂಡಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಕೂದಲಿಗೆ ಕತ್ತರಿ! ಇದು ಹೊಸಾ ಪನಿಶ್​ಮೆಂಟ್​?

ಈ ಸಲ ಕಪ್​ ನಮ್ಮದೇ ಎಂದ ಬಿಗ್​ ಬಾಸ್​ ಸ್ಪರ್ಧಿಗೆ ಕಾದಿತ್ತು ಶಿಕ್ಷೆ!

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು