AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ; ಯಾರದು?

ಪ್ರಶಾಂತ್​ ಸಂಬರಗಿ ಈಗಾಗಲೇ ಮನೆಯವರ ದೃಷ್ಟಿಯಲ್ಲಿ ಕೆಟ್ಟವರಾಗಿದ್ದಾರೆ. ಅದಕ್ಕೆ ಕಾರಣ ಅವರ ನಡವಳಿಕೆ. ಒಂದೊಮ್ಮೆ ಹೊಸ ಸ್ಪರ್ಧಿ ಕೂಡ ಅದೇ ರೀತಿ ನಡೆದುಕೊಂಡರೆ ಮನೆಯಲ್ಲಿ ಮತ್ತೊಂದಷ್ಟು ಜಗಳಗಳು ನಡೆಯಬಹುದು.

Bigg Boss Kannada: ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ; ಯಾರದು?
ಚಕ್ರವರ್ತಿ ಚಂದ್ರಚೂಡ
ರಾಜೇಶ್ ದುಗ್ಗುಮನೆ
|

Updated on: Apr 01, 2021 | 3:27 PM

Share

ಬಿಗ್​ ಬಾಸ್​ ಮನೆಯಲ್ಲಿ ಇತ್ತೀಚೆಗಷ್ಟೇ ವೈಲ್ಡ್​ ಕಾರ್ಡ್​ ಎಂಟ್ರಿ ಬಗ್ಗೆ ಚರ್ಚೆ ಆಗಿತ್ತು. ಮನೆ ಒಳಗೆ ಬಂದವರನ್ನು ಪ್ರಶಾಂತ್​ ಸಂಬರಗಿ ತಮ್ಮೆಡೆ ಸೆಳೆದುಕೊಳ್ಳುತ್ತಾರೆ ಎನ್ನುವ ಮಾತು ಕೂಡ ಕೇಳಿ ಬಂದಿತ್ತು. ಈ ವಿಚಾರ ಇಟ್ಟುಕೊಂಡು ಮನೆಯವರೆಲ್ಲ ಜೋಕ್​ ಮಾಡಿಕೊಂಡು ನಕ್ಕಿದ್ದರು. ಇದಾದ ಬೆನ್ನಲ್ಲೇ ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ ಆಗಿದೆ. ಅಷ್ಟಕ್ಕೂ ಬಿಗ್​ ಬಾಸ್​ ಮನೆಗೆ ಪ್ರವೇಶಿಸಿದವರು ಯಾರು? ಅವರ ಹಿನ್ನೆಲೆ ಏನು ಎನ್ನುವ ಬಗ್ಗೆ ಇಲ್ಲಿದೆ ಉತ್ತರ. ಬಿಗ್​ ಬಾಸ್​ ಮನೆಗೆ ಬಂದ ಹೊಸ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ ಎಂಬ ಮಾಹಿತಿ ಕೇಳಿಬಂದಿದೆ. ಪತ್ರಿಕೋದ್ಯಮದಿಂದ ತಮ್ಮ ವೃತ್ತಿ ಆರಂಭಿಸಿದ ಅವರು ನಂತರ ಕಾಲಿಟ್ಟಿದ್ದು ಚಿತ್ರರಂಗಕ್ಕೆ. ಇವರು ಸಿನಿಮಾ ನಿರ್ದೇಶನಕ್ಕೆ ಇಳಿದರು. ಈಗ ನೇರವಾಗಿ ಬಿಗ್​ ಬಾಸ್​ ಮನೆಗೆ ಪ್ರವೇಶ ಪಡೆದುಕೊಂಡಿದ್ದಾರೆ.

ಈಗಾಗಲೇ ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ ಮಾತು ಕೇಳಿ ಎಲ್ಲರಿಗೂ ಸಾಕಾಗಿದೆ. ಅವರು ನಡೆದುಕೊಳ್ಳುವ ರೀತಿ ಸಾಕಷ್ಟು ಜನರಿಗೆ ಇಷ್ಟವಾಗುತ್ತಿಲ್ಲ. ಮಾತಿನಲ್ಲಿ ಚಕ್ರವರ್ತಿ ಚಂದ್ರಚೂಡ್​ ಕೂಡ ನಿಪುಣರು. ಅವರ ಎದುರು ಪ್ರಶಾಂತ್​ ಜಿದ್ದಿಗೆ ಬಿದ್ದರೆ ಬಿಗ್​ ಬಾಸ್​ ಮನೆಯಲ್ಲಿ ಒಂದಷ್ಟು ಮಾತಿನ ಸಮರಗಳನ್ನು ನಿರೀಕ್ಷೆ ಮಾಡಬಹುದೇನೋ.

ಇಂದು ಬಿಗ್​ ಬಾಸ್​ ಮನೆಗೆ ಹೊಸ ಎಂಟ್ರಿ ಆಗಲಿದೆ ಎನ್ನುವ ಬಗ್ಗೆ ಬಿಗ್​ ಬಾಸ್​ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಆದರೆ, ಅವರು ಯಾರು ಎನ್ನುವ ವಿಚಾರದಲ್ಲಿ ವಾಹಿನಿ ರಹಸ್ಯ ಕಾಯ್ದುಕೊಂಡಿದೆ.

ಪ್ರಶಾಂತ್​ ಸಂಬರಗಿ ಈಗಾಗಲೇ ಮನೆಯವರ ದೃಷ್ಟಿಯಲ್ಲಿ ಕೆಟ್ಟವರಾಗಿದ್ದಾರೆ. ಅದಕ್ಕೆ ಕಾರಣ ಅವರ ನಡವಳಿಕೆ. ಒಂದೊಮ್ಮೆ ಚಕ್ರವರ್ತಿ ಚಂದ್ರಚೂಡ ಕೂಡ ಅದೇ ರೀತಿ ನಡೆದುಕೊಂಡರೆ ಮನೆಯಲ್ಲಿ ಮತ್ತೊಂದಷ್ಟು ಜಗಳಗಳು, ಮಾತಿನ ಚಕಮಕಿಗಳು ಏರ್ಪಡುವ ಎಲ್ಲಾ ಸಾಧ್ಯತೆಗಳಿವೆ.

ಇದನ್ನೂ ಓದಿ: ಎಷ್ಟೇ ಹೇಳಿದರೂ ಬಿಗ್​ ಬಾಸ್​ ನಿಯಮ ಉಲ್ಲಂಘನೆ ಮಾಡಿದ ದಿವ್ಯಾ ಉರುಡುಗಗೆ ಯಾವ ಶಿಕ್ಷೆ?

(Bigg Boss Wild Card Entry chakravarthy chandrachud is a New Member for BBK8)

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್