‘ಸೋತರೂ ನಿಮ್ಮ ಜೊತೆ ಇರುತ್ತೇವೆ’: ಸ್ಮೃತಿ ಇರಾನಿಗೆ ಬಾಲಿವುಡ್ ಮಂದಿ ಬೆಂಬಲ

ಬಿಜೆಪಿಯ ಸ್ಮೃತಿ ಇರಾನಿ ಅವರಿಗೆ ಅಮೇಥಿಯಲ್ಲಿ ಸೋಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಅವರನ್ನು ಕಾಂಗ್ರೆಸ್​ ಪಕ್ಷದ ಕಿಶೋರಿ ಲಾಲ್​​ ಶರ್ಮಾ ಸೋಲಿಸಿದ್ದಾರೆ. ಆ ಬಳಿಕ ಸ್ಮೃತಿ ಇರಾನಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದು, ಅದಕ್ಕೆ ಬಾಲಿವುಡ್​ ಸೆಲೆಬ್ರಿಟಿಗಳು ಕಮೆಂಟ್​ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

‘ಸೋತರೂ ನಿಮ್ಮ ಜೊತೆ ಇರುತ್ತೇವೆ’: ಸ್ಮೃತಿ ಇರಾನಿಗೆ ಬಾಲಿವುಡ್ ಮಂದಿ ಬೆಂಬಲ
ಸ್ಮೃತಿ ಇರಾನಿ, ಮೌನಿ ರಾಯ್​
Follow us
|

Updated on: Jun 05, 2024 | 5:53 PM

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಮೃತಿ ಇರಾನಿ (Smriti Irani) ಅವರು ಸೋಲು ಅನುಭವಿಸಿದ್ದಾರೆ. ಅಮೇಥಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಅವರು ಸೋಲು ಕಂಡಿದ್ದಾರೆ. ಆ ಬಳಿಕ ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ. ಬಿಜೆಪಿ (BJP) ಸಂಸದೆಯಾಗಿ ಇಷ್ಟು ದಿನ ಕೆಲಸ ಮಾಡಿದ್ದ ಸ್ಮೃತಿ ಇರಾನಿ ಅವರು ತಮ್ಮ ಜೊತೆಗಿದ್ದ ಜನರಿಗೆ ಧನ್ಯವಾದ ತಿಳಿಸಿದ್ದಾರೆ. ಈ ಪೋಸ್ಟ್​ಗೆ ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡಿದ್ದಾರೆ. ‘ನಿಮ್ಮ ಜೊತೆ ನಾವು ಇದ್ದೇವೆ’ ಎಂದು ಕಮೆಂಟ್​ ಮಾಡುವ ಮೂಲಕ ಮೌನಿ ರಾಯ್ (Mouni Roy)​, ಸೋನು ಸೂದ್​ ಮುಂತಾದವರು ಬೆಂಬಲ ಸೂಚಿಸಿದ್ದಾರೆ.

‘ಎಂಥ ಬದುಕು.. ಒಂದು ದಶಕದ ಈ ಸಮಯದಲ್ಲಿ ಒಂದು ಹಳ್ಳಿಯಿಂದ ಇನ್ನೊಂದು ಹಳ್ಳಿಗೆ ಹೋಗಿದ್ದು, ಬದುಕುಗಳನ್ನು ಕಟ್ಟಿದ್ದು, ಭರವಸೆಗಳನ್ನು, ಆಕಾಂಕ್ಷೆಗಳನ್ನು ಪೋಷಿಸಿದ್ದು, ಮೂಲ ಸೌಕರ್ಯ ಕಲ್ಪಿಸಲು ಕೆಲಸ ಮಾಡಿದ್ದು, ರಸ್ತೆ, ನಾಲೆ, ಮೆಡಿಕಲ್​ ಕಾಲೇಜ್​ ಹಾಗೂ ಇನ್ನೂ ಇತ್ಯಾದಿ. ನನ್ನ ಸೋಲು ಮತ್ತು ಗೆಲುವಿನಲ್ಲಿ ಜೊತೆಯಾಗಿ ನಿಂತ ಎಲ್ಲರಿಗೂ ನಾನು ಚಿರಋಣಿ. ಇಂದು ಸಂಭ್ರಮಿಸುತ್ತಿರುವವರಿಗೆ ಅಭಿನಂದನೆಗಳು. ಜೋಶ್​ ಹೇಗಿದೆ? ಈಗಲೂ ಹೈ ಆಗಿದೆ ಎನ್ನುತ್ತೇನೆ’ ಎಂದು ಸ್ಮೃತಿ ಇರಾನಿ ಪೋಸ್ಟ್​​ ಮಾಡಿದ್ದಾರೆ.

ಸ್ಮೃತಿ ಇರಾನಿ ಅವರ ಈ ಪೋಸ್ಟ್​ಗೆ ಬಾಲಿವುಡ್​ ನಟಿ ಮೌನಿ ರಾಯ್​ ಪ್ರತಿಕ್ರಿಯಿಸಿದ್ದಾರೆ. ‘ಯಾವಾಗಲೂ ನಿಮ್ಮ ಜೊತೆ ಇರುತ್ತೇವೆ’ ಎಂದು ಮೌನಿ ಅವರು ಕಮೆಂಟ್​ ಮಾಡಿದ್ದಾರೆ. ಸ್ಮೃತಿ ಇರಾನಿ ಮತ್ತು ಮೌನಿ ರಾಯ್​ ಅವರ ನಂಟು ಬಹಳ ವರ್ಷಗಳ ಹಿಂದಿನದ್ದು. ‘ಕ್ಯೂಂಕಿ ಸಾಸ್​ ಬಿ ಕಭಿ ಬಹು ಥಿ’ ಸೀರಿಯಲ್​ನಲ್ಲಿ ಮೌನಿ ರಾಯ್​ ಮತ್ತು ಸ್ಮೃತಿ ಇರಾನಿ ಅವರು ಒಟ್ಟಿಗೆ ನಟಿಸಿದ್ದರು.

ಇದನ್ನೂ ಓದಿ: ಬೆಂಗಳೂರಲ್ಲಿ ‘ಬದ್ಮಾಶ್​’ ರೆಸ್ಟೋರೆಂಟ್​ ಬಿಸ್ನೆಸ್​ ವಿಸ್ತರಿಸಿದ ಮೌನಿ ರಾಯ್​

ನಟ ಸೋನು ಸೂದ್​ ಅವರು ಕಮೆಂಟ್​ ಸೆಕ್ಷನ್​ನಲ್ಲಿ ಕೆಂಪು​ ಹಾರ್ಟ್​ ಎಮೋಜಿ ಪೋಸ್ಟ್ ಮಾಡಿದ್ದಾರೆ. ‘ಕಷ್ಟಪಟ್ಟು ಕೆಲಸ ಮಾಡುವುದನ್ನು ಮುಂದುವರಿಸಿ, ಅಷ್ಟೇ’ ಎಂದು ಬಾಲಿವುಡ್​ ನಟಿ ನೀನಾ ಗುಪ್ತಾ ಅವರು ಕಮೆಂಟ್​ ಮಾಡಿದ್ದಾರೆ. ‘ಪ್ರತಿದಿನ ನಿಮ್ಮೊಂದಿಗೆ ಇರುತ್ತೇವೆ. ನೀವು ಒಳ್ಳೆಯ ಕೆಲಸ ಮಾಡುವುದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ’ ಎಂದು ನಟಿ ಆಷ್ಕಾ ಗೊರಾಡಿಯಾ ಅವರು ಕಮೆಂಟ್​ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ