AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರೀನಾ ತೊಟ್ಟ ಮಾಸ್ಕ್​ ಬೆಲೆ ಇಷ್ಟೊಂದಾ? ಐಟಿ ಮಂದಿಯ ವೇತನವೂ ಇಷ್ಟಿರಲ್ಲ ಎಂದ ಫ್ಯಾನ್ಸ್​​

ಕೊರೊನಾ ವೈರಸ್​ ಎರಡನೇ ಅಲೆಯ ಅಬ್ಬರ ಹೆಚ್ಚುತ್ತಿದೆ. ಹೀಗಾಗಿ, ಎಲ್ಲಾ ಸೆಲೆಬ್ರಿಟಿಗಳು ಮಾಸ್ಕ್​ ಧರಿಸಿ, ಕೊರೊನಾ ವೈರಸ್​​ ಹರಡುವಿಕೆ ಕಡಿಮೆ ಮಾಡಲು ಕೋರುತ್ತಿದ್ದಾರೆ.

ಕರೀನಾ ತೊಟ್ಟ ಮಾಸ್ಕ್​ ಬೆಲೆ ಇಷ್ಟೊಂದಾ? ಐಟಿ ಮಂದಿಯ ವೇತನವೂ ಇಷ್ಟಿರಲ್ಲ ಎಂದ ಫ್ಯಾನ್ಸ್​​
ರಾಜೇಶ್ ದುಗ್ಗುಮನೆ
|

Updated on: Apr 07, 2021 | 10:11 PM

Share

ಉಡುಗೆ ವಿಚಾರದಲ್ಲಿ ಕರೀನಾ ಕಪೂರ್​ ಪದೇ ಪದೇ ಸುದ್ದಿಯಾಗುತ್ತಲೇ ಇರುತ್ತಾರೆ. ಅವರು ತೊಡುವ ದುಬಾರಿ ಬೆಲೆಯ ಸೀರೆ, ಜಿಮ್​ ಉಡುಗೆ, ಅವರ ಬಳಿ ಇರುವ ಬ್ಯಾಗ್​ ಎಲ್ಲರ ಕಣ್ಣು ಕುಕ್ಕುತ್ತದೆ. ಈಗ ಕರೀನಾ ಕಪೂರ್​ ತೊಟ್ಟ ಮಾಸ್ಕ್ ಒಂದು ಗಮನ ಸೆಳೆದಿದೆ. ಏಕೆಂದರೆ, ಈ ಮಾಸ್ಕ್​ನ ಬೆಲೆ ಅಷ್ಟಿದೆ. ಇದನ್ನು ಫ್ಯಾನ್ಸ್​ ನೋಡಿ ಅಚ್ಚರಿಗೊಂಡಿದ್ದಾರೆ. ಕೊರೊನಾ ವೈರಸ್​ ಎರಡನೇ ಅಲೆಯ ಅಬ್ಬರ ಹೆಚ್ಚುತ್ತಿದೆ. ಹೀಗಾಗಿ, ಎಲ್ಲಾ ಸೆಲೆಬ್ರಿಟಿಗಳು ಮಾಸ್ಕ್​ ಧರಿಸಿ, ಕೊರೊನಾ ವೈರಸ್​​ ಹರಡುವಿಕೆ ಕಡಿಮೆ ಮಾಡಲು ಕೋರುತ್ತಿದ್ದಾರೆ. ಇದಕ್ಕೆ ಕರೀನಾ ಕಪೂರ್​ ಕೂಡ ಹೊರತಾಗಿಲ್ಲ. ಅವರು ಮಾಸ್ಕ್​ ಧರಿಸಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲ, ಮಾಸ್ಕ್​ ಧರಿಸಿಯೇ ಮನೆಯಿಂದ ಹೊರ ಹೋಗುವಂತೆ ಮನವಿ ಮಾಡಿದ್ದಾರೆ.

ಕೆಲ ಆಂಗ್ಲ ಮಾಧ್ಯಮಗಳ ಪ್ರಕಾರ ಅವರು ಧರಿಸಿದ ಮಾಸ್ಕ್​ Louis Vuitton ಕಂಪೆನಿಯದ್ದು. ಹೀಗಾಗಿ, ಮಾಸ್ಕ್​ ಮೇಲೆ ‘LV’ ಸಿಂಬೋಲ್​ ಇದೆ. ಈ ಮಾಸ್ಕ್​ನ ಬೆಲೆ 355 ಡಾಲರ್​. ಅಂದರೆ, ರೂಪಾಯಿಗೆ ಕನ್ವರ್ಟ್​ ಮಾಡಿದರೆ ಇದರ ಬೆಲೆ 25,994 ರೂಪಾಯಿ ಆಗಲಿದೆ. ಇದನ್ನೂ ನೋಡಿದ ಫ್ಯಾನ್ಸ್​ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಕೆಲ ಐಟಿ ಉದ್ಯೋಗಿಗಳಿಗೂ ತಿಂಗಳ ವೇತನ ಇಷ್ಟಿರಲ್ಲ ಎಂದು ನಗೆ ಚಟಾಕಿ ಹಾರಿಸಿದ್ದಾರೆ.

ಅಂದಹಾಗೆ, ಈ ಮಾಸ್ಕ್​ ಧರಿಸಿದ್ದು ಕರೀನಾ ಕಪೂರ್​ ಮಾತ್ರವಲ್ಲ. ದೀಪಿಕಾ ಪಡುಕೋಣೆ, ರಣಬೀರ್​ ಕಪೂರ್​ ಸೇರಿ ಸಾಕಷ್ಟು ಸೆಲೆಬ್ರಿಟಿಗಳು ಇದೇ ಮಾಸ್ಕ್​ ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

ಕರೀನಾ ಕಪೂರ್​ ಈ ಮೊದಲು ಜಿಮ್​ ಸ್ಯೂಟ್​ನಲ್ಲಿ ಸಾಕಷ್ಟು ಬಾರಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಅವರ ಜಿಮ್​ ಸ್ಯೂಟ್​ ಬ್ರ್ಯಾಂಡ್​ ಸಾಕಷ್ಟು ಚರ್ಚೆ ಆಗಿತ್ತು. ಇನ್ನು, ಬಾಲಿವುಡ್​ನಲ್ಲಿ ಅನೇಕರಿಗೆ ಕೊರೊನಾ ಅಂಟಿಕೊಳ್ಳುತ್ತಿದೆ. ಅಕ್ಷಯ್​ ಕುಮಾರ್​, ಆಲಿಯಾ ಭಟ್​ ಸೇರಿ ಸಾಕಷ್ಟು ಜನರಿಗೆ ಕೊರೊನಾ ವೈರಸ್​ ಅಂಟಿದೆ.

ಇದನ್ನೂ ಓದಿ: ಎರಡನೇ ಮಗು ಜನನದ ಬಳಿಕ ಮೊದಲ ಬಾರಿಗೆ ಫೋಟೋ ಹಂಚಿಕೊಂಡ ಕರೀನಾ ಕಪೂರ್; ಏನು ಹೇಳಿದ್ದಾರೆ?

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ