AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾದಕ ವಸ್ತು ಪ್ರಕರಣದಲ್ಲಿ ಬಿಗ್​ಬಾಸ್ ರನ್ನರ್ ಅಪ್ ಬಂಧನ

Hyderabad Police: ಬಿಗ್​ಬಾಸ್ ರನ್ನರ್ ಅಪ್, ಯೂಟೂಬರ್ ಷಣ್ಮುಖ್ ಅನ್ನು ಮಾದಕ ವಸ್ತು ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆತನ ಸಹೋದರನನ್ನು ಯುವತಿಗೆ ಮೋಸ ಮಾಡಿದ ಪ್ರಕರಣದಲ್ಲಿ ಬಂಧಿಸಲಾಗಿದೆ.

ಮಾದಕ ವಸ್ತು ಪ್ರಕರಣದಲ್ಲಿ ಬಿಗ್​ಬಾಸ್ ರನ್ನರ್ ಅಪ್ ಬಂಧನ
ಮಂಜುನಾಥ ಸಿ.
|

Updated on: Feb 24, 2024 | 6:08 PM

Share

ಸಾಮಾಜಿಕ ಜಾಲತಾಣಗಳಿಂದಾಗಿ (Social Media) ಜನಪ್ರಿಯತೆ ಎಂಬುದು ಸುಲಭವಾಗಿಬಿಟ್ಟಿದೆ. ಮುಂಚೆ ಜನಪ್ರಿಯತೆ ಗಳಿಸಲು ನಿಜವಾಗಿಯೂ ಒಳ್ಳೆಯ ಕಲಾವಿದರಾಗಬೇಕಿರುತ್ತಿತ್ತು, ವಿದ್ಯಾವಂತರಾಗಬೇಕಿತ್ತು, ಆದರೆ ರೀಲ್ಸ್​ಗಳು ಬಂದ ಮೇಲೆ ಚಿತ್ರ ವಿಚಿತ್ರವಾಗಿ ಆಡುವವರು ಸಹ ಸೆಲೆಬ್ರಿಟಿಗಳಾಗಿಬಿಡುತ್ತಿದ್ದಾರೆ. ಆದರೆ ಹಲವರು ತಮಗೆ ಒದಗಿಬಂದ ಈ ಅಚಾನಕ್ ಜನಪ್ರಿಯತೆಯನ್ನು ಸಂಭಾಳಿಸಲಾಗದೆ ಅಡ್ಡದಾರಿ ಹಿಡಿಯುತ್ತಿದ್ದಾರೆ. ಇದೇ ರೀತಿ ಹಠಾತ್ ಜನಪ್ರಿಯತೆ ಗಳಿಸಿ ಬಿಗ್​ಬಾಸ್​ಗೂ ಹೋಗಿ ಬಂದ ಯುವಕನೊಬ್ಬ ಈಗ ಮಾದಕ ವಸ್ತು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾನೆ.

ಯೂಟ್ಯೂಬ್ ವಿಡಿಯೋಗಳ ಮೂಲಕ ಜನಪ್ರಿಯತೆ ಗಳಿಸಿ, ಬಳಿಕ ತೆಲುಗು ಬಿಗ್​ಬಾಸ್​ಗೆ ಹೋಗಿ ರನ್ನರ್ ಅಪ್ ಆದ ಷಣ್ಮುಕ್ ಜಸ್ವಂತ್ ಅನ್ನು ಮಾದಕ ವಸ್ತು ಬಳಕೆ ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಷಣ್ಮುಕ್ ಜಸ್ವಂತ್ ಸಹೋದರನ್ನು ಯುವತಿಗೆ ಮೋಸ ಮಾಡಿದ ಪ್ರಕರಣದಲ್ಲಿ ಅದೇ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:ಪ್ರತಿಭಾವಂತ ಹುಡುಗಿಗೆ ಕೊಟ್ಟ ಮಾತು ಉಳಿಸಿಕೊಂಡ ವಿಜಯ್​ ದೇವರಕೊಂಡ; ಷಣ್ಮುಖಪ್ರಿಯಾಗೆ ಸಿಕ್ತು ಚಾನ್ಸ್​​

ವೈದ್ಯೆ ಮೌನಿಕಾ ಎಂಬ ಮಹಿಳೆಗೆ ಮೋಸ ಮಾಡಿ ಇನ್ನೊಂದು ಮದುವೆಗೆ ಸಜ್ಜಾಗಿದ್ದ ಷಣ್ಮುಕ್ ಸಹೋದರ ಸಂಪತ್ ವಿನಯ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಯೂಟ್ಯೂಬರ್, ಮಾಜಿ ಬಿಗ್​ಬಾಸ್ ಸ್ಪರ್ಧಿ ಷಣ್ಮುಖ್ ಅನ್ನು ಗಾಂಜಾ ಪ್ರಕರಣದಲ್ಲಿ ಬಂಧನಕ್ಕೆ ಒಳಪಡಿಸಿದ್ದಾರೆ. ಷಣ್ಮುಖ್, ಹಲವು ಕಿರು ವಿಡಿಯೋಗಳನ್ನು ಮಾಡಿ ಯೂಟ್ಯೂಬ್​ನಲ್ಲಿ ಜನಪ್ರಿಯತೆ ಗಳಿಸಿದ್ದರು.

ವೈದ್ಯೆ ಮೌನಿಕಾ ನೀಡಿದ ದೂರು ಸ್ವೀಕರಿಸಿ ಆರೋಪಿ ಸಂಪತ್ ಅನ್ನು ವಿಚಾರಣೆ ಮಾಡಲು ಅವರ ನಿವಾಸಕ್ಕೆ ತೆರಳಿದ್ದಾಗ ಷಣ್ಮುಖ್ ಗಾಂಜಾ ಸೇವಿಸಿದ್ದು ತಿಳಿದು ಬಂದಿದೆ. ಕೂಡಲೇ ಷಣ್ಮುಖ್ ಅನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಷಣ್ಮುಖ್, ಬಿಗ್​ಬಾಸ್ ತೆಲುಗು ಸೀಸನ್ 5ರಲ್ಲಿ ಭಾಗವಹಿಸಿದ್ದರು. ಫಿನಾಲೆ ವರೆಗೂ ಬಂದು ರನ್ನರ್ ಅಪ್ ಆಗಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್