AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ಒಬಿಸಿ ಮೋರ್ಚಾ ದೂರು

ಶಿವರಾಜ್​ಕುಮಾರ್​ ಅಭಿನಯದ ‘ಕರಟಕ ದಮನಕ’ ಸಿನಿಮಾ ಮಾ.8ರಂದು ರಿಲೀಸ್​ ಆಗಿತ್ತು. ಅನೇಕ ಕಡೆಗಳಲ್ಲಿ ಈ ಚಿತ್ರ ಪ್ರದರ್ಶನ ಆಗುತ್ತಿದೆ. ಹಲವು ಜಾಹೀರಾತುಗಳಲ್ಲೂ ಅವರು ನಟಿಸಿದ್ದಾರೆ. ಶಿವರಾಜ್​ಕುಮಾರ್​ ಕಾಣಿಸಿಕೊಂಡ ಜಾಹೀರಾತು, ಸಿನಿಮಾ ಮತ್ತು ಬಿಲ್​ಬೋರ್ಡ್​ಗಳ ಪ್ರದರ್ಶನಕ್ಕೆ ನಿಷೇಧ ಹೇರಬೇಕು ಎಂದು ಚುನಾವಣಾ ಆಯೋಗಕ್ಕೆ ಬಿಜೆಪಿ ಒಬಿಸಿ ಮೋರ್ಚಾ ಮನವಿ ಮಾಡಿಕೊಂಡಿದೆ.

ಶಿವರಾಜ್​ಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ಒಬಿಸಿ ಮೋರ್ಚಾ ದೂರು
ಶಿವರಾಜ್​ಕುಮಾರ್​
ಮದನ್​ ಕುಮಾರ್​
|

Updated on: Mar 22, 2024 | 3:10 PM

Share

ನಟ ಶಿವರಾಜ್​ಕುಮಾರ್​ (Shivarajkumar) ಅವರು ಪತ್ನಿ ಗೀತಾ ಪರವಾಗಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಗೀತಾ ಶಿವರಾಜ್​ಕುಮಾರ್ (Geetha Shivarajkumar)​ ಸ್ಪರ್ಧಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವರಾಜ್​ಕುಮಾರ್​ ಅವರ ಸಿನಿಮಾ, ಜಾಹೀರಾತು ಹಾಗೂ ಬಿಲ್​ಬೋರ್ಡ್​ಗಳನ್ನು ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ (Election Commission) ಭಾರತೀಯ ಜನತಾ ಪಾರ್ಟಿಯ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದಿಂದ ದೂರು ನೀಡಲಾಗಿದೆ. ಮೋರ್ಚಾದ ಅಧ್ಯಕ್ಷ ಆರ್​. ರಘು ಅವರು ಚುನಾವಣಾ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

‘ರಾಜ್ಯದಲ್ಲಿ ಪ್ರಭಾವಿ ವ್ಯಕ್ತಿ ಆಗಿರುವ ಶಿವರಾಜ್​ಕುಮಾರ್​ ಅವರು ರಾಜ್ಯದ್ಯಂತ ಕಾಂಗ್ರೆಸ್​ ಪಕ್ಷದ ಪರ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಸಿನಿಮಾ ಮತ್ತು ವೈಯಕ್ತಿಕ ವರ್ಚಸ್ಸಿನ ಮೂಲಕ ಅವರು ರಾಜ್ಯದಲ್ಲಿ ಪ್ರಭಾವ ಹೊಂದಿದ್ದಾರೆ. ಲೋಕಸಭಾ ಚುನಾವಣೆ ಮುಗಿಯುವ ತನಕ ಶಿವರಾಜ್​ಕುಮಾರ್​ ಅವರ ಸಿನಿಮಾ, ಜಾಹೀರಾತು, ಬಿಲ್​ಬೋರ್ಡ್​ಗಳನ್ನು ಪ್ರದರ್ಶನ ಮಾಡದಂತೆ ಚಿತ್ರಮಂದಿರ, ಟಿವಿ ಚಾನೆಲ್​, ಸೋಶಿಯಲ್​ ಮೀಡಿಯಾ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಆದೇಶ ನೀಡಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಳ್ಳುತ್ತೇನೆ’ ಎಂದು ರಘು ಅವರು ಪತ್ರ ಬರೆದಿದ್ದಾರೆ.

‘ಚುನಾವಣಾ ಆಯೋಗವು ನ್ಯಾಯಯುತವಾದ ಚುನಾವಣೆಯನ್ನು ನಡೆಸುತ್ತದೆ ಎಂದು ನನಗೆ ಭರವಸೆ ಇದೆ. ನನ್ನ ಮನವಿಗೆ ಆಯೋಗವು ಸ್ಪಂದಿಸುತ್ತದೆ ಮತ್ತು ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದು ನಂಬಿದ್ದೇನೆ’ ಎಂದು ಪತ್ರವನ್ನು ಪೂರ್ಣಗೊಳಿಸಿದ್ದಾರೆ ರಘು.

ಇದನ್ನೂ ಓದಿ: ‘ಶಿವಮೊಗ್ಗ ಹೋಗಿ ಗೀತಾ ಅವರನ್ನು ಗೆಲ್ಲಿಸಿಕೊಂಡು ಬರಬೇಕು’; ಶಿವರಾಜ್​ಕುಮಾರ್

ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಏಪ್ರಿಲ್​ 26ರಂದು ಮತದಾನ ನಡೆಯಲಿದ್ದು, 2ನೇ ಹಂತದಲ್ಲಿ ಮೇ 7ರಂದು ಇನ್ನುಳಿದ 14 ಕ್ಷೇತ್ರಗಳಲ್ಲಿ ಮತನಾದ ನಡೆಯಲಿದೆ. ಗೀತಾ ಶಿವರಾಜ್​ಕುಮಾರ್​ ಸ್ಪರ್ಧಿಸುತ್ತಿರುವ ಶಿವಮೊಗ್ಗದಲ್ಲಿ ಮೇ 7ರಂದು ಮತದಾನ ನಡೆಯಲಿದ್ದು, ಅವರ ಪರವಾಗಿ ಚಿತ್ರರಂಗದ ಅನೇಕರು ಪ್ರಚಾರ ಮಾಡಲಿದ್ದಾರೆ.

ಇದನ್ನೂ ಓದಿ: ‘ಅಪ್ಪಾಜಿಗೂ ಪಾಲಿಟಿಕ್ಸ್​ ಬೇಕು, ಅದಕ್ಕಾಗಿಯೇ..’: ಮನದ ಮಾತು ತಿಳಿಸಿದ ಶಿವಣ್ಣ

ಶಿವರಾಜ್​ಕುಮಾರ್​ ನಟನೆಯ ‘ಕರಟಕ ದಮನಕ’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿತ್ತು. ಹಲವು ಕಡೆಗಳಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಅನೇಕ ಜಾಹೀರಾತುಗಳಲ್ಲಿ ಅವರು ನಟಿಸಿದ್ದಾರೆ. ಶಿವಣ್ಣ ಕಾಣಿಸಿಕೊಂಡಿರುವ ಸಿನಿಮಾ, ಜಾಹೀರಾತು ಹಾಗೂ ಬಿಲ್​ಬೋರ್ಡ್​ಗಳಿಗೆ ನಿಷೇಧ ಹೇರಬೇಕು ಎಂದು ಚುನಾವಣಾ ಆಯೋಗಕ್ಕೆ ಭಾರತೀಯ ಜನತಾ ಪಕ್ಷದ ಒಬಿಸಿ ಮೋರ್ಚಾ ಮನವಿ ಮಾಡಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!