AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಪ್ರಿಯರಿಗೆ ಗುಡ್​ ನ್ಯೂಸ್; 6 ತಿಂಗಳು ನಡೆಯಲಿದೆ ದೊಡ್ಮನೆ ಶೋ

ಸಾಮಾನ್ಯವಾಗಿ ಬಿಗ್​ ಬಾಸ್​ 100ರಿಂದ 120 ದಿನಗಳ ಕಾಲ ನಡೆಯುತ್ತದೆ. ಅಂದರೆ ನಾಲ್ಕು ತಿಂಗಳಿಗೆ ಬಿಗ್​ ಬಾಸ್​ ಪೂರ್ಣಗೊಳ್ಳುತ್ತದೆ. ಅದರೆ, ಈಗ ಇದನ್ನು ಎರಡು ತಿಂಗಳು ಹೆಚ್ಚುವರಿಯಾಗಿ ನಡೆಸೋಕೆ ವಾಹಿನಿ ನಿರ್ಧರಿಸಿದೆ.

ಬಿಗ್​ ಬಾಸ್​ ಪ್ರಿಯರಿಗೆ ಗುಡ್​ ನ್ಯೂಸ್; 6 ತಿಂಗಳು ನಡೆಯಲಿದೆ ದೊಡ್ಮನೆ ಶೋ
ಬಿಗ್​ ಬಾಸ್
ರಾಜೇಶ್ ದುಗ್ಗುಮನೆ
| Edited By: |

Updated on: Jun 20, 2021 | 4:42 PM

Share

ರಿಯಾಲಿಟಿ ಶೋಗಳ ಪೈಕಿ ಬಿಗ್​ ಬಾಸ್​ ಈವರೆಗೂ ಬೇಡಿಕೆ ಉಳಿಸಿಕೊಂಡಿದೆ. ಹಿಂದಿಯಲ್ಲಿ ಯಶಸ್ವಿಯಾಗಿ 14 ಸೀಸನ್​ ಪೂರ್ಣಗೊಂಡರೆ, ಕನ್ನಡದಲ್ಲಿ 8ನೇ ಸೀಸನ್​ ಎರಡನೇ ಇನ್ನಿಂಗ್ಸ್​ ಆರಂಭಗೊಳ್ಳುತ್ತಿದೆ. ಈಗ ‘ಹಿಂದಿ ಬಿಗ್​ ಬಾಸ್​ ಸೀಸನ್​ 15’ ಸಿದ್ಧತೆ ನಡೆದಿದೆ. ಅಚ್ಚರಿ ವಿಚಾರ ಏಂದರೆ, ಈ ಸೀಸನ್​ ಬರೋಬ್ಬರಿ 6 ತಿಂಗಳು ಪ್ರಸಾರ ಆಗಲಿದೆಯಂತೆ.

ಸಾಮಾನ್ಯವಾಗಿ ಬಿಗ್​ ಬಾಸ್ ಪ್ರತೀ ಸೀಸನ್​ 100ರಿಂದ 120 ದಿನಗಳ ಕಾಲ ನಡೆಯುತ್ತದೆ. ಅಂದರೆ ನಾಲ್ಕು ತಿಂಗಳಿಗೆ ಬಿಗ್​ ಬಾಸ್​ ಪೂರ್ಣಗೊಳ್ಳುತ್ತದೆ. ಅದರೆ, ಈಗ ಇದನ್ನು ಎರಡು ತಿಂಗಳು ಹೆಚ್ಚುವರಿಯಾಗಿ ನಡೆಸೋಕೆ ವಾಹಿನಿ ನಿರ್ಧರಿಸಿದೆ. ‘ಹಿಂದಿ ಬಿಗ್​ ಬಾಸ್​ ಸೀಸನ್ 14’ ಉತ್ತಮ ಟಿಆರ್​ಪಿ ತಂದುಕೊಟ್ಟಿತ್ತು. ಪ್ರೇಕ್ಷಕರು ಇದನ್ನು ಇಷ್ಟಪಟ್ಟಿದ್ದರು. ಈ ಕಾರಣಕ್ಕೆ ಈ ಸೀಸನ್​ 180 ದಿನಗಳ ಕಾಲ ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.

ಸೀಸನ್​ 14 ಬರೋಬ್ಬರಿ 143 ದಿನಗಳ ಕಾಲ ಪ್ರಸಾರವಾಗಿತ್ತು. ವೀಕ್ಷಕರಿಗೆ ಎಲ್ಲಿಯೂ ಬೇಸರ ಬಾರದ ರೀತಿಯಲ್ಲಿ ಶೋ ನಡೆಸಿಕೊಡಲಾಗಿತ್ತು. ಈ ಬಾರಿ ರಿಯಾ ಚಕ್ರವರ್ತಿ ಸೇರಿ ಖ್ಯಾತ ಕಲಾವಿದರನ್ನು ಮನೆ ಒಳಗೆ ಕರೆತರೋಕೆ ಸಿದ್ಧತೆ ನಡೆದಿದೆ. ಆದರೆ, ಯಾವ ಹೆಸರೂ ಅಂತಿಮವಾಗಿಲ್ಲ. ಇನ್ನು, ಈ ಬಾರಿ ವೈಲ್ಡ್​ ಕಾರ್ಡ್​ ಎಂಟ್ರಿ ಹೆಚ್ಚಿರಲಿದೆ. ಸಲ್ಮಾನ್​ ಖಾನ್​​ ಅವರೇ ಈ ಬಾರಿ ಬಿಗ್​ ಬಾಸ್​ ನಡೆಸಿಕೊಡಲಿದ್ದಾರೆ. ಅವರ ನಿರೂಪಣೆ ಪ್ರೇಕ್ಷಕರಿಗೆ ಇಷ್ಟವಾಗಿದೆ. ಈ ಬಾರಿ ಅವರ ನಿರೂಪಣೆಯಲ್ಲಿ ಮತ್ತಷ್ಟು ಬದಲಾವಣೆ ಇರಲಿದೆ ಎನ್ನಲಾಗುತ್ತಿದೆ.

ಈಗತಾನೇ ಕೊವಿಡ್​ ಎರಡನೇ ಅಲೆ ತಣ್ಣಗಾಗುತ್ತಿದೆ. ಸಿನಿಮಾ ಶೂಟಿಂಗ್​ಗೆ ಅವಕಾಶ ನೀಡಲಾಗಿದೆ. ಈ ಕಾರಣಕ್ಕೆ ಶೀಘ್ರದಲ್ಲೇ ಹಿಂದಿ ಬಿಗ್​ ಬಾಸ್​ 15ನೇ ಸೀಸನ್​ ಆರಂಭವಾಗಲಿದೆ. ಯಾರ್ಯಾರು ಬಿಗ್​ ಬಾಸ್​ ಮನೆ ಸೇರಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ವೀಕ್ಷಕರದ್ದು.

ಕೊವಿಡ್​ ಎರಡನೇ ಅಲೆ ಕಾಣಿಸಿಕೊಂಡಿದ್ದರಿಂದ ಕನ್ನಡ ಬಿಗ್​ ಬಾಸ್​ ಸೀಸನ್​ 8 ಅರ್ಧಕ್ಕೆ ನಿಂತಿತ್ತು. ಆದರೆ, ಶೀಘ್ರವೇ ’ಬಿಗ್​ ಬಾಸ್ 8’ ಎರಡನೇ ಇನ್ನಿಂಗ್ಸ್​ ಆರಂಭವಾಗುತ್ತಿದೆ. 12 ಸ್ಪರ್ಧಿಗಳು ಈಗ ಮತ್ತೆ ಮನೆ ಒಳಗೆ ಸೇರುತ್ತಿದ್ದಾರೆ.

ಇದನ್ನೂ ಒದಿ: Bigg Boss Kannada Season 8: ಇನ್ನು ಕೇವಲ ಐದೇ ದಿನದಲ್ಲಿ ಮತ್ತೆ ಆರಂಭವಾಗಲಿದೆ ಕನ್ನಡ ‘ಬಿಗ್​ ಬಾಸ್​ ಸೀಸನ್​ 8’

ಸಂಚಾರಿ ವಿಜಯ್ ಹೆಸರಿನಲ್ಲಿ ದೇವರು ಮೆಚ್ಚುವ ಕೆಲಸ ಮಾಡಿದ ಬಿಗ್​ ಬಾಸ್​ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್​

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ