AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ ನಟ ಆಮೀರ್​ಖಾನ್​ಗೆ ಕೊರೊನಾ ಸೋಂಕು; ಮನೆಯಲ್ಲೇ ಕ್ವಾರಂಟೈನ್

ಕಳೆದವಾರ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಆಮೀರ್ ಖಾನ್​, ಅದರ ಮರುದಿನವೇ ಸೋಷಿಯಲ್​ ಮೀಡಿಯಾಗಳಿಗೆ ಗುಡ್​ಬೈ ಹೇಳಿದ್ದರು. ನಾನು ನನ್ನ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ಬಿಟ್ಟರೂ ಹೇಗಾದರೂ ಸರಿ ನಿಮ್ಮೊಟ್ಟಿಗೆ ಸಂಪರ್ಕದಲ್ಲಿ ಇರುತ್ತೇನೆ. ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಹೇಳಿದ್ದರು.

ಬಾಲಿವುಡ್​ ನಟ ಆಮೀರ್​ಖಾನ್​ಗೆ ಕೊರೊನಾ ಸೋಂಕು; ಮನೆಯಲ್ಲೇ ಕ್ವಾರಂಟೈನ್
ಆಮೀರ್ ಖಾನ್​
Lakshmi Hegde
|

Updated on: Mar 24, 2021 | 1:10 PM

Share

ದೇಶಾದ್ಯಂತ ಕೊರೊನಾ ವೈರಸ್​ ಪ್ರಸರಣ ಮತ್ತೆ ಹೆಚ್ಚಾಗಿದೆ. ಅದರಲ್ಲೂ ಮುಂಬೈ, ಮಹಾರಾಷ್ಟ್ರದಲ್ಲಿ ಎರಡನೇ ಅಲೆಯ ಅಬ್ಬರ ಜಾಸ್ತಿಯೇ ಇದೆ. ಇತ್ತೀಚೆಗೆ ಬಾಲಿವುಡ್​ ನಟರಾದ ರಣಬೀರ್ ಕಪೂರ್​, ಮನೋಜ್​ ಬಾಜಪೇಯಿ, ಸಿದ್ಧಾಂತ್​ ಚತುರ್ವೇದಿ, ತಾರಾ ಸುತಾರಿಯಾ, ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಇತರರು ತಾವು ಕೊವಿಡ್​-19 ಸೋಂಕಿಗೆ ಒಳಗಾಗಿ, ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದರು. ಅವರ ಸಾಲಿಗೆ ಈಗ ಮತ್ತೋರ್ವ ಬಾಲಿವುಡ್​ ನಟ ಸೇರ್ಪಡೆಯಾಗಿದ್ದಾರೆ. ನಟ ಆಮೀರ್​ ಖಾನ್​ ಅವರಿಗೂ ಈಗ ಕೊರೊನಾ ಸೋಂಕು ದೃಢಪಟ್ಟಿದೆ.

ನಟ ಅಮೀರ್​ ಖಾನ್​ ಕೊರೊನಾ ಸೋಂಕಿತರಾಗಿದ್ದಾರೆ. ಹಾಗಾಗಿ ಮನೆಯಲ್ಲೇ ಕ್ವಾರಂಟೈನ್​ ಆಗಿದ್ದಾರೆ. ತಮ್ಮ ಸಂಪರ್ಕಕ್ಕೆ ಬಂದವರು, ಕೆಲಸದ ಸಿಬ್ಬಂದಿಯವರಿಗೆ ಟೆಸ್ಟ್​ಗೆ ಒಳಗಾಗಲು ಸೂಚಿಸಿದ್ದಾರೆ. ಹಾಗೇ, ಕೊರೊನಾ ಬಗ್ಗೆ ಎಲ್ಲ ರೀತಿಯ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದೂ ಹೇಳಿದ್ದಾರೆ. ಆಮೀರ್​ಖಾನ್​ ಸಂಪೂರ್ಣ ಗುಣಮುಖರಾಗುವವರೆಗೂ ಲಾಲ್​ ಸಿಂಗ್ ಛಡ್ಡಾ ಸಿನಿಮಾ ಶೂಟಿಂಗ್​ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಆಮೀರ್​ಖಾನ್​ ಆಪ್ತ ಮೂಲಗಳು ತಿಳಿಸಿವೆ.

ಕಳೆದವಾರ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಆಮೀರ್ ಖಾನ್​, ಅದರ ಮರುದಿನವೇ ಸೋಷಿಯಲ್​ ಮೀಡಿಯಾಗಳಿಗೆ ಗುಡ್​ಬೈ ಹೇಳಿದ್ದರು. ನಾನು ನನ್ನ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ಬಿಟ್ಟರೂ ಹೇಗಾದರೂ ಸರಿ ನಿಮ್ಮೊಟ್ಟಿಗೆ ಸಂಪರ್ಕದಲ್ಲಿ ಇರುತ್ತೇನೆ. ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಹೇಳಿದ್ದರು. ಆಮೀರ್​ ಖಾನ್ ಅವರು ಲಾಲ್​ ಸಿಂಗ್ ಛಡ್ಡಾ ಸಿನಿಮಾ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಕರೀನಾ ಕಪೂರ್​-ಆಮೀರ್​ ಖಾನ್ ನಟನೆಯ ಈ ಚಿತ್ರ 2021ರ ಕೊನೆಯಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಬರ್ತ್​ ಡೇ ಮರುದಿನವೇ ಸೋಷಿಯಲ್ ಮೀಡಿಯಾಗಳಿಗೆ ಗುಡ್​ ಬೈ ಹೇಳಿದ ಆಮೀರ್ ಖಾನ್​; ನೆಪ ಹೇಳುವುದನ್ನು ಬಿಡಲು ನಿರ್ಧರಿಸಿದ್ದಾರಂತೆ ಮಿ.ಪರ್ಫೆಕ್ಷನಿಸ್ಟ್‌ ​

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ