AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ ನಟ ಆಮೀರ್​ಖಾನ್​ಗೆ ಕೊರೊನಾ ಸೋಂಕು; ಮನೆಯಲ್ಲೇ ಕ್ವಾರಂಟೈನ್

ಕಳೆದವಾರ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಆಮೀರ್ ಖಾನ್​, ಅದರ ಮರುದಿನವೇ ಸೋಷಿಯಲ್​ ಮೀಡಿಯಾಗಳಿಗೆ ಗುಡ್​ಬೈ ಹೇಳಿದ್ದರು. ನಾನು ನನ್ನ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ಬಿಟ್ಟರೂ ಹೇಗಾದರೂ ಸರಿ ನಿಮ್ಮೊಟ್ಟಿಗೆ ಸಂಪರ್ಕದಲ್ಲಿ ಇರುತ್ತೇನೆ. ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಹೇಳಿದ್ದರು.

ಬಾಲಿವುಡ್​ ನಟ ಆಮೀರ್​ಖಾನ್​ಗೆ ಕೊರೊನಾ ಸೋಂಕು; ಮನೆಯಲ್ಲೇ ಕ್ವಾರಂಟೈನ್
ಆಮೀರ್ ಖಾನ್​
Lakshmi Hegde
|

Updated on: Mar 24, 2021 | 1:10 PM

Share

ದೇಶಾದ್ಯಂತ ಕೊರೊನಾ ವೈರಸ್​ ಪ್ರಸರಣ ಮತ್ತೆ ಹೆಚ್ಚಾಗಿದೆ. ಅದರಲ್ಲೂ ಮುಂಬೈ, ಮಹಾರಾಷ್ಟ್ರದಲ್ಲಿ ಎರಡನೇ ಅಲೆಯ ಅಬ್ಬರ ಜಾಸ್ತಿಯೇ ಇದೆ. ಇತ್ತೀಚೆಗೆ ಬಾಲಿವುಡ್​ ನಟರಾದ ರಣಬೀರ್ ಕಪೂರ್​, ಮನೋಜ್​ ಬಾಜಪೇಯಿ, ಸಿದ್ಧಾಂತ್​ ಚತುರ್ವೇದಿ, ತಾರಾ ಸುತಾರಿಯಾ, ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಇತರರು ತಾವು ಕೊವಿಡ್​-19 ಸೋಂಕಿಗೆ ಒಳಗಾಗಿ, ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದರು. ಅವರ ಸಾಲಿಗೆ ಈಗ ಮತ್ತೋರ್ವ ಬಾಲಿವುಡ್​ ನಟ ಸೇರ್ಪಡೆಯಾಗಿದ್ದಾರೆ. ನಟ ಆಮೀರ್​ ಖಾನ್​ ಅವರಿಗೂ ಈಗ ಕೊರೊನಾ ಸೋಂಕು ದೃಢಪಟ್ಟಿದೆ.

ನಟ ಅಮೀರ್​ ಖಾನ್​ ಕೊರೊನಾ ಸೋಂಕಿತರಾಗಿದ್ದಾರೆ. ಹಾಗಾಗಿ ಮನೆಯಲ್ಲೇ ಕ್ವಾರಂಟೈನ್​ ಆಗಿದ್ದಾರೆ. ತಮ್ಮ ಸಂಪರ್ಕಕ್ಕೆ ಬಂದವರು, ಕೆಲಸದ ಸಿಬ್ಬಂದಿಯವರಿಗೆ ಟೆಸ್ಟ್​ಗೆ ಒಳಗಾಗಲು ಸೂಚಿಸಿದ್ದಾರೆ. ಹಾಗೇ, ಕೊರೊನಾ ಬಗ್ಗೆ ಎಲ್ಲ ರೀತಿಯ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದೂ ಹೇಳಿದ್ದಾರೆ. ಆಮೀರ್​ಖಾನ್​ ಸಂಪೂರ್ಣ ಗುಣಮುಖರಾಗುವವರೆಗೂ ಲಾಲ್​ ಸಿಂಗ್ ಛಡ್ಡಾ ಸಿನಿಮಾ ಶೂಟಿಂಗ್​ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಆಮೀರ್​ಖಾನ್​ ಆಪ್ತ ಮೂಲಗಳು ತಿಳಿಸಿವೆ.

ಕಳೆದವಾರ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಆಮೀರ್ ಖಾನ್​, ಅದರ ಮರುದಿನವೇ ಸೋಷಿಯಲ್​ ಮೀಡಿಯಾಗಳಿಗೆ ಗುಡ್​ಬೈ ಹೇಳಿದ್ದರು. ನಾನು ನನ್ನ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ಬಿಟ್ಟರೂ ಹೇಗಾದರೂ ಸರಿ ನಿಮ್ಮೊಟ್ಟಿಗೆ ಸಂಪರ್ಕದಲ್ಲಿ ಇರುತ್ತೇನೆ. ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಹೇಳಿದ್ದರು. ಆಮೀರ್​ ಖಾನ್ ಅವರು ಲಾಲ್​ ಸಿಂಗ್ ಛಡ್ಡಾ ಸಿನಿಮಾ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಕರೀನಾ ಕಪೂರ್​-ಆಮೀರ್​ ಖಾನ್ ನಟನೆಯ ಈ ಚಿತ್ರ 2021ರ ಕೊನೆಯಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಬರ್ತ್​ ಡೇ ಮರುದಿನವೇ ಸೋಷಿಯಲ್ ಮೀಡಿಯಾಗಳಿಗೆ ಗುಡ್​ ಬೈ ಹೇಳಿದ ಆಮೀರ್ ಖಾನ್​; ನೆಪ ಹೇಳುವುದನ್ನು ಬಿಡಲು ನಿರ್ಧರಿಸಿದ್ದಾರಂತೆ ಮಿ.ಪರ್ಫೆಕ್ಷನಿಸ್ಟ್‌ ​

Follow Us
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ