AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಘು-ವಿಶ್ವಗೆ ಬಿಗ್​ ಬಾಸ್​ ಮನೆಯಲ್ಲಿ ಮಾಡುತ್ತಿರುವ ದೊಡ್ಡ ತಪ್ಪಿನ ಅರಿವಾಗಿದೆ!

ಇತ್ತೀಚೆಗೆ ಬಿಗ್​ ಬಾಸ್​ ಮನೆಯಲ್ಲಿ ರಘು ಮತ್ತು ವಿಶ್ವ ಒಟ್ಟಾಗಿ ಇರುತ್ತಿದ್ದಾರೆ. ಇಬ್ಬರೂ ಅನೇಕ ವಿಚಾರಗಳ ಕುರಿತು ಚರ್ಚೆ ಮಾಡುತ್ತಿರುತ್ತಾರೆ. ಮುಂದೆ ಟಾಸ್ಕ್​ ಹೇಗೆ ಮಾಡಬೇಕು ಎನ್ನುವ ಚರ್ಚೆ ಮಾಡುತ್ತಿರುತ್ತಾರೆ.

ರಘು-ವಿಶ್ವಗೆ ಬಿಗ್​ ಬಾಸ್​ ಮನೆಯಲ್ಲಿ ಮಾಡುತ್ತಿರುವ ದೊಡ್ಡ ತಪ್ಪಿನ ಅರಿವಾಗಿದೆ!
ರಘು ಗೌಡ - ಬಿಗ್​ ಬಾಸ್
ರಾಜೇಶ್ ದುಗ್ಗುಮನೆ
| Edited By: |

Updated on: Mar 23, 2021 | 7:38 AM

Share

ಬಿಗ್​ ಬಾಸ್​ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ಕೆಲವರು ಈಗಾಗಲೇ ಮನೆಯಲ್ಲಿ ಫೇವರಿಟ್​ ಸ್ಪರ್ಧಿ ಎನ್ನುವ ಪಟ್ಟ ಪಡೆದುಕೊಂಡಿದ್ದಾರೆ. ಇನ್ನೂ ಕೆಲವರು ಆಟವನ್ನೇ ಸ್ಟಾರ್ಟ್​ ಮಾಡಿಲ್ಲ ಎನ್ನುವ ಮಾತು ಕೇಳಿ ಬಂದಿದೆ. ಇಂಥ ಸಂದರ್ಭದಲ್ಲಿ ರಘು ಹಾಗೂ ವಿಶ್ವಗೆ ದೊಡ್ಡ ತಪ್ಪಿನ ಅರಿವಾಗಿದೆ. ಇದನ್ನು ತಿದ್ದುಕೊಳ್ಳೋಕೆ ಪರಿಹಾರ ಕೂಡ ಕಂಡುಕೊಂಡಿದ್ದಾರೆ. ಇತ್ತೀಚೆಗೆ ಬಿಗ್​ ಬಾಸ್​ ಮನೆಯಲ್ಲಿ ರಘು ಮತ್ತು ವಿಶ್ವ ಒಟ್ಟಾಗಿ ಇರುತ್ತಿದ್ದಾರೆ. ಇಬ್ಬರೂ ಅನೇಕ ವಿಚಾರಗಳ ಕುರಿತು ಚರ್ಚೆ ಮಾಡುತ್ತಿರುತ್ತಾರೆ. ಮುಂದೆ ಟಾಸ್ಕ್​ ಹೇಗೆ ಮಾಡಬೇಕು ಎನ್ನುವ ಚರ್ಚೆ ಮಾಡುತ್ತಿರುತ್ತಾರೆ. ಈಗ ಇಬ್ಬರೂ ಬಿಗ್​ ಬಾಸ್​ ಮನೆಯಲ್ಲಿ ಮಾಡುತ್ತಿರುವ ತಪ್ಪಿನ ಬಗ್ಗೆ ಹೇಳಿಕೊಂಡಿದ್ದಾರೆ.

ಬಿಗ್​ ಬಾಸ್​​ಗೆ ಬರುವ ಅನೇಕ ಸ್ಪರ್ಧಿಗಳು ನಾನು ಫಿನಾಲೆವರೆಗೂ ಇರುತ್ತೇನೆ ಎನ್ನುವ ಉದ್ದೇಶ ಇಟ್ಟುಕೊಂಡು ಬರುತ್ತಾರೆ. ಇನ್ನೂ ಕೆಲ ಸ್ಪರ್ಧಿಗಳು ಎಷ್ಟು ದಿನ ಆಗತ್ತೋ ಅಷ್ಟು ದಿನ ಇರೋಣ ಎನ್ನುವ ಉದ್ದೇಶ ಇಟ್ಟುಕೊಂಡು ಬರುತ್ತಾರೆ. ಇದು ಪ್ರತಿ ಬಾರಿಯೂ ಆಗುವಂಥದ್ದೇ. ಇದೇ ಎಲ್ಲಾ ಸ್ಪರ್ಧಿಗಳು ಮಾಡುವ ದೊಡ್ಡ ತಪ್ಪು ಎಂದು ಅಭಿಪ್ರಾಯಪಟ್ಟಿದ್ದಾರೆ ರಘು.

ಬಿಗ್​ ಬಾಸ್​ ಮನೆಗೆ ಬರುವಾಗ ನಾವು ಇದ್ದಷ್ಟು ದಿನ ಚೆನ್ನಾಗಿ ಇರೋಣ ಎಂದುಕೊಂಡು ಬರುತ್ತೇವೆ. ಆದರೆ, ನಾವು ಮಾಡುವ ದೊಡ್ಡ ತಪ್ಪು ಇದು. ಬಿಗ್​ ಬಾಸ್​ಗೆ ಬಂದಮೇಲೆ ಕೊನೆವರೆಗೂ ಇರಬೇಕು ಎನ್ನುವ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕು. ಇರುವಷ್ಟು ದಿನ ಇದ್ರೆ ಆಯ್ತು ಎನ್ನುವ ಮನಸ್ಥಿತಿ ಇದ್ದರೆ ಗೆಲ್ಲೋಕೆ ಸಾಧ್ಯವಿಲ್ಲ. ಇದು ನಾವು ಮಾಡುತ್ತಿರುವ ದೊಡ್ಡ ತಪ್ಪು ಎಂದರು. ಈ ವಿಚಾರ ವಿಶ್ವ ಅವರಿಗೂ ಹೌದು ಎನಿಸಿದೆ. ಅಲ್ಲದೆ, ಈ ತಪ್ಪನ್ನು ತಿದ್ದಿಕೊಳ್ಳುವ ಭರವಸೆಯನ್ನು ಪರಸ್ಪರ ನೀಡಿಕೊಂಡಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಕೂದಲಿಗೆ ಕತ್ತರಿ! ಇದು ಹೊಸಾ ಪನಿಶ್​ಮೆಂಟ್​?

ಈ ಸಲ ಕಪ್​ ನಮ್ಮದೇ ಎಂದ ಬಿಗ್​ ಬಾಸ್​ ಸ್ಪರ್ಧಿಗೆ ಕಾದಿತ್ತು ಶಿಕ್ಷೆ!

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?