AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ಹಿರಿಯ ನಟ, ರಾಮಾಯಣ ಧಾರಾವಾಹಿಯಲ್ಲಿ ಸುಮಂತನ ಪಾತ್ರದ ಮೂಲಕ ಜನಮನ ಗೆದ್ದಿದ್ದ ಚಂದ್ರಶೇಖರ್​ ಇನ್ನಿಲ್ಲ

ಚಂದ್ರಶೇಖರ್​ ಸುಮಾರು 250 ಬಾಲಿವುಡ್​ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಮೊದಲ ಸಿನಿಮಾ ಸುರಂಗ್​​ 1953ರಲ್ಲಿ ಬಿಡುಗಡೆಯಾಗಿದೆ. ಗೇಟ್​ವೇ ಆಫ್​ ಇಂಡಿಯಾ, ಫ್ಯಾಶನ್​, ಬರ್ಸತ್​ ಕಿ ರಾತ್​ ಮತ್ತಿತರ ಪ್ರಮುಖ ಸಿನಿಮಾಗಳಲ್ಲಿ ಪೋಷಕ ಪಾತ್ರವನ್ನು ನಿರ್ವಹಿಸಿದ್ದರು.

ಬಾಲಿವುಡ್ ಹಿರಿಯ ನಟ, ರಾಮಾಯಣ ಧಾರಾವಾಹಿಯಲ್ಲಿ ಸುಮಂತನ ಪಾತ್ರದ ಮೂಲಕ ಜನಮನ ಗೆದ್ದಿದ್ದ ಚಂದ್ರಶೇಖರ್​ ಇನ್ನಿಲ್ಲ
ನಟ ಚಂದ್ರಶೇಖರ್​
TV9 Web
| Edited By: |

Updated on: Jun 16, 2021 | 12:48 PM

Share

1987ರಲ್ಲಿ ಪ್ರಸಾರವಾಗುತ್ತಿದ್ದ ರಾಮಾಯಣ ಧಾರಾವಾಹಿಯಲ್ಲಿ ದಶರಥ ಮಹಾರಾಜನ ಮಂತ್ರಿ ಸುಮಂತನ ಪಾತ್ರ ನಿರ್ವಹಿಸಿ, ಖ್ಯಾತರಾಗಿದ್ದ ಬಾಲಿವುಡ್​ ನಟ ಚಂದ್ರಶೇಖರ್ ಇಂದು ನಿಧನರಾದರು. ಅವರಿಗೆ 97ವರ್ಷ ವಯಸ್ಸಾಗಿತ್ತು. ಬಾಲಿವುಡ್​ನ ಸಿನಿ ಮತ್ತು ಟಿವಿ ಕಲಾವಿದರ ಸಂಘ (CINTAA)ದ ಅನಿಲ್​ ಗಾಯಕ್​ವಾಡ್​ ಈ ಬಗ್ಗೆ ದೃಢಪಡಿಸಿದ್ದಾರೆ. ಇಂದು ಮುಂಜಾನೆ 7ಗಂಟೆ ಹೊತ್ತಿಗೆ ಚಂದ್ರಶೇಖರ್​ ಮೃತಪಟ್ಟಿದ್ದು, ಇಂದೇ ಅಂತ್ಯಕ್ರಿಯೆ ನಡೆಯುವುದು ಎಂದು ತಿಳಿಸಿದ್ದಾರೆ.

ಚಂದ್ರಶೇಖರ್​ ಅವರಿಗೆ ಯಾವುದೇ ಗಂಭೀರ ಆರೋಗ್ಯ ಸಮಸ್ಯೆಯೂ ಇರಲಿಲ್ಲ. ವಯೋಸಹಜವಾದ ಕೆಲವು ತೊಂದರೆಗಳು ಇದ್ದವು. ರಾತ್ರಿ ಮಲಗಿದ್ದವರು ಬೆಳಗ್ಗೆ ಅನ್ನುವಷ್ಟರಲ್ಲಿ ಇಲ್ಲ. ಕಳೆದ ಗುರುವಾರ ಒಂದು ದಿನದ ಮಟ್ಟಿಗೆ ಚೆಕಪ್​​ಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ನಂತರ ಮನೆಗೆ ಕರೆದುಕೊಂಡು ಬಂದಿದ್ದೆವು. ಕಳೆದ ರಾತ್ರಿಯೂ ಆರೋಗ್ಯವಾಗಿಯೇ ಇದ್ದರು. ಬೆಳಗ್ಗೆ ಅನ್ನುವಷ್ಟರಲ್ಲಿ ಮೃತಪಟ್ಟಿದ್ದಾರೆ. ಇಂದು ಸಂಜೆ 4ಗಂಟೆಗೆ ವೈಲ್​ ಪಾರ್ಲೆಯ ಪವನ್​ ಹಂಸ್​​ನಲ್ಲಿ ಅಂತ್ಯಕ್ರಿಯೆ ನೆರವೇರಿಸುತ್ತೇವೆ ಎಂದು ಅವರ ಪುತ್ರ ಅಶೋಕ್​ ತಿಳಿಸಿದ್ದಾರೆ.

ಚಂದ್ರಶೇಖರ್​ ಸುಮಾರು 250 ಬಾಲಿವುಡ್​ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಮೊದಲ ಸಿನಿಮಾ ಸುರಂಗ್​​ 1953ರಲ್ಲಿ ಬಿಡುಗಡೆಯಾಗಿದೆ. ಗೇಟ್​ವೇ ಆಫ್​ ಇಂಡಿಯಾ, ಫ್ಯಾಶನ್​, ಬರ್ಸತ್​ ಕಿ ರಾತ್​ ಮತ್ತಿತರ ಪ್ರಮುಖ ಸಿನಿಮಾಗಳಲ್ಲಿ ಪೋಷಕ ಪಾತ್ರವನ್ನು ನಿರ್ವಹಿಸಿದ್ದರು. 1964ರಲ್ಲಿ ಚಾ ಚಾ ಚಾ ಎಂಬ ಮ್ಯೂಸಿಕಲ್​ ಸಿನಿಮಾವನ್ನು ನಿರ್ದೇಶಿಸಿದ್ದರು. ಅದರಲ್ಲಿ ಖ್ಯಾತ ನಟಿ, ನೃತ್ಯಗಾರ್ತಿ ಹೆಲೆನ್​ ಮುಖ್ಯಭೂಮಿಕೆಯಲ್ಲಿ ಇದ್ದರು. ಇನ್ನು 1985ರಿಂದ 1996ರವರೆಗೆ ಸಿನಿ ಮತ್ತು ಕಲಾವಿದರ ಸಂಘದ (CINTAA) ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಖ್ಯಾತ ಕಿರುತೆರೆ ಕಲಾವಿದ ಶಕ್ತಿ ಅರೋರಾ ಚಂದ್ರಶೇಖರ್​ ಅವರ ಮೊಮ್ಮಗನೇ ಆಗಿದ್ದಾರೆ.

ಇದನ್ನೂ ಓದಿ: Tunga Dam: ತುಂಗಾ ಡ್ಯಾಂ ಭರ್ತಿ; ಮಲೆನಾಡಿನ ಸೌಂದರ್ಯದ ಹೆಚ್ಚಳಕ್ಕೆ ಸಾಕ್ಷಿ ಆಯ್ತು ಮುಂಗಾರು ಮಳೆ

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?