AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್​​ನಿಂದ ಆರಂಭವಾಗಲಿದೆ ಬಿಗ್​ ಬಾಸ್​​; ಸಂಭಾವ್ಯ ಪಟ್ಟಿಯಲ್ಲಿ ‘ರಾಬರ್ಟ್’​ ಗಾಯಕಿ ಮಂಗ್ಲಿ, ಅಧ್ಯಕ್ಷ ಸಿನಿಮಾ ನಾಯಕಿ

71 ದಿನಕ್ಕೆ ಕನ್ನಡದ ಬಿಗ್​ ಬಾಸ್​ ನಿಂತರೆ, 95 ದಿನಕ್ಕೆ ಮಲಯಾಳಂ ಬಿಗ್​ ಬಾಸ್​ ಅಂತ್ಯವಾಗಿದೆ. ಹೀಗಿರುವಾಗಲೇ ಬಿಗ್​ ಬಾಸ್​ ಮುಂದಿನ ಸೀಸನ್​ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ.

ಆಗಸ್ಟ್​​ನಿಂದ ಆರಂಭವಾಗಲಿದೆ ಬಿಗ್​ ಬಾಸ್​​; ಸಂಭಾವ್ಯ ಪಟ್ಟಿಯಲ್ಲಿ ‘ರಾಬರ್ಟ್’​ ಗಾಯಕಿ ಮಂಗ್ಲಿ, ಅಧ್ಯಕ್ಷ ಸಿನಿಮಾ ನಾಯಕಿ
ಹೆಬ್ಬಾ ಪಟೇಲ್​-ಮಂಗ್ಲಿ
ರಾಜೇಶ್ ದುಗ್ಗುಮನೆ
| Edited By: |

Updated on: May 22, 2021 | 5:24 PM

Share

ಕೊರೊನಾ ಕಾರಣಕ್ಕೆ ಕನ್ನಡ ಹಾಗೂ ಮಲಯಾಳಂ ಬಿಗ್​ ಬಾಸ್​ ಅರ್ಧಕ್ಕೆ ನಿಂತಿದೆ. ಕೊವಿಡ್​ ಎರಡನೇ ಅಲೆ ಜೋರಾಗಿರುವುದರಿಂದ ಹೇರಿರುವ ಲಾಕ್​ಡೌನ್​ನಿಂದ ಶೂಟಿಂಗ್​ ನಿಂತಿದೆ. ಇದರ ಪರಿಣಾಮ ಬಿಗ್​ ಬಾಸ್​ ಮೇಲೆ ಉಂಟಾಗಿದೆ. 71 ದಿನಕ್ಕೆ ಕನ್ನಡದ ಬಿಗ್​ ಬಾಸ್​ ಸೀಸನ್- 8 ನಿಂತರೆ, 95 ದಿನಕ್ಕೆ ಮಲಯಾಳಂ ಬಿಗ್​ ಬಾಸ್ ಸೀಸನ್​-4​ ಅಂತ್ಯವಾಗಿದೆ. ಹೀಗಿರುವಾಗಲೇ ಬಿಗ್​ ಬಾಸ್​ ಮುಂದಿನ ಸೀಸನ್​ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ.

ತೆಲುಗು ಬಿಗ್​ ಬಾಸ್​ ನಾಲ್ಕು ಸೀಸನ್ ಪೂರ್ಣಗೊಳಿಸಿದೆ. ​ಈಗ ಐದನೇ ಸೀಸನ್​ಗೆ ಸಿದ್ಧತೆಗಳು ನಡೆಯುತ್ತಿವೆ. ಆರಂಭದಲ್ಲಿ ಜೂನ್​ ತಿಂಗಳಲ್ಲೇ ಬಿಗ್​ ಬಾಸ್​ ಶುರು ಮಾಡುವ ಆಲೋಚನೆ ವಾಹಿನಿಯದ್ದಾಗಿತ್ತು. ಆದರೆ, ಕೊವಿಡ್​ ಎರಡನೇ ಅಲೆ ಇನ್ನೂ ಹಾಗೆಯೇ ಇದೆ. ಜುಲೈ ವೇಳೆಗೆ ಇದರ ಅಬ್ಬರ ಕಡಿಮೆ ಆಗಲಿದೆ ಎಂದು ತಜ್ಞರು ಹೇಳಿದ್ದಾರೆ. ಇದನ್ನೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಆಗಸ್ಟ್​ ವೇಳೆಗೆ ತೆಲುಗು ಬಿಗ್​ ಬಾಸ್​ ಸೀಸನ್-5ಅನ್ನು ಆರಂಭಿಸುವ ಆಲೋಚನೆಯನ್ನು ವಾಹಿನಿ ಹೊಂದಿದೆ.

ಸದ್ಯ, ಕೊವಿಡ್​ನಿಂದ ಲಾಕ್​ಡೌನ್​ ಘೋಷಣೆ ಮಾಡಲಾಗಿದ್ದು, ಶೂಟಿಂಗ್​ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಜೂನ್​ ತಿಂಗಳಲ್ಲೇ ಬಿಗ್​ ಬಾಸ್​ ಆರಂಭಿಸುತ್ತೇವೆ ಎಂದರೂ ಅದು ಅಸಾಧ್ಯವಾಗದ ಮಾತಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಆಗಸ್ಟ್​ ವೇಳೆಗೆ ಸೀಸನ್​-5 ಆರಂಭಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ಇನ್ನು, ಬಿಗ್​ ಬಾಸ್​ ಮನೆ ಸೇರಲಿರುವ ಸಂಭಾವ್ಯ ಪಟ್ಟಿ ಕೂಡ ವೈರಲ್​ ಆಗುತ್ತಿದೆ. ತೆಲುಗಿನಲ್ಲಿ ‘ರಾಬರ್ಟ್’​ ಸಿನಿಮಾದ ಹಾಡನ್ನು ಹಾಡಿದ ಗಾಯಕಿ ಮಂಗ್ಲಿ, ಆ್ಯಂಕರ್​ ರವಿ, ಶರಣ್​ ನಟನೆಯ ‘ಅಧ್ಯಕ್ಷ’ ಸಿನಿಮಾದ ನಾಯಕಿ ಹೆಬ್ಬಾ ಪಟೇಲ್​ ಸೇರಿ ಅನೇಕರು ಬಿಗ್​ ಬಾಸ್​ ಮನೆ ಸೇರುತ್ತಿದ್ದಾರೆ ಎನ್ನಲಾಗುತ್ತಿದೆ.

ತೆಲುಗು ಬಿಗ್​ ಬಾಸ್​-4ರಲ್ಲಿ ಅಭಿಜೀತ್​ ವಿನ್ನರ್​ ಆಗಿದ್ದರು. ಅಖಿಲ್​ ಸಾರ್ಥಕ್​ ಹಾಗೂ ಸೋಹೆಲ್​ ಕ್ರಮವಾಗಿ ಮೊದಲ ಹಾಗೂ ಎರಡನೇ ರನ್ನರ್​ ಅಪ್​ ಆಗಿದ್ದರು.

ಇದನ್ನೂ ಓದಿ:

Bigg Boss: ಕೊವಿಡ್​ ನಿಯಮ ಉಲ್ಲಂಘನೆ; ಬಿಗ್​ ಬಾಸ್​ ಮನೆ ಸೀಜ್​, 1 ಲಕ್ಷ ರೂಪಾಯಿ ದಂಡ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ