ಆಗಸ್ಟ್​​ನಿಂದ ಆರಂಭವಾಗಲಿದೆ ಬಿಗ್​ ಬಾಸ್​​; ಸಂಭಾವ್ಯ ಪಟ್ಟಿಯಲ್ಲಿ ‘ರಾಬರ್ಟ್’​ ಗಾಯಕಿ ಮಂಗ್ಲಿ, ಅಧ್ಯಕ್ಷ ಸಿನಿಮಾ ನಾಯಕಿ

71 ದಿನಕ್ಕೆ ಕನ್ನಡದ ಬಿಗ್​ ಬಾಸ್​ ನಿಂತರೆ, 95 ದಿನಕ್ಕೆ ಮಲಯಾಳಂ ಬಿಗ್​ ಬಾಸ್​ ಅಂತ್ಯವಾಗಿದೆ. ಹೀಗಿರುವಾಗಲೇ ಬಿಗ್​ ಬಾಸ್​ ಮುಂದಿನ ಸೀಸನ್​ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ.

ಆಗಸ್ಟ್​​ನಿಂದ ಆರಂಭವಾಗಲಿದೆ ಬಿಗ್​ ಬಾಸ್​​; ಸಂಭಾವ್ಯ ಪಟ್ಟಿಯಲ್ಲಿ ‘ರಾಬರ್ಟ್’​ ಗಾಯಕಿ ಮಂಗ್ಲಿ, ಅಧ್ಯಕ್ಷ ಸಿನಿಮಾ ನಾಯಕಿ
ಹೆಬ್ಬಾ ಪಟೇಲ್​-ಮಂಗ್ಲಿ
Follow us
| Updated By: ಮದನ್​ ಕುಮಾರ್​

Updated on: May 22, 2021 | 5:24 PM

ಕೊರೊನಾ ಕಾರಣಕ್ಕೆ ಕನ್ನಡ ಹಾಗೂ ಮಲಯಾಳಂ ಬಿಗ್​ ಬಾಸ್​ ಅರ್ಧಕ್ಕೆ ನಿಂತಿದೆ. ಕೊವಿಡ್​ ಎರಡನೇ ಅಲೆ ಜೋರಾಗಿರುವುದರಿಂದ ಹೇರಿರುವ ಲಾಕ್​ಡೌನ್​ನಿಂದ ಶೂಟಿಂಗ್​ ನಿಂತಿದೆ. ಇದರ ಪರಿಣಾಮ ಬಿಗ್​ ಬಾಸ್​ ಮೇಲೆ ಉಂಟಾಗಿದೆ. 71 ದಿನಕ್ಕೆ ಕನ್ನಡದ ಬಿಗ್​ ಬಾಸ್​ ಸೀಸನ್- 8 ನಿಂತರೆ, 95 ದಿನಕ್ಕೆ ಮಲಯಾಳಂ ಬಿಗ್​ ಬಾಸ್ ಸೀಸನ್​-4​ ಅಂತ್ಯವಾಗಿದೆ. ಹೀಗಿರುವಾಗಲೇ ಬಿಗ್​ ಬಾಸ್​ ಮುಂದಿನ ಸೀಸನ್​ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ.

ತೆಲುಗು ಬಿಗ್​ ಬಾಸ್​ ನಾಲ್ಕು ಸೀಸನ್ ಪೂರ್ಣಗೊಳಿಸಿದೆ. ​ಈಗ ಐದನೇ ಸೀಸನ್​ಗೆ ಸಿದ್ಧತೆಗಳು ನಡೆಯುತ್ತಿವೆ. ಆರಂಭದಲ್ಲಿ ಜೂನ್​ ತಿಂಗಳಲ್ಲೇ ಬಿಗ್​ ಬಾಸ್​ ಶುರು ಮಾಡುವ ಆಲೋಚನೆ ವಾಹಿನಿಯದ್ದಾಗಿತ್ತು. ಆದರೆ, ಕೊವಿಡ್​ ಎರಡನೇ ಅಲೆ ಇನ್ನೂ ಹಾಗೆಯೇ ಇದೆ. ಜುಲೈ ವೇಳೆಗೆ ಇದರ ಅಬ್ಬರ ಕಡಿಮೆ ಆಗಲಿದೆ ಎಂದು ತಜ್ಞರು ಹೇಳಿದ್ದಾರೆ. ಇದನ್ನೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಆಗಸ್ಟ್​ ವೇಳೆಗೆ ತೆಲುಗು ಬಿಗ್​ ಬಾಸ್​ ಸೀಸನ್-5ಅನ್ನು ಆರಂಭಿಸುವ ಆಲೋಚನೆಯನ್ನು ವಾಹಿನಿ ಹೊಂದಿದೆ.

ಸದ್ಯ, ಕೊವಿಡ್​ನಿಂದ ಲಾಕ್​ಡೌನ್​ ಘೋಷಣೆ ಮಾಡಲಾಗಿದ್ದು, ಶೂಟಿಂಗ್​ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಜೂನ್​ ತಿಂಗಳಲ್ಲೇ ಬಿಗ್​ ಬಾಸ್​ ಆರಂಭಿಸುತ್ತೇವೆ ಎಂದರೂ ಅದು ಅಸಾಧ್ಯವಾಗದ ಮಾತಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಆಗಸ್ಟ್​ ವೇಳೆಗೆ ಸೀಸನ್​-5 ಆರಂಭಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ಇನ್ನು, ಬಿಗ್​ ಬಾಸ್​ ಮನೆ ಸೇರಲಿರುವ ಸಂಭಾವ್ಯ ಪಟ್ಟಿ ಕೂಡ ವೈರಲ್​ ಆಗುತ್ತಿದೆ. ತೆಲುಗಿನಲ್ಲಿ ‘ರಾಬರ್ಟ್’​ ಸಿನಿಮಾದ ಹಾಡನ್ನು ಹಾಡಿದ ಗಾಯಕಿ ಮಂಗ್ಲಿ, ಆ್ಯಂಕರ್​ ರವಿ, ಶರಣ್​ ನಟನೆಯ ‘ಅಧ್ಯಕ್ಷ’ ಸಿನಿಮಾದ ನಾಯಕಿ ಹೆಬ್ಬಾ ಪಟೇಲ್​ ಸೇರಿ ಅನೇಕರು ಬಿಗ್​ ಬಾಸ್​ ಮನೆ ಸೇರುತ್ತಿದ್ದಾರೆ ಎನ್ನಲಾಗುತ್ತಿದೆ.

ತೆಲುಗು ಬಿಗ್​ ಬಾಸ್​-4ರಲ್ಲಿ ಅಭಿಜೀತ್​ ವಿನ್ನರ್​ ಆಗಿದ್ದರು. ಅಖಿಲ್​ ಸಾರ್ಥಕ್​ ಹಾಗೂ ಸೋಹೆಲ್​ ಕ್ರಮವಾಗಿ ಮೊದಲ ಹಾಗೂ ಎರಡನೇ ರನ್ನರ್​ ಅಪ್​ ಆಗಿದ್ದರು.

ಇದನ್ನೂ ಓದಿ:

Bigg Boss: ಕೊವಿಡ್​ ನಿಯಮ ಉಲ್ಲಂಘನೆ; ಬಿಗ್​ ಬಾಸ್​ ಮನೆ ಸೀಜ್​, 1 ಲಕ್ಷ ರೂಪಾಯಿ ದಂಡ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ