AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ; ಯಾರದು?

ಪ್ರಶಾಂತ್​ ಸಂಬರಗಿ ಈಗಾಗಲೇ ಮನೆಯವರ ದೃಷ್ಟಿಯಲ್ಲಿ ಕೆಟ್ಟವರಾಗಿದ್ದಾರೆ. ಅದಕ್ಕೆ ಕಾರಣ ಅವರ ನಡವಳಿಕೆ. ಒಂದೊಮ್ಮೆ ಹೊಸ ಸ್ಪರ್ಧಿ ಕೂಡ ಅದೇ ರೀತಿ ನಡೆದುಕೊಂಡರೆ ಮನೆಯಲ್ಲಿ ಮತ್ತೊಂದಷ್ಟು ಜಗಳಗಳು ನಡೆಯಬಹುದು.

Bigg Boss Kannada: ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ; ಯಾರದು?
ಚಕ್ರವರ್ತಿ ಚಂದ್ರಚೂಡ
ರಾಜೇಶ್ ದುಗ್ಗುಮನೆ
|

Updated on: Apr 01, 2021 | 3:27 PM

Share

ಬಿಗ್​ ಬಾಸ್​ ಮನೆಯಲ್ಲಿ ಇತ್ತೀಚೆಗಷ್ಟೇ ವೈಲ್ಡ್​ ಕಾರ್ಡ್​ ಎಂಟ್ರಿ ಬಗ್ಗೆ ಚರ್ಚೆ ಆಗಿತ್ತು. ಮನೆ ಒಳಗೆ ಬಂದವರನ್ನು ಪ್ರಶಾಂತ್​ ಸಂಬರಗಿ ತಮ್ಮೆಡೆ ಸೆಳೆದುಕೊಳ್ಳುತ್ತಾರೆ ಎನ್ನುವ ಮಾತು ಕೂಡ ಕೇಳಿ ಬಂದಿತ್ತು. ಈ ವಿಚಾರ ಇಟ್ಟುಕೊಂಡು ಮನೆಯವರೆಲ್ಲ ಜೋಕ್​ ಮಾಡಿಕೊಂಡು ನಕ್ಕಿದ್ದರು. ಇದಾದ ಬೆನ್ನಲ್ಲೇ ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ ಆಗಿದೆ. ಅಷ್ಟಕ್ಕೂ ಬಿಗ್​ ಬಾಸ್​ ಮನೆಗೆ ಪ್ರವೇಶಿಸಿದವರು ಯಾರು? ಅವರ ಹಿನ್ನೆಲೆ ಏನು ಎನ್ನುವ ಬಗ್ಗೆ ಇಲ್ಲಿದೆ ಉತ್ತರ. ಬಿಗ್​ ಬಾಸ್​ ಮನೆಗೆ ಬಂದ ಹೊಸ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ ಎಂಬ ಮಾಹಿತಿ ಕೇಳಿಬಂದಿದೆ. ಪತ್ರಿಕೋದ್ಯಮದಿಂದ ತಮ್ಮ ವೃತ್ತಿ ಆರಂಭಿಸಿದ ಅವರು ನಂತರ ಕಾಲಿಟ್ಟಿದ್ದು ಚಿತ್ರರಂಗಕ್ಕೆ. ಇವರು ಸಿನಿಮಾ ನಿರ್ದೇಶನಕ್ಕೆ ಇಳಿದರು. ಈಗ ನೇರವಾಗಿ ಬಿಗ್​ ಬಾಸ್​ ಮನೆಗೆ ಪ್ರವೇಶ ಪಡೆದುಕೊಂಡಿದ್ದಾರೆ.

ಈಗಾಗಲೇ ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ ಮಾತು ಕೇಳಿ ಎಲ್ಲರಿಗೂ ಸಾಕಾಗಿದೆ. ಅವರು ನಡೆದುಕೊಳ್ಳುವ ರೀತಿ ಸಾಕಷ್ಟು ಜನರಿಗೆ ಇಷ್ಟವಾಗುತ್ತಿಲ್ಲ. ಮಾತಿನಲ್ಲಿ ಚಕ್ರವರ್ತಿ ಚಂದ್ರಚೂಡ್​ ಕೂಡ ನಿಪುಣರು. ಅವರ ಎದುರು ಪ್ರಶಾಂತ್​ ಜಿದ್ದಿಗೆ ಬಿದ್ದರೆ ಬಿಗ್​ ಬಾಸ್​ ಮನೆಯಲ್ಲಿ ಒಂದಷ್ಟು ಮಾತಿನ ಸಮರಗಳನ್ನು ನಿರೀಕ್ಷೆ ಮಾಡಬಹುದೇನೋ.

ಇಂದು ಬಿಗ್​ ಬಾಸ್​ ಮನೆಗೆ ಹೊಸ ಎಂಟ್ರಿ ಆಗಲಿದೆ ಎನ್ನುವ ಬಗ್ಗೆ ಬಿಗ್​ ಬಾಸ್​ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಆದರೆ, ಅವರು ಯಾರು ಎನ್ನುವ ವಿಚಾರದಲ್ಲಿ ವಾಹಿನಿ ರಹಸ್ಯ ಕಾಯ್ದುಕೊಂಡಿದೆ.

ಪ್ರಶಾಂತ್​ ಸಂಬರಗಿ ಈಗಾಗಲೇ ಮನೆಯವರ ದೃಷ್ಟಿಯಲ್ಲಿ ಕೆಟ್ಟವರಾಗಿದ್ದಾರೆ. ಅದಕ್ಕೆ ಕಾರಣ ಅವರ ನಡವಳಿಕೆ. ಒಂದೊಮ್ಮೆ ಚಕ್ರವರ್ತಿ ಚಂದ್ರಚೂಡ ಕೂಡ ಅದೇ ರೀತಿ ನಡೆದುಕೊಂಡರೆ ಮನೆಯಲ್ಲಿ ಮತ್ತೊಂದಷ್ಟು ಜಗಳಗಳು, ಮಾತಿನ ಚಕಮಕಿಗಳು ಏರ್ಪಡುವ ಎಲ್ಲಾ ಸಾಧ್ಯತೆಗಳಿವೆ.

ಇದನ್ನೂ ಓದಿ: ಎಷ್ಟೇ ಹೇಳಿದರೂ ಬಿಗ್​ ಬಾಸ್​ ನಿಯಮ ಉಲ್ಲಂಘನೆ ಮಾಡಿದ ದಿವ್ಯಾ ಉರುಡುಗಗೆ ಯಾವ ಶಿಕ್ಷೆ?

(Bigg Boss Wild Card Entry chakravarthy chandrachud is a New Member for BBK8)

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ