AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ ಸ್ಪರ್ಧಿಗೆ ಖ್ಯಾತ ತೆಲುಗು ನಟ ಪ್ರಭಾಸ್​ ಜತೆ ನಟಿಸೋ ಅವಕಾಶ

ರಾಮಾಯಣದಲ್ಲಿ ರಾವಣನ ಪಾತ್ರ ತುಂಬಾನೇ ಪ್ರಾಮುಖ್ಯತೆ ಪಡೆದುಕೊಂಡಿದೆ. ರಾವಣನಿಗೆ ಇಂದ್ರಜಿತ್​ ಹೆಸರಿನ ಮಗ ಇರುತ್ತಾನೆ. ಈ ಪಾತ್ರಕ್ಕೆ ಸಿದ್ಧಾರ್ಥ್​ ಜೀವ ತುಂಬಲಿದ್ದಾರೆ ಎನ್ನಲಾಗಿದೆ.

ಬಿಗ್ ಬಾಸ್​ ಸ್ಪರ್ಧಿಗೆ ಖ್ಯಾತ ತೆಲುಗು ನಟ ಪ್ರಭಾಸ್​ ಜತೆ ನಟಿಸೋ ಅವಕಾಶ
ಆದಿಪುರುಷ್
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: May 16, 2021 | 5:17 PM

Share

ಬಿಗ್​ ಬಾಸ್​ ಮನೆ ಹೊಕ್ಕಿ ಬಂದ ನಂತರದಲ್ಲಿ ಸಾಕಷ್ಟು ಸ್ಪರ್ಧಿಗಳ ಲಕ್​ ಬದಲಾಗಿದೆ. ಅದರಲ್ಲೂ ವಿನ್​ ಆದ ಸ್ಪರ್ಧಿಗಳ ಅದೃಷ್ಟವಂತೂ ಸಾಕಷ್ಟು ಬದಲಾಗಿದೆ. ದೊಡ್ಮನೆ ಹೋಗಿ ಬಂದ ಅನೇಕರಿಗೆ ಚಿತ್ರರಂಗದಲ್ಲಿ ಅವಕಾಶ ಸಿಕ್ಕಿದೆ. ಈಗ ಹಿಂದಿ ಬಿಗ್​ ಬಾಸ್​ ಸೀಸನ್​ 13 ವಿನ್ನರ್​ ಸಿದ್ಧಾರ್ಥ್​ ಶುಕ್ಲಗೂ ಅದೃಷ್ಟ ಕೈ ಹಿಡಿದಿದೆ. ಪ್ರಭಾಸ್​ ನಟನೆಯ ಆದಿಪುರುಷ್​ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಸಿದ್ಧಾರ್ಥ್​ ಕಾಣಿಸಿಕೊಳ್ಳಲಿದ್ದಾರಂತೆ.

ಆದಿಪುರುಷ್​ ಚಿತ್ರ ರಾಮಾಯಣ ಆಧರಿಸಿ ಸಿದ್ಧಗೊಳ್ಳುತ್ತಿರುವ ಚಿತ್ರ. ಈ ಸಿನಿಮಾದಲ್ಲಿ ರಾಮನಾಗಿ ಪ್ರಭಾಸ್​ ಕಾಣಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಸಿನಿಮಾ ತಂಡ ಪ್ರಭಾಸ್​ ಅವರ ರಾಮನ ಲುಕ್​ ರಿಲೀಸ್​ ಮಾಡಿತ್ತು. ಇದನ್ನು ನೋಡಿ ಅಭಿಮಾನಿಗಳು ಫಿದಾ ಆಗಿದ್ದರು. ಈಗ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್ ಒಂದು ಸಿಕ್ಕಿದೆ.  ​

ರಾಮಾಯಣದಲ್ಲಿ ರಾವಣನ ಪಾತ್ರ ತುಂಬಾನೇ ಪ್ರಾಮುಖ್ಯತೆ ಪಡೆದುಕೊಂಡಿದೆ. ರಾವಣನಿಗೆ ಇಂದ್ರಜಿತ್​ ಹೆಸರಿನ ಮಗ ಇರುತ್ತಾನೆ. ಈ ಪಾತ್ರಕ್ಕೆ ಸಿದ್ಧಾರ್ಥ್​ ಜೀವ ತುಂಬಲಿದ್ದಾರೆ ಎನ್ನಲಾಗಿದೆ. ಹಿಂದಿ ಟಿವಿ ಸೀರಿಯಲ್​ಗಳ ಮೂಲಕ ಸಿದ್ಧಾರ್ಥ್​ ಹೆಚ್ಚು ಚಿರಪರಿಚಿತರಾಗಿದ್ದಾರೆ. ಹಮ್ಟಿ ಶರ್ಮಾ ಕಿ ದುಲ್ಹನಿಯಾ ಸಿನಿಮಾದಲ್ಲಿ ಸಿದ್ಧಾರ್ಥ್​ ಮುಖ್ಯಭೂಮಿಕೆ ನಿರ್ವಹಿಸಿದ್ದರು.

ಆದಿಪುರುಷ್​ ಚಿತ್ರದ ಕಲಾವರ್ಗ ತುಂಬಾ ದೊಡ್ಡದಿದೆ. ದಿನ ಕಳೆದಂತೆ ಹೊಸ ಹೊಸ ಕಲಾವಿದರು ಸಿನಿಮಾ ತಂಡ ಸೇರಿಕೊಳ್ಳುತ್ತಿದ್ದಾರೆ. ದೊಡ್ಡ ಬಜೆಟ್​ನಲ್ಲಿ ಸಿನಿಮಾ ಸಿದ್ಧಗೊಳ್ಳುತ್ತಿದೆ. ರಾಮಾಯಣದ ಒಂದು ಭಾಗವನ್ನು ಆಧಾರಿಸಿ ಈ ಸಿನಿಮಾ ಸಿದ್ಧಗೊಳ್ಳುತ್ತಿದೆ.

ಬಾಹುಬಲಿ ಸಿನಿಮಾ ತೆರೆಕಂಡ ನಂತರದಲ್ಲಿ ಪ್ರಭಾಸ್​ ಸ್ಟಾರ್​​ಗಿರಿ ದೊಡ್ಡದಾಗಿದೆ. ಅವರಿಗೆ ಬಾಲಿವುಡ್​ನಿಂದಲೂ ಆಫರ್​ ಬರುತ್ತಿವೆ. ಸದ್ಯ, ಪ್ರಭಾಸ್​ ಮೂರು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜತೆಗೆ ಮತ್ತೊಂದು ಸಿನಿಮಾವನ್ನು ಅವರು ಸೈಲೆಂಟ್​ ಆಗಿ ಒಪ್ಪಿಕೊಂಡಿದ್ದಾರೆ ಎನ್ನುವ ಮಾತು ಇತ್ತೀಚೆಗೆ ಕೇಳಿ ಬಂದಿತ್ತು.

ಇದನ್ನೂ ಓದಿ: ಕ್ಯೂರಿಯಾಸಿಟಿ ಹೆಚ್ಚಿಸಿದ ನೂತನ ಚಿತ್ರ ‘ಆದಿಪುರುಷ್’ ಅವತಾರದಲ್ಲಿ ಬರ್ತಿದ್ದಾರೆ ಪ್ರಭಾಸ್, ರಾಮನಿಗೆ ಸೀತೆ ಯಾರು ಗೊತ್ತಾ?

ಪ್ರಭಾಸ್​, ಸೈಫ್​ ಅಲಿ ಖಾನ್​ ನಟನೆಯ ಆದಿಪುರುಷ್​ ಸಿನಿಮಾದಲ್ಲಿ ಕಿಚ್ಚ ಸುದೀಪ್​ಗೆ ಯಾವ ಪಾತ್ರ?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ