AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ; ಯಾರದು?

ಪ್ರಶಾಂತ್​ ಸಂಬರಗಿ ಈಗಾಗಲೇ ಮನೆಯವರ ದೃಷ್ಟಿಯಲ್ಲಿ ಕೆಟ್ಟವರಾಗಿದ್ದಾರೆ. ಅದಕ್ಕೆ ಕಾರಣ ಅವರ ನಡವಳಿಕೆ. ಒಂದೊಮ್ಮೆ ಹೊಸ ಸ್ಪರ್ಧಿ ಕೂಡ ಅದೇ ರೀತಿ ನಡೆದುಕೊಂಡರೆ ಮನೆಯಲ್ಲಿ ಮತ್ತೊಂದಷ್ಟು ಜಗಳಗಳು ನಡೆಯಬಹುದು.

Bigg Boss Kannada: ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ; ಯಾರದು?
ಚಕ್ರವರ್ತಿ ಚಂದ್ರಚೂಡ
ರಾಜೇಶ್ ದುಗ್ಗುಮನೆ
|

Updated on: Apr 01, 2021 | 3:27 PM

Share

ಬಿಗ್​ ಬಾಸ್​ ಮನೆಯಲ್ಲಿ ಇತ್ತೀಚೆಗಷ್ಟೇ ವೈಲ್ಡ್​ ಕಾರ್ಡ್​ ಎಂಟ್ರಿ ಬಗ್ಗೆ ಚರ್ಚೆ ಆಗಿತ್ತು. ಮನೆ ಒಳಗೆ ಬಂದವರನ್ನು ಪ್ರಶಾಂತ್​ ಸಂಬರಗಿ ತಮ್ಮೆಡೆ ಸೆಳೆದುಕೊಳ್ಳುತ್ತಾರೆ ಎನ್ನುವ ಮಾತು ಕೂಡ ಕೇಳಿ ಬಂದಿತ್ತು. ಈ ವಿಚಾರ ಇಟ್ಟುಕೊಂಡು ಮನೆಯವರೆಲ್ಲ ಜೋಕ್​ ಮಾಡಿಕೊಂಡು ನಕ್ಕಿದ್ದರು. ಇದಾದ ಬೆನ್ನಲ್ಲೇ ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ ಆಗಿದೆ. ಅಷ್ಟಕ್ಕೂ ಬಿಗ್​ ಬಾಸ್​ ಮನೆಗೆ ಪ್ರವೇಶಿಸಿದವರು ಯಾರು? ಅವರ ಹಿನ್ನೆಲೆ ಏನು ಎನ್ನುವ ಬಗ್ಗೆ ಇಲ್ಲಿದೆ ಉತ್ತರ. ಬಿಗ್​ ಬಾಸ್​ ಮನೆಗೆ ಬಂದ ಹೊಸ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ ಎಂಬ ಮಾಹಿತಿ ಕೇಳಿಬಂದಿದೆ. ಪತ್ರಿಕೋದ್ಯಮದಿಂದ ತಮ್ಮ ವೃತ್ತಿ ಆರಂಭಿಸಿದ ಅವರು ನಂತರ ಕಾಲಿಟ್ಟಿದ್ದು ಚಿತ್ರರಂಗಕ್ಕೆ. ಇವರು ಸಿನಿಮಾ ನಿರ್ದೇಶನಕ್ಕೆ ಇಳಿದರು. ಈಗ ನೇರವಾಗಿ ಬಿಗ್​ ಬಾಸ್​ ಮನೆಗೆ ಪ್ರವೇಶ ಪಡೆದುಕೊಂಡಿದ್ದಾರೆ.

ಈಗಾಗಲೇ ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ ಮಾತು ಕೇಳಿ ಎಲ್ಲರಿಗೂ ಸಾಕಾಗಿದೆ. ಅವರು ನಡೆದುಕೊಳ್ಳುವ ರೀತಿ ಸಾಕಷ್ಟು ಜನರಿಗೆ ಇಷ್ಟವಾಗುತ್ತಿಲ್ಲ. ಮಾತಿನಲ್ಲಿ ಚಕ್ರವರ್ತಿ ಚಂದ್ರಚೂಡ್​ ಕೂಡ ನಿಪುಣರು. ಅವರ ಎದುರು ಪ್ರಶಾಂತ್​ ಜಿದ್ದಿಗೆ ಬಿದ್ದರೆ ಬಿಗ್​ ಬಾಸ್​ ಮನೆಯಲ್ಲಿ ಒಂದಷ್ಟು ಮಾತಿನ ಸಮರಗಳನ್ನು ನಿರೀಕ್ಷೆ ಮಾಡಬಹುದೇನೋ.

ಇಂದು ಬಿಗ್​ ಬಾಸ್​ ಮನೆಗೆ ಹೊಸ ಎಂಟ್ರಿ ಆಗಲಿದೆ ಎನ್ನುವ ಬಗ್ಗೆ ಬಿಗ್​ ಬಾಸ್​ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಆದರೆ, ಅವರು ಯಾರು ಎನ್ನುವ ವಿಚಾರದಲ್ಲಿ ವಾಹಿನಿ ರಹಸ್ಯ ಕಾಯ್ದುಕೊಂಡಿದೆ.

ಪ್ರಶಾಂತ್​ ಸಂಬರಗಿ ಈಗಾಗಲೇ ಮನೆಯವರ ದೃಷ್ಟಿಯಲ್ಲಿ ಕೆಟ್ಟವರಾಗಿದ್ದಾರೆ. ಅದಕ್ಕೆ ಕಾರಣ ಅವರ ನಡವಳಿಕೆ. ಒಂದೊಮ್ಮೆ ಚಕ್ರವರ್ತಿ ಚಂದ್ರಚೂಡ ಕೂಡ ಅದೇ ರೀತಿ ನಡೆದುಕೊಂಡರೆ ಮನೆಯಲ್ಲಿ ಮತ್ತೊಂದಷ್ಟು ಜಗಳಗಳು, ಮಾತಿನ ಚಕಮಕಿಗಳು ಏರ್ಪಡುವ ಎಲ್ಲಾ ಸಾಧ್ಯತೆಗಳಿವೆ.

ಇದನ್ನೂ ಓದಿ: ಎಷ್ಟೇ ಹೇಳಿದರೂ ಬಿಗ್​ ಬಾಸ್​ ನಿಯಮ ಉಲ್ಲಂಘನೆ ಮಾಡಿದ ದಿವ್ಯಾ ಉರುಡುಗಗೆ ಯಾವ ಶಿಕ್ಷೆ?

(Bigg Boss Wild Card Entry chakravarthy chandrachud is a New Member for BBK8)

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ