AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾದಕ ವಸ್ತು ಪ್ರಕರಣದಲ್ಲಿ ಬಿಗ್​ಬಾಸ್ ರನ್ನರ್ ಅಪ್ ಬಂಧನ

Hyderabad Police: ಬಿಗ್​ಬಾಸ್ ರನ್ನರ್ ಅಪ್, ಯೂಟೂಬರ್ ಷಣ್ಮುಖ್ ಅನ್ನು ಮಾದಕ ವಸ್ತು ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆತನ ಸಹೋದರನನ್ನು ಯುವತಿಗೆ ಮೋಸ ಮಾಡಿದ ಪ್ರಕರಣದಲ್ಲಿ ಬಂಧಿಸಲಾಗಿದೆ.

ಮಾದಕ ವಸ್ತು ಪ್ರಕರಣದಲ್ಲಿ ಬಿಗ್​ಬಾಸ್ ರನ್ನರ್ ಅಪ್ ಬಂಧನ
ಮಂಜುನಾಥ ಸಿ.
|

Updated on: Feb 24, 2024 | 6:08 PM

Share

ಸಾಮಾಜಿಕ ಜಾಲತಾಣಗಳಿಂದಾಗಿ (Social Media) ಜನಪ್ರಿಯತೆ ಎಂಬುದು ಸುಲಭವಾಗಿಬಿಟ್ಟಿದೆ. ಮುಂಚೆ ಜನಪ್ರಿಯತೆ ಗಳಿಸಲು ನಿಜವಾಗಿಯೂ ಒಳ್ಳೆಯ ಕಲಾವಿದರಾಗಬೇಕಿರುತ್ತಿತ್ತು, ವಿದ್ಯಾವಂತರಾಗಬೇಕಿತ್ತು, ಆದರೆ ರೀಲ್ಸ್​ಗಳು ಬಂದ ಮೇಲೆ ಚಿತ್ರ ವಿಚಿತ್ರವಾಗಿ ಆಡುವವರು ಸಹ ಸೆಲೆಬ್ರಿಟಿಗಳಾಗಿಬಿಡುತ್ತಿದ್ದಾರೆ. ಆದರೆ ಹಲವರು ತಮಗೆ ಒದಗಿಬಂದ ಈ ಅಚಾನಕ್ ಜನಪ್ರಿಯತೆಯನ್ನು ಸಂಭಾಳಿಸಲಾಗದೆ ಅಡ್ಡದಾರಿ ಹಿಡಿಯುತ್ತಿದ್ದಾರೆ. ಇದೇ ರೀತಿ ಹಠಾತ್ ಜನಪ್ರಿಯತೆ ಗಳಿಸಿ ಬಿಗ್​ಬಾಸ್​ಗೂ ಹೋಗಿ ಬಂದ ಯುವಕನೊಬ್ಬ ಈಗ ಮಾದಕ ವಸ್ತು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾನೆ.

ಯೂಟ್ಯೂಬ್ ವಿಡಿಯೋಗಳ ಮೂಲಕ ಜನಪ್ರಿಯತೆ ಗಳಿಸಿ, ಬಳಿಕ ತೆಲುಗು ಬಿಗ್​ಬಾಸ್​ಗೆ ಹೋಗಿ ರನ್ನರ್ ಅಪ್ ಆದ ಷಣ್ಮುಕ್ ಜಸ್ವಂತ್ ಅನ್ನು ಮಾದಕ ವಸ್ತು ಬಳಕೆ ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಷಣ್ಮುಕ್ ಜಸ್ವಂತ್ ಸಹೋದರನ್ನು ಯುವತಿಗೆ ಮೋಸ ಮಾಡಿದ ಪ್ರಕರಣದಲ್ಲಿ ಅದೇ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:ಪ್ರತಿಭಾವಂತ ಹುಡುಗಿಗೆ ಕೊಟ್ಟ ಮಾತು ಉಳಿಸಿಕೊಂಡ ವಿಜಯ್​ ದೇವರಕೊಂಡ; ಷಣ್ಮುಖಪ್ರಿಯಾಗೆ ಸಿಕ್ತು ಚಾನ್ಸ್​​

ವೈದ್ಯೆ ಮೌನಿಕಾ ಎಂಬ ಮಹಿಳೆಗೆ ಮೋಸ ಮಾಡಿ ಇನ್ನೊಂದು ಮದುವೆಗೆ ಸಜ್ಜಾಗಿದ್ದ ಷಣ್ಮುಕ್ ಸಹೋದರ ಸಂಪತ್ ವಿನಯ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಯೂಟ್ಯೂಬರ್, ಮಾಜಿ ಬಿಗ್​ಬಾಸ್ ಸ್ಪರ್ಧಿ ಷಣ್ಮುಖ್ ಅನ್ನು ಗಾಂಜಾ ಪ್ರಕರಣದಲ್ಲಿ ಬಂಧನಕ್ಕೆ ಒಳಪಡಿಸಿದ್ದಾರೆ. ಷಣ್ಮುಖ್, ಹಲವು ಕಿರು ವಿಡಿಯೋಗಳನ್ನು ಮಾಡಿ ಯೂಟ್ಯೂಬ್​ನಲ್ಲಿ ಜನಪ್ರಿಯತೆ ಗಳಿಸಿದ್ದರು.

ವೈದ್ಯೆ ಮೌನಿಕಾ ನೀಡಿದ ದೂರು ಸ್ವೀಕರಿಸಿ ಆರೋಪಿ ಸಂಪತ್ ಅನ್ನು ವಿಚಾರಣೆ ಮಾಡಲು ಅವರ ನಿವಾಸಕ್ಕೆ ತೆರಳಿದ್ದಾಗ ಷಣ್ಮುಖ್ ಗಾಂಜಾ ಸೇವಿಸಿದ್ದು ತಿಳಿದು ಬಂದಿದೆ. ಕೂಡಲೇ ಷಣ್ಮುಖ್ ಅನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಷಣ್ಮುಖ್, ಬಿಗ್​ಬಾಸ್ ತೆಲುಗು ಸೀಸನ್ 5ರಲ್ಲಿ ಭಾಗವಹಿಸಿದ್ದರು. ಫಿನಾಲೆ ವರೆಗೂ ಬಂದು ರನ್ನರ್ ಅಪ್ ಆಗಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ