AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ; ಯಾರದು?

ಪ್ರಶಾಂತ್​ ಸಂಬರಗಿ ಈಗಾಗಲೇ ಮನೆಯವರ ದೃಷ್ಟಿಯಲ್ಲಿ ಕೆಟ್ಟವರಾಗಿದ್ದಾರೆ. ಅದಕ್ಕೆ ಕಾರಣ ಅವರ ನಡವಳಿಕೆ. ಒಂದೊಮ್ಮೆ ಹೊಸ ಸ್ಪರ್ಧಿ ಕೂಡ ಅದೇ ರೀತಿ ನಡೆದುಕೊಂಡರೆ ಮನೆಯಲ್ಲಿ ಮತ್ತೊಂದಷ್ಟು ಜಗಳಗಳು ನಡೆಯಬಹುದು.

Bigg Boss Kannada: ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ; ಯಾರದು?
ಚಕ್ರವರ್ತಿ ಚಂದ್ರಚೂಡ
ರಾಜೇಶ್ ದುಗ್ಗುಮನೆ
|

Updated on: Apr 01, 2021 | 3:27 PM

Share

ಬಿಗ್​ ಬಾಸ್​ ಮನೆಯಲ್ಲಿ ಇತ್ತೀಚೆಗಷ್ಟೇ ವೈಲ್ಡ್​ ಕಾರ್ಡ್​ ಎಂಟ್ರಿ ಬಗ್ಗೆ ಚರ್ಚೆ ಆಗಿತ್ತು. ಮನೆ ಒಳಗೆ ಬಂದವರನ್ನು ಪ್ರಶಾಂತ್​ ಸಂಬರಗಿ ತಮ್ಮೆಡೆ ಸೆಳೆದುಕೊಳ್ಳುತ್ತಾರೆ ಎನ್ನುವ ಮಾತು ಕೂಡ ಕೇಳಿ ಬಂದಿತ್ತು. ಈ ವಿಚಾರ ಇಟ್ಟುಕೊಂಡು ಮನೆಯವರೆಲ್ಲ ಜೋಕ್​ ಮಾಡಿಕೊಂಡು ನಕ್ಕಿದ್ದರು. ಇದಾದ ಬೆನ್ನಲ್ಲೇ ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ ಆಗಿದೆ. ಅಷ್ಟಕ್ಕೂ ಬಿಗ್​ ಬಾಸ್​ ಮನೆಗೆ ಪ್ರವೇಶಿಸಿದವರು ಯಾರು? ಅವರ ಹಿನ್ನೆಲೆ ಏನು ಎನ್ನುವ ಬಗ್ಗೆ ಇಲ್ಲಿದೆ ಉತ್ತರ. ಬಿಗ್​ ಬಾಸ್​ ಮನೆಗೆ ಬಂದ ಹೊಸ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ ಎಂಬ ಮಾಹಿತಿ ಕೇಳಿಬಂದಿದೆ. ಪತ್ರಿಕೋದ್ಯಮದಿಂದ ತಮ್ಮ ವೃತ್ತಿ ಆರಂಭಿಸಿದ ಅವರು ನಂತರ ಕಾಲಿಟ್ಟಿದ್ದು ಚಿತ್ರರಂಗಕ್ಕೆ. ಇವರು ಸಿನಿಮಾ ನಿರ್ದೇಶನಕ್ಕೆ ಇಳಿದರು. ಈಗ ನೇರವಾಗಿ ಬಿಗ್​ ಬಾಸ್​ ಮನೆಗೆ ಪ್ರವೇಶ ಪಡೆದುಕೊಂಡಿದ್ದಾರೆ.

ಈಗಾಗಲೇ ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ ಮಾತು ಕೇಳಿ ಎಲ್ಲರಿಗೂ ಸಾಕಾಗಿದೆ. ಅವರು ನಡೆದುಕೊಳ್ಳುವ ರೀತಿ ಸಾಕಷ್ಟು ಜನರಿಗೆ ಇಷ್ಟವಾಗುತ್ತಿಲ್ಲ. ಮಾತಿನಲ್ಲಿ ಚಕ್ರವರ್ತಿ ಚಂದ್ರಚೂಡ್​ ಕೂಡ ನಿಪುಣರು. ಅವರ ಎದುರು ಪ್ರಶಾಂತ್​ ಜಿದ್ದಿಗೆ ಬಿದ್ದರೆ ಬಿಗ್​ ಬಾಸ್​ ಮನೆಯಲ್ಲಿ ಒಂದಷ್ಟು ಮಾತಿನ ಸಮರಗಳನ್ನು ನಿರೀಕ್ಷೆ ಮಾಡಬಹುದೇನೋ.

ಇಂದು ಬಿಗ್​ ಬಾಸ್​ ಮನೆಗೆ ಹೊಸ ಎಂಟ್ರಿ ಆಗಲಿದೆ ಎನ್ನುವ ಬಗ್ಗೆ ಬಿಗ್​ ಬಾಸ್​ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಆದರೆ, ಅವರು ಯಾರು ಎನ್ನುವ ವಿಚಾರದಲ್ಲಿ ವಾಹಿನಿ ರಹಸ್ಯ ಕಾಯ್ದುಕೊಂಡಿದೆ.

ಪ್ರಶಾಂತ್​ ಸಂಬರಗಿ ಈಗಾಗಲೇ ಮನೆಯವರ ದೃಷ್ಟಿಯಲ್ಲಿ ಕೆಟ್ಟವರಾಗಿದ್ದಾರೆ. ಅದಕ್ಕೆ ಕಾರಣ ಅವರ ನಡವಳಿಕೆ. ಒಂದೊಮ್ಮೆ ಚಕ್ರವರ್ತಿ ಚಂದ್ರಚೂಡ ಕೂಡ ಅದೇ ರೀತಿ ನಡೆದುಕೊಂಡರೆ ಮನೆಯಲ್ಲಿ ಮತ್ತೊಂದಷ್ಟು ಜಗಳಗಳು, ಮಾತಿನ ಚಕಮಕಿಗಳು ಏರ್ಪಡುವ ಎಲ್ಲಾ ಸಾಧ್ಯತೆಗಳಿವೆ.

ಇದನ್ನೂ ಓದಿ: ಎಷ್ಟೇ ಹೇಳಿದರೂ ಬಿಗ್​ ಬಾಸ್​ ನಿಯಮ ಉಲ್ಲಂಘನೆ ಮಾಡಿದ ದಿವ್ಯಾ ಉರುಡುಗಗೆ ಯಾವ ಶಿಕ್ಷೆ?

(Bigg Boss Wild Card Entry chakravarthy chandrachud is a New Member for BBK8)

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು