AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೋತರೂ ನಿಮ್ಮ ಜೊತೆ ಇರುತ್ತೇವೆ’: ಸ್ಮೃತಿ ಇರಾನಿಗೆ ಬಾಲಿವುಡ್ ಮಂದಿ ಬೆಂಬಲ

ಬಿಜೆಪಿಯ ಸ್ಮೃತಿ ಇರಾನಿ ಅವರಿಗೆ ಅಮೇಥಿಯಲ್ಲಿ ಸೋಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಅವರನ್ನು ಕಾಂಗ್ರೆಸ್​ ಪಕ್ಷದ ಕಿಶೋರಿ ಲಾಲ್​​ ಶರ್ಮಾ ಸೋಲಿಸಿದ್ದಾರೆ. ಆ ಬಳಿಕ ಸ್ಮೃತಿ ಇರಾನಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದು, ಅದಕ್ಕೆ ಬಾಲಿವುಡ್​ ಸೆಲೆಬ್ರಿಟಿಗಳು ಕಮೆಂಟ್​ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

‘ಸೋತರೂ ನಿಮ್ಮ ಜೊತೆ ಇರುತ್ತೇವೆ’: ಸ್ಮೃತಿ ಇರಾನಿಗೆ ಬಾಲಿವುಡ್ ಮಂದಿ ಬೆಂಬಲ
ಸ್ಮೃತಿ ಇರಾನಿ, ಮೌನಿ ರಾಯ್​
Follow us
ಮದನ್​ ಕುಮಾರ್​
|

Updated on: Jun 05, 2024 | 5:53 PM

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಮೃತಿ ಇರಾನಿ (Smriti Irani) ಅವರು ಸೋಲು ಅನುಭವಿಸಿದ್ದಾರೆ. ಅಮೇಥಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಅವರು ಸೋಲು ಕಂಡಿದ್ದಾರೆ. ಆ ಬಳಿಕ ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ. ಬಿಜೆಪಿ (BJP) ಸಂಸದೆಯಾಗಿ ಇಷ್ಟು ದಿನ ಕೆಲಸ ಮಾಡಿದ್ದ ಸ್ಮೃತಿ ಇರಾನಿ ಅವರು ತಮ್ಮ ಜೊತೆಗಿದ್ದ ಜನರಿಗೆ ಧನ್ಯವಾದ ತಿಳಿಸಿದ್ದಾರೆ. ಈ ಪೋಸ್ಟ್​ಗೆ ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡಿದ್ದಾರೆ. ‘ನಿಮ್ಮ ಜೊತೆ ನಾವು ಇದ್ದೇವೆ’ ಎಂದು ಕಮೆಂಟ್​ ಮಾಡುವ ಮೂಲಕ ಮೌನಿ ರಾಯ್ (Mouni Roy)​, ಸೋನು ಸೂದ್​ ಮುಂತಾದವರು ಬೆಂಬಲ ಸೂಚಿಸಿದ್ದಾರೆ.

‘ಎಂಥ ಬದುಕು.. ಒಂದು ದಶಕದ ಈ ಸಮಯದಲ್ಲಿ ಒಂದು ಹಳ್ಳಿಯಿಂದ ಇನ್ನೊಂದು ಹಳ್ಳಿಗೆ ಹೋಗಿದ್ದು, ಬದುಕುಗಳನ್ನು ಕಟ್ಟಿದ್ದು, ಭರವಸೆಗಳನ್ನು, ಆಕಾಂಕ್ಷೆಗಳನ್ನು ಪೋಷಿಸಿದ್ದು, ಮೂಲ ಸೌಕರ್ಯ ಕಲ್ಪಿಸಲು ಕೆಲಸ ಮಾಡಿದ್ದು, ರಸ್ತೆ, ನಾಲೆ, ಮೆಡಿಕಲ್​ ಕಾಲೇಜ್​ ಹಾಗೂ ಇನ್ನೂ ಇತ್ಯಾದಿ. ನನ್ನ ಸೋಲು ಮತ್ತು ಗೆಲುವಿನಲ್ಲಿ ಜೊತೆಯಾಗಿ ನಿಂತ ಎಲ್ಲರಿಗೂ ನಾನು ಚಿರಋಣಿ. ಇಂದು ಸಂಭ್ರಮಿಸುತ್ತಿರುವವರಿಗೆ ಅಭಿನಂದನೆಗಳು. ಜೋಶ್​ ಹೇಗಿದೆ? ಈಗಲೂ ಹೈ ಆಗಿದೆ ಎನ್ನುತ್ತೇನೆ’ ಎಂದು ಸ್ಮೃತಿ ಇರಾನಿ ಪೋಸ್ಟ್​​ ಮಾಡಿದ್ದಾರೆ.

ಸ್ಮೃತಿ ಇರಾನಿ ಅವರ ಈ ಪೋಸ್ಟ್​ಗೆ ಬಾಲಿವುಡ್​ ನಟಿ ಮೌನಿ ರಾಯ್​ ಪ್ರತಿಕ್ರಿಯಿಸಿದ್ದಾರೆ. ‘ಯಾವಾಗಲೂ ನಿಮ್ಮ ಜೊತೆ ಇರುತ್ತೇವೆ’ ಎಂದು ಮೌನಿ ಅವರು ಕಮೆಂಟ್​ ಮಾಡಿದ್ದಾರೆ. ಸ್ಮೃತಿ ಇರಾನಿ ಮತ್ತು ಮೌನಿ ರಾಯ್​ ಅವರ ನಂಟು ಬಹಳ ವರ್ಷಗಳ ಹಿಂದಿನದ್ದು. ‘ಕ್ಯೂಂಕಿ ಸಾಸ್​ ಬಿ ಕಭಿ ಬಹು ಥಿ’ ಸೀರಿಯಲ್​ನಲ್ಲಿ ಮೌನಿ ರಾಯ್​ ಮತ್ತು ಸ್ಮೃತಿ ಇರಾನಿ ಅವರು ಒಟ್ಟಿಗೆ ನಟಿಸಿದ್ದರು.

ಇದನ್ನೂ ಓದಿ: ಬೆಂಗಳೂರಲ್ಲಿ ‘ಬದ್ಮಾಶ್​’ ರೆಸ್ಟೋರೆಂಟ್​ ಬಿಸ್ನೆಸ್​ ವಿಸ್ತರಿಸಿದ ಮೌನಿ ರಾಯ್​

ನಟ ಸೋನು ಸೂದ್​ ಅವರು ಕಮೆಂಟ್​ ಸೆಕ್ಷನ್​ನಲ್ಲಿ ಕೆಂಪು​ ಹಾರ್ಟ್​ ಎಮೋಜಿ ಪೋಸ್ಟ್ ಮಾಡಿದ್ದಾರೆ. ‘ಕಷ್ಟಪಟ್ಟು ಕೆಲಸ ಮಾಡುವುದನ್ನು ಮುಂದುವರಿಸಿ, ಅಷ್ಟೇ’ ಎಂದು ಬಾಲಿವುಡ್​ ನಟಿ ನೀನಾ ಗುಪ್ತಾ ಅವರು ಕಮೆಂಟ್​ ಮಾಡಿದ್ದಾರೆ. ‘ಪ್ರತಿದಿನ ನಿಮ್ಮೊಂದಿಗೆ ಇರುತ್ತೇವೆ. ನೀವು ಒಳ್ಳೆಯ ಕೆಲಸ ಮಾಡುವುದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ’ ಎಂದು ನಟಿ ಆಷ್ಕಾ ಗೊರಾಡಿಯಾ ಅವರು ಕಮೆಂಟ್​ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ