AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವನಾಂಶ ಕೇಳದೇ ವಿಚ್ಛೇದನ ಪಡೆದ ‘ಬಿಂದಾಸ್’ ಚಿತ್ರದ ನಟಿ ಹನ್ಸಿಕಾ ಮೋಟ್ವಾನಿ

‘ಬಿಂದಾಸ್’ ಸಿನಿಮಾದ ನಟಿ ಹನ್ಸಿಕಾ ಮೋಟ್ವಾನಿ ಅವರ ದಾಂಪತ್ಯ ಜೀವನ ಅಂತ್ಯವಾಗಿದೆ. ಅದ್ದೂರಿಯಾಗಿ ಮದುವೆಯಾಗಿ ಕೇವಲ 4 ವರ್ಷ ಕಳೆಯುವುದರಲ್ಲಿ ಅವರು ವಿಚ್ಛೇದನ ಪಡೆದಿದ್ದಾರೆ. ಜೀವನಾಂಶಕ್ಕೆ ಬೇಡಿಕೆ ಸಲ್ಲಿಸದೇ ಹನ್ಸಿಕಾ ಮೋಟ್ವಾನಿ ಅವರು ಡಿವೋರ್ಸ್ ಪಡೆದುಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

ಜೀವನಾಂಶ ಕೇಳದೇ ವಿಚ್ಛೇದನ ಪಡೆದ ‘ಬಿಂದಾಸ್’ ಚಿತ್ರದ ನಟಿ ಹನ್ಸಿಕಾ ಮೋಟ್ವಾನಿ
Bindaas Movie Poster, Hansika Motwani, Sohael Khaturiya
ಮದನ್​ ಕುಮಾರ್​
|

Updated on: Mar 11, 2026 | 5:30 PM

Share

ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ (Hansika Motwani) ಅವರ ವೈವಾಹಿಕ ಜೀವನ ಅಧಿಕೃತವಾಗಿ ಅಂತ್ಯಗೊಂಡಿದೆ. ಕಳೆದ ಒಂದು ವರ್ಷದಿಂದ ಹರಿದಾಡುತ್ತಿದ್ದ ವಿಚ್ಛೇದನದ ವದಂತಿಗಳಿಗೆ ಈಗ ಮುದ್ರೆ ಬಿದ್ದಿದೆ. ಮುಂಬೈನ ಬಾಂದ್ರಾ ಕೌಟುಂಬಿಕ ನ್ಯಾಯಾಲಯವು ಹನ್ಸಿಕಾ ಮತ್ತು ಉದ್ಯಮಿ ಸೊಹೈಲ್ ಖತುರಿಯಾ ಅವರಿಗೆ ವಿಚ್ಛೇದನ (Divorce) ಮಂಜೂರು ಮಾಡಿದೆ. ಹನ್ಸಿಕಾ ಮೋಟ್ವಾನಿ ಮತ್ತು ಸೊಹೈಲ್ ಅವರು ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ವಿಶೇಷವೆಂದರೆ, ಹನ್ಸಿಕಾ ಅವರು ಪತಿಯಿಂದ ಯಾವುದೇ ರೀತಿಯ ಜೀವನಾಂಶ (Alimony) ಕೇಳಿಲ್ಲ.

ನ್ಯಾಯಾಲಯದಲ್ಲಿ ಹನ್ಸಿಕಾ ಪರವಾಗಿ ವಕೀಲ ಅದ್ನಾನ್ ಶೇಖ್ ವಾದ ಮಂಡಿಸಿದ್ದರು. ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯ ಪ್ರಕಾರ, ಮದುವೆಯಾದ ಕೆಲವೇ ದಿನಗಳಲ್ಲಿ ದಂಪತಿ ನಡುವೆ ಭಿನ್ನಾಭಿಪ್ರಾಯಗಳು ತಲೆದೋರಿದ್ದವು. ಅವರ ಜೀವನಶೈಲಿ, ಆಲೋಚನೆಗಳು ಮತ್ತು ಸ್ವಭಾವಗಳಲ್ಲಿನ ವ್ಯತ್ಯಾಸಗಳು ಪದೇ ಪದೇ ಜಗಳಕ್ಕೆ ಕಾರಣವಾಗುತ್ತಿದ್ದವು. ಸಣ್ಣ ವಿಷಯಗಳೂ ದೊಡ್ಡ ವಿವಾದಗಳಾಗಿ ಮಾರ್ಪಡುತ್ತಿದ್ದವು ಎನ್ನಲಾಗಿದೆ.

ಇಬ್ಬರ ನಡುವಿನ ಮನಸ್ತಾಪವನ್ನು ಸರಿಪಡಿಸಲು ಕುಟುಂಬದ ಸದಸ್ಯರು ಮತ್ತು ಆಪ್ತ ಸ್ನೇಹಿತರು ಹಲವು ಬಾರಿ ಪ್ರಯತ್ನಿಸಿದರೂ ಅದು ಸಫಲವಾಗಲಿಲ್ಲ. ಅಂತಿಮವಾಗಿ, 2024ರ ಜುಲೈ 2ರಿಂದ ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದರು ಮತ್ತು ಈಗ ಕಾನೂನುಬದ್ಧವಾಗಿ ಬೇರ್ಪಟ್ಟಿದ್ದಾರೆ. ಈ ದಂಪತಿಗೆ ಮಕ್ಕಳಿಲ್ಲ. ಪರಸ್ಪರ ಯಾವುದೇ ಜೀವನಾಂಶ ನೀರೀಕ್ಷೆ ಮಾಡಿಲ್ಲ.

ಹನ್ಸಿಕಾ ಮತ್ತು ಸೊಹೈಲ್ 2022ರ ಡಿಸೆಂಬರ್ 4ರಂದು ಜೈಪುರದ ಅರಮನೆಯಲ್ಲಿ ಅತ್ಯಂತ ಅದ್ದೂರಿಯಾಗಿ ವಿವಾಹವಾಗಿದ್ದರು. ಇವರ ವಿವಾಹ ಪೂರ್ವ ಶಾಸ್ತ್ರಗಳಾದ ಮೆಹಂದಿ, ಸಂಗೀತ್ ಮತ್ತು ಹಳದಿ ಸಮಾರಂಭಗಳು ಸುದ್ದಿಯಾಗಿದ್ದವು. ಅಷ್ಟೇ ಅಲ್ಲದೆ, ಇವರ ಪ್ರೇಮ ಕಥೆ ಮತ್ತು ಮದುವೆಯ ಸಿದ್ಧತೆಗಳ ಬಗ್ಗೆ ‘ಹನ್ಸಿಕಾಸ್ ಲವ್ ಶಾದಿ ಡ್ರಾಮಾ’ ಎಂಬ ರಿಯಾಲಿಟಿ ಶೋನಲ್ಲಿ ಪ್ರಸಾರ ಮಾಡಲಾಗಿತ್ತು.

ಇದನ್ನೂ ಓದಿ: ‘ಬಿಂದಾಸ್​’ ನಟಿಯ ಬೀಚ್​ ಫೋಟೋಸ್​; ಕಡಲ ತೀರದಲ್ಲಿ ನಿಂತು ಪೋಸ್​ ನೀಡಿದ ಹನ್ಸಿಕಾ ಮೋಟ್ವಾನಿ

ಹನ್ಸಿಕಾ ಮೊಟ್ವಾನಿ ಅವರಿಗೆ ಈಗ 34 ವರ್ಷ ವಯಸ್ಸು. ಬಾಲನಟಿಯಾಗಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಕನ್ನಡ, ತೆಲುಗು, ಹಿಂದಿ, ಮಲಯಾಳಂ, ತಮಿಳು ಭಾಷೆಯ ಸಿನಿಮಾಗಳಲ್ಲಿ ನಾಯಕಿಯಾಗಿ ಅವರು ನಟಿಸಿದರು. ಹನ್ಸಿಕಾ ಅವರು ನಟಿಸಿದ ಏಕೈಕ ಕನ್ನಡ ಸಿನಿಮಾ ‘ಬಿಂದಾಸ್’. 2008ರಲ್ಲಿ ತೆರೆಕಂಡಿದ್ದ ಆ ಸಿನಿಮಾದಲ್ಲಿ ಹನ್ಸಿಕಾ ಅವರು ಪುನೀತ್ ರಾಜ್​ಕುಮಾರ್​ಗೆ ಜೋಡಿ ಆಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು