AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೋತರೂ ನಿಮ್ಮ ಜೊತೆ ಇರುತ್ತೇವೆ’: ಸ್ಮೃತಿ ಇರಾನಿಗೆ ಬಾಲಿವುಡ್ ಮಂದಿ ಬೆಂಬಲ

ಬಿಜೆಪಿಯ ಸ್ಮೃತಿ ಇರಾನಿ ಅವರಿಗೆ ಅಮೇಥಿಯಲ್ಲಿ ಸೋಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಅವರನ್ನು ಕಾಂಗ್ರೆಸ್​ ಪಕ್ಷದ ಕಿಶೋರಿ ಲಾಲ್​​ ಶರ್ಮಾ ಸೋಲಿಸಿದ್ದಾರೆ. ಆ ಬಳಿಕ ಸ್ಮೃತಿ ಇರಾನಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದು, ಅದಕ್ಕೆ ಬಾಲಿವುಡ್​ ಸೆಲೆಬ್ರಿಟಿಗಳು ಕಮೆಂಟ್​ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

‘ಸೋತರೂ ನಿಮ್ಮ ಜೊತೆ ಇರುತ್ತೇವೆ’: ಸ್ಮೃತಿ ಇರಾನಿಗೆ ಬಾಲಿವುಡ್ ಮಂದಿ ಬೆಂಬಲ
ಸ್ಮೃತಿ ಇರಾನಿ, ಮೌನಿ ರಾಯ್​
ಮದನ್​ ಕುಮಾರ್​
|

Updated on: Jun 05, 2024 | 5:53 PM

Share

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಮೃತಿ ಇರಾನಿ (Smriti Irani) ಅವರು ಸೋಲು ಅನುಭವಿಸಿದ್ದಾರೆ. ಅಮೇಥಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಅವರು ಸೋಲು ಕಂಡಿದ್ದಾರೆ. ಆ ಬಳಿಕ ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ. ಬಿಜೆಪಿ (BJP) ಸಂಸದೆಯಾಗಿ ಇಷ್ಟು ದಿನ ಕೆಲಸ ಮಾಡಿದ್ದ ಸ್ಮೃತಿ ಇರಾನಿ ಅವರು ತಮ್ಮ ಜೊತೆಗಿದ್ದ ಜನರಿಗೆ ಧನ್ಯವಾದ ತಿಳಿಸಿದ್ದಾರೆ. ಈ ಪೋಸ್ಟ್​ಗೆ ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡಿದ್ದಾರೆ. ‘ನಿಮ್ಮ ಜೊತೆ ನಾವು ಇದ್ದೇವೆ’ ಎಂದು ಕಮೆಂಟ್​ ಮಾಡುವ ಮೂಲಕ ಮೌನಿ ರಾಯ್ (Mouni Roy)​, ಸೋನು ಸೂದ್​ ಮುಂತಾದವರು ಬೆಂಬಲ ಸೂಚಿಸಿದ್ದಾರೆ.

‘ಎಂಥ ಬದುಕು.. ಒಂದು ದಶಕದ ಈ ಸಮಯದಲ್ಲಿ ಒಂದು ಹಳ್ಳಿಯಿಂದ ಇನ್ನೊಂದು ಹಳ್ಳಿಗೆ ಹೋಗಿದ್ದು, ಬದುಕುಗಳನ್ನು ಕಟ್ಟಿದ್ದು, ಭರವಸೆಗಳನ್ನು, ಆಕಾಂಕ್ಷೆಗಳನ್ನು ಪೋಷಿಸಿದ್ದು, ಮೂಲ ಸೌಕರ್ಯ ಕಲ್ಪಿಸಲು ಕೆಲಸ ಮಾಡಿದ್ದು, ರಸ್ತೆ, ನಾಲೆ, ಮೆಡಿಕಲ್​ ಕಾಲೇಜ್​ ಹಾಗೂ ಇನ್ನೂ ಇತ್ಯಾದಿ. ನನ್ನ ಸೋಲು ಮತ್ತು ಗೆಲುವಿನಲ್ಲಿ ಜೊತೆಯಾಗಿ ನಿಂತ ಎಲ್ಲರಿಗೂ ನಾನು ಚಿರಋಣಿ. ಇಂದು ಸಂಭ್ರಮಿಸುತ್ತಿರುವವರಿಗೆ ಅಭಿನಂದನೆಗಳು. ಜೋಶ್​ ಹೇಗಿದೆ? ಈಗಲೂ ಹೈ ಆಗಿದೆ ಎನ್ನುತ್ತೇನೆ’ ಎಂದು ಸ್ಮೃತಿ ಇರಾನಿ ಪೋಸ್ಟ್​​ ಮಾಡಿದ್ದಾರೆ.

ಸ್ಮೃತಿ ಇರಾನಿ ಅವರ ಈ ಪೋಸ್ಟ್​ಗೆ ಬಾಲಿವುಡ್​ ನಟಿ ಮೌನಿ ರಾಯ್​ ಪ್ರತಿಕ್ರಿಯಿಸಿದ್ದಾರೆ. ‘ಯಾವಾಗಲೂ ನಿಮ್ಮ ಜೊತೆ ಇರುತ್ತೇವೆ’ ಎಂದು ಮೌನಿ ಅವರು ಕಮೆಂಟ್​ ಮಾಡಿದ್ದಾರೆ. ಸ್ಮೃತಿ ಇರಾನಿ ಮತ್ತು ಮೌನಿ ರಾಯ್​ ಅವರ ನಂಟು ಬಹಳ ವರ್ಷಗಳ ಹಿಂದಿನದ್ದು. ‘ಕ್ಯೂಂಕಿ ಸಾಸ್​ ಬಿ ಕಭಿ ಬಹು ಥಿ’ ಸೀರಿಯಲ್​ನಲ್ಲಿ ಮೌನಿ ರಾಯ್​ ಮತ್ತು ಸ್ಮೃತಿ ಇರಾನಿ ಅವರು ಒಟ್ಟಿಗೆ ನಟಿಸಿದ್ದರು.

ಇದನ್ನೂ ಓದಿ: ಬೆಂಗಳೂರಲ್ಲಿ ‘ಬದ್ಮಾಶ್​’ ರೆಸ್ಟೋರೆಂಟ್​ ಬಿಸ್ನೆಸ್​ ವಿಸ್ತರಿಸಿದ ಮೌನಿ ರಾಯ್​

ನಟ ಸೋನು ಸೂದ್​ ಅವರು ಕಮೆಂಟ್​ ಸೆಕ್ಷನ್​ನಲ್ಲಿ ಕೆಂಪು​ ಹಾರ್ಟ್​ ಎಮೋಜಿ ಪೋಸ್ಟ್ ಮಾಡಿದ್ದಾರೆ. ‘ಕಷ್ಟಪಟ್ಟು ಕೆಲಸ ಮಾಡುವುದನ್ನು ಮುಂದುವರಿಸಿ, ಅಷ್ಟೇ’ ಎಂದು ಬಾಲಿವುಡ್​ ನಟಿ ನೀನಾ ಗುಪ್ತಾ ಅವರು ಕಮೆಂಟ್​ ಮಾಡಿದ್ದಾರೆ. ‘ಪ್ರತಿದಿನ ನಿಮ್ಮೊಂದಿಗೆ ಇರುತ್ತೇವೆ. ನೀವು ಒಳ್ಳೆಯ ಕೆಲಸ ಮಾಡುವುದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ’ ಎಂದು ನಟಿ ಆಷ್ಕಾ ಗೊರಾಡಿಯಾ ಅವರು ಕಮೆಂಟ್​ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್