AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್: ಕೊನೆಯಲ್ಲಿ ಕೈಕೊಟ್ಟ ಅದೃಷ್ಟ, ರನ್ನರ್ ಅಪ್ ಆದ ಕನ್ನಡತಿ ತನುಜಾ

Bigg Boss Telugu 09: ತೆಲುಗು ಬಿಗ್​​ಬಾಸ್​​ನಲ್ಲಿ ಇಬ್ಬರು ಕನ್ನಡತಿಯರು ಭಾಗವಹಿಸಿದ್ದರು. ನಟಿ ಸಂಜನಾ ಗಲ್ರಾನಿ ಮತ್ತು ಕನ್ನಡ ಸಿನಿಮಾ ಮೂಲಕ ನಟನೆ ಆರಂಭಿಸಿದ ಈಗ ತೆಲುಗು ಧಾರಾವಾಹಿಗಳಲ್ಲಿ ಮಿಂಚುತ್ತಿರುವ ಕರ್ನಾಟಕದ ಹುಡುಗಿ ತನುಜಾ ಪುಟ್ಟಸ್ವಾಮಿ ಇಬ್ಬರೂ ಸಹ ತೆಲುಗು ಬಿಗ್​​ಬಾಸ್ ಫಿನಾಲೆಗೆ ಬಂದಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಅದೃಷ್ಟ ಕೈಕೊಟ್ಟಿದೆ.

ಬಿಗ್​​ಬಾಸ್: ಕೊನೆಯಲ್ಲಿ ಕೈಕೊಟ್ಟ ಅದೃಷ್ಟ, ರನ್ನರ್ ಅಪ್ ಆದ ಕನ್ನಡತಿ ತನುಜಾ
Tanuja Kalyan
ಮಂಜುನಾಥ ಸಿ.
|

Updated on: Dec 21, 2025 | 10:24 PM

Share

ತೆಲುಗು ಬಿಗ್​​ಬಾಸ್ (Bigg Boss) ಫಿನಾಲೆ ಇಂದು (ಡಿಸೆಂಬರ್ 21) ನಡೆದಿದೆ. ಬರೋಬ್ಬರಿ 106 ದಿನಗಳ ಶೋ ಇದಾಗಿದ್ದು, ಫಿನಾಲೆಗೆ ಕರ್ನಾಟಕದ ಇಬ್ಬರು ಸ್ಪರ್ಧಿಯರು ಬಂದಿದ್ದರು. ಈ ಕಾರಣಕ್ಕೆ ಈ ಬಾರಿಯ ತೆಲುಗು ಬಿಗ್​​ಬಾಸ್ ಗಮನ ಸೆಳೆದಿತ್ತು. ನಟಿ ಸಂಜನಾ ಗಲ್ರಾನಿ ಮತ್ತು ಕನ್ನಡ ಸಿನಿಮಾ ಮೂಲಕ ನಟನೆ ಆರಂಭಿಸಿದ ಈಗ ತೆಲುಗು ಧಾರಾವಾಹಿಗಳಲ್ಲಿ ಮಿಂಚುತ್ತಿರುವ ಕರ್ನಾಟಕದ ಹುಡುಗಿ ತನುಜಾ ಪುಟ್ಟಸ್ವಾಮಿ ಇಬ್ಬರೂ ಸಹ ತೆಲುಗು ಬಿಗ್​​ಬಾಸ್ ಫಿನಾಲೆಗೆ ಬಂದಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಅದೃಷ್ಟ ಕೈಕೊಟ್ಟಿದೆ.

ಒಟ್ಟು ಐದು ಜನ ಫಿನಾಲೆಗೆ ಬಂದಿದ್ದರು. ಕಲ್ಯಾಣ್, ಇಮಾನ್ಯುಯೆಲ್, ಸಂಜನಾ ಗಲ್ರಾನಿ, ತನುಜಾ ಮತ್ತು ಪವನ್ ಅವರುಗಳು ಫಿನಾಲೆ ವಾರಕ್ಕೆ ಎಂಟ್ರಿ ಕೊಟ್ಟಿದ್ದರು. ಈ ಐವರಲ್ಲಿ ಕಲ್ಯಾಣ್ ಮತ್ತು ತನುಜಾ ನಡುವೆ ಬಹಳ ಗಟ್ಟಿಯಾದ ಸ್ಪರ್ಧೆ ಇತ್ತು. ತನುಜಾ ಅವರು ಗೆಲ್ಲುವ ನಿರೀಕ್ಷೆ ಬಹಳ ಇತ್ತು. ಕಲ್ಯಾಣ್​​ಗೂ ಸಹ ಸಾಕಷ್ಟು ಅಭಿಮಾನಿಗಳಿದ್ದರು. ಇಂದು ನಡೆದ ಫಿನಾಲೆಯಲ್ಲಿ ಕಲ್ಯಾಣ್ ಅವರು ಬಿಗ್​​ಬಾಸ್ ತೆಲುಗು ಸೀಸನ್ 09ರ ವಿಜೇತರಾಗಿದ್ದಾರೆ. ತನುಜಾ ಅವರು ರನ್ನರ್ ಅಪ್ ಆಗಿದ್ದಾರೆ. ಆ ಮೂಲಕ ತನುಜಾ ಅಭಿಮಾನಿಗಳಿಗೆ ಭಾರಿ ನಿರಾಸೆ ಆಗಿದೆ.

ಫಿನಾಲೆ ವಾರದಲ್ಲಿ ಒಟ್ಟು ಐದು ಮಂದಿ ಸ್ಪರ್ಧಿಗಳಿದ್ದರು. ಅದರಲ್ಲಿ ಮೊದಲಿಗೆ ಇಮಾನ್ಯುಯೆಲ್ ನಾಲ್ಕನೇ ರನ್ನರ್ ಅಪ್ ಆದರು. ಬಳಿಕ ಸಂಜನಾ ಅವರು ಮೂರನೇ ರನ್ನರ್ ಅಪ್ ಆದರು. ಡಿಮಾನ್ ಪವನ್ ಎರಡನೇ ರನ್ನರ್ ಅಪ್ ಆದರೆ. ವೇದಿಕೆ ಹೋಗಿ ಮೊದಲ ರನ್ನರ್ ಅಪ್ ಆದರು ತನುಜಾ ಪುಟ್ಟಸ್ವಾಮಿ. ಕಲ್ಯಾಣ್ ಅವರು ವಿಜೇತರಾದರು. ತನುಜಾ ಅವರು ಇಡೀ ಸೀಸನ್ ಅದ್ಭುತವಾಗಿ ಆಟವಾಡುತ್ತಾ ಬಂದಿದ್ದರು ಆದರೆ ಕೊನೆಗೆ ರನ್ನರ್ ಅಪ್ ಆದರು.

ಇದನ್ನೂ ಓದಿ:ತಂದೆಯ ವಿರೋಧದ ನಡುವೆ ಸಾಧನೆ: ಕತೆ ಹೇಳಿಕೊಂಡ ತನುಜಾ

ತನುಜಾ ಅವರು ಗೆಲ್ಲುವ ಸ್ಪರ್ಧಿ ಎಂದೇ ಬಿಂಬಿತವಾಗಿದ್ದರು. ಆದರೆ ಕೊನೆಯ ಒಂದು ವಾರದಲ್ಲಿ ತನುಜಾ ಅವರು ಕನ್ನಡಿಗರು, ತೆಲುಗು ರಾಜ್ಯದವರಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಬಿಂಬಿಸಲು ಆರಂಭಿಸಿದರು. ಇದು ತನುಜಾ ಅವರಿಗೆ ಕೊನೆಯಲ್ಲಿ ತುಸು ನೆಗೆಟಿವ್ ಆಯ್ತು. ಆದರೂ ಸಹ ಪರಭಾಷೆ ನಟಿಯಾಗಿ ಫಿನಾಲೆ ವರೆಗೆ ಹೋಗಿದ್ದು ಸಾಮಾನ್ಯ ಸಾಧನೆಯಲ್ಲ.

ಇದರ ಜೊತೆಗೆ ಕಲ್ಯಾಣ್ ಸಹ ಒಳ್ಳೆಯ ಸ್ಪರ್ಧಿಯೇ ಆಗಿದ್ದರು. ಕಾಮನರ್ ಆಗಿ ಬಿಗ್​​ಬಾಸ್ ಮನೆಗೆ ಹೋಗಿದ್ದ ಕಲ್ಯಾಣ್ ತಮ್ಮ ಆಟ, ವ್ಯಕ್ತಿತ್ವದಿಂದ ಸ್ಪರ್ಧಿಗಳನ್ನು, ಪ್ರೇಕ್ಷಕರನ್ನು ಸೆಳೆದರು. ಅಂತಿಮವಾಗಿ ಬಿಗ್​​ಬಾಸ್ ವಿನ್ನರ್ ಆಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ