AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ಚಿತ್ರರಂಗದ ಎಂಟ್ರಿ ಬಗ್ಗೆ ಮಹೇಶ್​ ಬಾಬುಗೆ ಪದೇಪದೇ ಪ್ರಶ್ನೆ; ಅವರು ಕೊಟ್ಟ ಖಡಕ್ ಉತ್ತರ ಹೇಗಿತ್ತು ನೋಡಿ

‘ಸರ್ಕಾರು ವಾರಿ ಪಾಟ’ ಸಿನಿಮಾ ಮೇ​ 12ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಸಿನಿಮಾದಲ್ಲಿ ಮಹೇಶ್​ ಬಾಬು ಭಿನ್ನ ಗೆಟಪ್​ ತಾಳಿದ್ದಾರೆ. ಅವರಿಗೆ ಹಿಂದಿ ಚಿತ್ರರಂಗಕ್ಕೆ ಕಾಲಿಡುವ ಬಗ್ಗೆ ಪ್ರಶ್ನೆ ಎದುರಾಗಿದೆ.

ಹಿಂದಿ ಚಿತ್ರರಂಗದ ಎಂಟ್ರಿ ಬಗ್ಗೆ ಮಹೇಶ್​ ಬಾಬುಗೆ ಪದೇಪದೇ ಪ್ರಶ್ನೆ; ಅವರು ಕೊಟ್ಟ ಖಡಕ್ ಉತ್ತರ ಹೇಗಿತ್ತು ನೋಡಿ
ಮಹೇಶ್ ಬಾಬು
TV9 Web
| Edited By: |

Updated on: May 10, 2022 | 12:42 PM

Share

ಸದ್ಯ ಪ್ಯಾನ್ ಇಂಡಿಯಾ ಕ್ರೇಜ್ ಜೋರಾಗಿದೆ. ದಕ್ಷಿಣದ ಸಿನಿಮಾಗಳು ಬಾಲಿವುಡ್​ (Bollywood) ಅಂಗಳದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ‘ಕೆಜಿಎಫ್ 2’, (KGF Chapter 2) ‘ಆರ್​ಆರ್​ಆರ್​’ ಹಾಗೂ ‘ಪುಷ್ಪ’ ಸಿನಿಮಾಗಳು ಮಾಡಿದ ಹವಾ ಅಷ್ಟಿಷ್ಟಲ್ಲ. ಹೀಗಾಗಿ ಬಾಲಿವುಡ್ ಮಂದಿ ದಕ್ಷಿಣದವರ ಮೇಲೆ ಕಣ್ಣಿಟ್ಟಿದ್ದಾರೆ. ಇಲ್ಲಿನ ಸ್ಟಾರ್​ಗಳಿಗೆ ಬಾಲಿವುಡ್​ ಆಫರ್​ಗಳು ಬರುತ್ತಿವೆ. ಬಾಲಿವುಡ್​ನಲ್ಲಿ ನಟಿಸಿದರೆ ಸಂಭಾವನೆ ಹೆಚ್ಚು ಸಿಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಜನಪ್ರಿಯತೆ ಮತ್ತಷ್ಟು ಹೆಚ್ಚುತ್ತದೆ. ಈ ಕಾರಣಕ್ಕೆ ದಕ್ಷಿಣದ ಅನೇಕ ಸ್ಟಾರ್​ಗಳು ಬಾಲಿವುಡ್​​ಗೆ ಕಾಲಿಡೋಕೆ ಪ್ರಯತ್ನಿಸುತ್ತಿದ್ದಾರೆ. ಮಹೇಶ್ ಬಾಬು (Mahesh Babu) ಈ ವಿಚಾರದಲ್ಲಿ ಭಿನ್ನವಾಗಿ ನಿಲ್ಲುತ್ತಾರೆ.

‘ಸರ್ಕಾರು ವಾರಿ ಪಾಟ’ ಸಿನಿಮಾ ಮೇ​ 12ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಸಿನಿಮಾದಲ್ಲಿ ಮಹೇಶ್​ ಬಾಬು ಭಿನ್ನ ಗೆಟಪ್​ ತಾಳಿದ್ದಾರೆ. ಈ ಚಿತ್ರದ ಬಗ್ಗೆ ಅವರ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈಗಾಗಲೇ ಸಿನಿಮಾದ ಹಾಡುಗಳು, ಟ್ರೇಲರ್ ಹಿಟ್​ ಆಗಿವೆ. ಇತ್ತೀಚೆಗೆ ‘ಸೆಲ್ಯೂಟ್’ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಮಹೇಶ್ ಬಾಬು ಪಾಲ್ಗೊಂಡಿದ್ದರು. ಈ ವೇಳೆ ಅವರಿಗೆ ಹಿಂದಿ ಚಿತ್ರರಂಗಕ್ಕೆಗೆ ಕಾಲಿಡುವ ಬಗ್ಗೆ ಪ್ರಶ್ನೆ ಮಾಡಲಾಯಿತು. ಈ ವೇಳೆ ಮಹೇಶ್​ ಬಾಬು ಖಡಕ್ ಉತ್ತರ ನೀಡಿದ್ದಾರೆ.

‘ನನಗೆ ಹಿಂದಿಯಲ್ಲಿ ಸಾಕಷ್ಟು ಆಫರ್‌ಗಳು ಬಂದಿವೆ. ಆದರೆ ಬಾಲಿವುಡ್​ಗೆ ನನ್ನನ್ನು ಭರಿಸಲು ಸಾಧ್ಯವಿಲ್ಲ ಎಂಬುದು ನನ್ನ ಅಭಿಪ್ರಾಯ. ಸಮಯವನ್ನು ಹಾಳು ಮಾಡಲು ನನಗೆ ಇಷ್ಟವಿಲ್ಲ. ದಕ್ಷಿಣದಲ್ಲಿ ನಾನು ಪಡೆಯುವ ಸ್ಟಾರ್‌ಡಮ್ ಮತ್ತು ಗೌರವವು ದೊಡ್ಡದು. ಹಾಗಾಗಿ ನಾನು ಇಲ್ಲಿಯವರನ್ನು ಬಿಟ್ಟು ಬೇರೆ ಉದ್ಯಮಕ್ಕೆ ಹೋಗುವ ಬಗ್ಗೆ ನಾನು ಎಂದಿಗೂ ಯೋಚಿಸಲಿಲ್ಲ. ಸಿನಿಮಾ ಮಾಡುತ್ತಾ ಬೆಳೆಯುವ ಆಲೋಚನೆ ನನ್ನದು. ನನ್ನ ಕನಸು ಈಗ ನನಸಾಗುತ್ತಿದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ
Image
ಬಿಡುಗಡೆಗೂ ಮುನ್ನವೇ ಲೀಕ್​ ಆಯ್ತು ಮಹೇಶ್​ ಬಾಬು ಹೊಸ ಸಿನಿಮಾದ ದೃಶ್ಯಗಳು; ಫ್ಯಾನ್ಸ್​ ಗರಂ
Image
ಒಂದೇ ಒಂದು ಪೋಸ್ಟರ್​ನಿಂದ ‘ಸರ್ಕಾರು ವಾರಿ ಪಾಟ’ ಟ್ರೇಲರ್​ ಬಗ್ಗೆ ಕೌತುಕ ಕೆರಳಿಸಿದ ಮಹೇಶ್​ ಬಾಬು
Image
‘ಹೆಚ್ಚೆಚ್ಚು ಹೆಮ್ಮೆ ಪಡುವಂತೆ ಮಾಡುತ್ತಿದ್ದೀಯ’; ಮಗಳು ಸಿತಾರಾ ಬಗ್ಗೆ ಮಹೇಶ್​ ಬಾಬು ವಿಶೇಷ ಮಾತು
Image
Megha Shetty: ಮಹೇಶ್ ಬಾಬು ಭೇಟಿ ಹಿಂದಿನ ಉದ್ದೇಶ ತಿಳಿಸಿದ ನಟಿ ಮೇಘಾ ಶೆಟ್ಟಿ

‘ನನಗೆ ಹಿಂದಿ ಸಿನಿಮಾ ಮಾಡುವ ಅಗತ್ಯವಿಲ್ಲ. ನಾನು ಕೇವಲ ತೆಲುಗು ಸಿನಿಮಾಗಳನ್ನು ಮಾತ್ರ ಮಾಡಬಲ್ಲೆ. ಅದು ಪ್ರಪಂಚದಾದ್ಯಂತ ಕಾಣಿಸುತ್ತದೆ. ಈಗ ಅದೇ ನಡೆಯುತ್ತಿದೆ’ ಎಂದು ಈ ಮೊದಲು ಮಹೇಶ್ ಬಾಬು ಹೇಳಿದ್ದರು. ಈ ವಿಡಿಯೋ ವೈರಲ್ ಆಗಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ