AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ಹಿರಿಯ ನಟ, ರಾಮಾಯಣ ಧಾರಾವಾಹಿಯಲ್ಲಿ ಸುಮಂತನ ಪಾತ್ರದ ಮೂಲಕ ಜನಮನ ಗೆದ್ದಿದ್ದ ಚಂದ್ರಶೇಖರ್​ ಇನ್ನಿಲ್ಲ

ಚಂದ್ರಶೇಖರ್​ ಸುಮಾರು 250 ಬಾಲಿವುಡ್​ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಮೊದಲ ಸಿನಿಮಾ ಸುರಂಗ್​​ 1953ರಲ್ಲಿ ಬಿಡುಗಡೆಯಾಗಿದೆ. ಗೇಟ್​ವೇ ಆಫ್​ ಇಂಡಿಯಾ, ಫ್ಯಾಶನ್​, ಬರ್ಸತ್​ ಕಿ ರಾತ್​ ಮತ್ತಿತರ ಪ್ರಮುಖ ಸಿನಿಮಾಗಳಲ್ಲಿ ಪೋಷಕ ಪಾತ್ರವನ್ನು ನಿರ್ವಹಿಸಿದ್ದರು.

ಬಾಲಿವುಡ್ ಹಿರಿಯ ನಟ, ರಾಮಾಯಣ ಧಾರಾವಾಹಿಯಲ್ಲಿ ಸುಮಂತನ ಪಾತ್ರದ ಮೂಲಕ ಜನಮನ ಗೆದ್ದಿದ್ದ ಚಂದ್ರಶೇಖರ್​ ಇನ್ನಿಲ್ಲ
ನಟ ಚಂದ್ರಶೇಖರ್​
TV9 Web
| Edited By: |

Updated on: Jun 16, 2021 | 12:48 PM

Share

1987ರಲ್ಲಿ ಪ್ರಸಾರವಾಗುತ್ತಿದ್ದ ರಾಮಾಯಣ ಧಾರಾವಾಹಿಯಲ್ಲಿ ದಶರಥ ಮಹಾರಾಜನ ಮಂತ್ರಿ ಸುಮಂತನ ಪಾತ್ರ ನಿರ್ವಹಿಸಿ, ಖ್ಯಾತರಾಗಿದ್ದ ಬಾಲಿವುಡ್​ ನಟ ಚಂದ್ರಶೇಖರ್ ಇಂದು ನಿಧನರಾದರು. ಅವರಿಗೆ 97ವರ್ಷ ವಯಸ್ಸಾಗಿತ್ತು. ಬಾಲಿವುಡ್​ನ ಸಿನಿ ಮತ್ತು ಟಿವಿ ಕಲಾವಿದರ ಸಂಘ (CINTAA)ದ ಅನಿಲ್​ ಗಾಯಕ್​ವಾಡ್​ ಈ ಬಗ್ಗೆ ದೃಢಪಡಿಸಿದ್ದಾರೆ. ಇಂದು ಮುಂಜಾನೆ 7ಗಂಟೆ ಹೊತ್ತಿಗೆ ಚಂದ್ರಶೇಖರ್​ ಮೃತಪಟ್ಟಿದ್ದು, ಇಂದೇ ಅಂತ್ಯಕ್ರಿಯೆ ನಡೆಯುವುದು ಎಂದು ತಿಳಿಸಿದ್ದಾರೆ.

ಚಂದ್ರಶೇಖರ್​ ಅವರಿಗೆ ಯಾವುದೇ ಗಂಭೀರ ಆರೋಗ್ಯ ಸಮಸ್ಯೆಯೂ ಇರಲಿಲ್ಲ. ವಯೋಸಹಜವಾದ ಕೆಲವು ತೊಂದರೆಗಳು ಇದ್ದವು. ರಾತ್ರಿ ಮಲಗಿದ್ದವರು ಬೆಳಗ್ಗೆ ಅನ್ನುವಷ್ಟರಲ್ಲಿ ಇಲ್ಲ. ಕಳೆದ ಗುರುವಾರ ಒಂದು ದಿನದ ಮಟ್ಟಿಗೆ ಚೆಕಪ್​​ಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ನಂತರ ಮನೆಗೆ ಕರೆದುಕೊಂಡು ಬಂದಿದ್ದೆವು. ಕಳೆದ ರಾತ್ರಿಯೂ ಆರೋಗ್ಯವಾಗಿಯೇ ಇದ್ದರು. ಬೆಳಗ್ಗೆ ಅನ್ನುವಷ್ಟರಲ್ಲಿ ಮೃತಪಟ್ಟಿದ್ದಾರೆ. ಇಂದು ಸಂಜೆ 4ಗಂಟೆಗೆ ವೈಲ್​ ಪಾರ್ಲೆಯ ಪವನ್​ ಹಂಸ್​​ನಲ್ಲಿ ಅಂತ್ಯಕ್ರಿಯೆ ನೆರವೇರಿಸುತ್ತೇವೆ ಎಂದು ಅವರ ಪುತ್ರ ಅಶೋಕ್​ ತಿಳಿಸಿದ್ದಾರೆ.

ಚಂದ್ರಶೇಖರ್​ ಸುಮಾರು 250 ಬಾಲಿವುಡ್​ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಮೊದಲ ಸಿನಿಮಾ ಸುರಂಗ್​​ 1953ರಲ್ಲಿ ಬಿಡುಗಡೆಯಾಗಿದೆ. ಗೇಟ್​ವೇ ಆಫ್​ ಇಂಡಿಯಾ, ಫ್ಯಾಶನ್​, ಬರ್ಸತ್​ ಕಿ ರಾತ್​ ಮತ್ತಿತರ ಪ್ರಮುಖ ಸಿನಿಮಾಗಳಲ್ಲಿ ಪೋಷಕ ಪಾತ್ರವನ್ನು ನಿರ್ವಹಿಸಿದ್ದರು. 1964ರಲ್ಲಿ ಚಾ ಚಾ ಚಾ ಎಂಬ ಮ್ಯೂಸಿಕಲ್​ ಸಿನಿಮಾವನ್ನು ನಿರ್ದೇಶಿಸಿದ್ದರು. ಅದರಲ್ಲಿ ಖ್ಯಾತ ನಟಿ, ನೃತ್ಯಗಾರ್ತಿ ಹೆಲೆನ್​ ಮುಖ್ಯಭೂಮಿಕೆಯಲ್ಲಿ ಇದ್ದರು. ಇನ್ನು 1985ರಿಂದ 1996ರವರೆಗೆ ಸಿನಿ ಮತ್ತು ಕಲಾವಿದರ ಸಂಘದ (CINTAA) ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಖ್ಯಾತ ಕಿರುತೆರೆ ಕಲಾವಿದ ಶಕ್ತಿ ಅರೋರಾ ಚಂದ್ರಶೇಖರ್​ ಅವರ ಮೊಮ್ಮಗನೇ ಆಗಿದ್ದಾರೆ.

ಇದನ್ನೂ ಓದಿ: Tunga Dam: ತುಂಗಾ ಡ್ಯಾಂ ಭರ್ತಿ; ಮಲೆನಾಡಿನ ಸೌಂದರ್ಯದ ಹೆಚ್ಚಳಕ್ಕೆ ಸಾಕ್ಷಿ ಆಯ್ತು ಮುಂಗಾರು ಮಳೆ

Follow Us
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!