ಬಾಲಿವುಡ್​ ನಟ ಆಮೀರ್​ಖಾನ್​ಗೆ ಕೊರೊನಾ ಸೋಂಕು; ಮನೆಯಲ್ಲೇ ಕ್ವಾರಂಟೈನ್

ಕಳೆದವಾರ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಆಮೀರ್ ಖಾನ್​, ಅದರ ಮರುದಿನವೇ ಸೋಷಿಯಲ್​ ಮೀಡಿಯಾಗಳಿಗೆ ಗುಡ್​ಬೈ ಹೇಳಿದ್ದರು. ನಾನು ನನ್ನ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ಬಿಟ್ಟರೂ ಹೇಗಾದರೂ ಸರಿ ನಿಮ್ಮೊಟ್ಟಿಗೆ ಸಂಪರ್ಕದಲ್ಲಿ ಇರುತ್ತೇನೆ. ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಹೇಳಿದ್ದರು.

ಬಾಲಿವುಡ್​ ನಟ ಆಮೀರ್​ಖಾನ್​ಗೆ ಕೊರೊನಾ ಸೋಂಕು; ಮನೆಯಲ್ಲೇ ಕ್ವಾರಂಟೈನ್
ಆಮೀರ್ ಖಾನ್​
Follow us
|

Updated on: Mar 24, 2021 | 1:10 PM

ದೇಶಾದ್ಯಂತ ಕೊರೊನಾ ವೈರಸ್​ ಪ್ರಸರಣ ಮತ್ತೆ ಹೆಚ್ಚಾಗಿದೆ. ಅದರಲ್ಲೂ ಮುಂಬೈ, ಮಹಾರಾಷ್ಟ್ರದಲ್ಲಿ ಎರಡನೇ ಅಲೆಯ ಅಬ್ಬರ ಜಾಸ್ತಿಯೇ ಇದೆ. ಇತ್ತೀಚೆಗೆ ಬಾಲಿವುಡ್​ ನಟರಾದ ರಣಬೀರ್ ಕಪೂರ್​, ಮನೋಜ್​ ಬಾಜಪೇಯಿ, ಸಿದ್ಧಾಂತ್​ ಚತುರ್ವೇದಿ, ತಾರಾ ಸುತಾರಿಯಾ, ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಇತರರು ತಾವು ಕೊವಿಡ್​-19 ಸೋಂಕಿಗೆ ಒಳಗಾಗಿ, ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದರು. ಅವರ ಸಾಲಿಗೆ ಈಗ ಮತ್ತೋರ್ವ ಬಾಲಿವುಡ್​ ನಟ ಸೇರ್ಪಡೆಯಾಗಿದ್ದಾರೆ. ನಟ ಆಮೀರ್​ ಖಾನ್​ ಅವರಿಗೂ ಈಗ ಕೊರೊನಾ ಸೋಂಕು ದೃಢಪಟ್ಟಿದೆ.

ನಟ ಅಮೀರ್​ ಖಾನ್​ ಕೊರೊನಾ ಸೋಂಕಿತರಾಗಿದ್ದಾರೆ. ಹಾಗಾಗಿ ಮನೆಯಲ್ಲೇ ಕ್ವಾರಂಟೈನ್​ ಆಗಿದ್ದಾರೆ. ತಮ್ಮ ಸಂಪರ್ಕಕ್ಕೆ ಬಂದವರು, ಕೆಲಸದ ಸಿಬ್ಬಂದಿಯವರಿಗೆ ಟೆಸ್ಟ್​ಗೆ ಒಳಗಾಗಲು ಸೂಚಿಸಿದ್ದಾರೆ. ಹಾಗೇ, ಕೊರೊನಾ ಬಗ್ಗೆ ಎಲ್ಲ ರೀತಿಯ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದೂ ಹೇಳಿದ್ದಾರೆ. ಆಮೀರ್​ಖಾನ್​ ಸಂಪೂರ್ಣ ಗುಣಮುಖರಾಗುವವರೆಗೂ ಲಾಲ್​ ಸಿಂಗ್ ಛಡ್ಡಾ ಸಿನಿಮಾ ಶೂಟಿಂಗ್​ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಆಮೀರ್​ಖಾನ್​ ಆಪ್ತ ಮೂಲಗಳು ತಿಳಿಸಿವೆ.

ಕಳೆದವಾರ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಆಮೀರ್ ಖಾನ್​, ಅದರ ಮರುದಿನವೇ ಸೋಷಿಯಲ್​ ಮೀಡಿಯಾಗಳಿಗೆ ಗುಡ್​ಬೈ ಹೇಳಿದ್ದರು. ನಾನು ನನ್ನ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ಬಿಟ್ಟರೂ ಹೇಗಾದರೂ ಸರಿ ನಿಮ್ಮೊಟ್ಟಿಗೆ ಸಂಪರ್ಕದಲ್ಲಿ ಇರುತ್ತೇನೆ. ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಹೇಳಿದ್ದರು. ಆಮೀರ್​ ಖಾನ್ ಅವರು ಲಾಲ್​ ಸಿಂಗ್ ಛಡ್ಡಾ ಸಿನಿಮಾ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಕರೀನಾ ಕಪೂರ್​-ಆಮೀರ್​ ಖಾನ್ ನಟನೆಯ ಈ ಚಿತ್ರ 2021ರ ಕೊನೆಯಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಬರ್ತ್​ ಡೇ ಮರುದಿನವೇ ಸೋಷಿಯಲ್ ಮೀಡಿಯಾಗಳಿಗೆ ಗುಡ್​ ಬೈ ಹೇಳಿದ ಆಮೀರ್ ಖಾನ್​; ನೆಪ ಹೇಳುವುದನ್ನು ಬಿಡಲು ನಿರ್ಧರಿಸಿದ್ದಾರಂತೆ ಮಿ.ಪರ್ಫೆಕ್ಷನಿಸ್ಟ್‌ ​

ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ