AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ಹಿರಿಯ ನಟ, ರಾಮಾಯಣ ಧಾರಾವಾಹಿಯಲ್ಲಿ ಸುಮಂತನ ಪಾತ್ರದ ಮೂಲಕ ಜನಮನ ಗೆದ್ದಿದ್ದ ಚಂದ್ರಶೇಖರ್​ ಇನ್ನಿಲ್ಲ

ಚಂದ್ರಶೇಖರ್​ ಸುಮಾರು 250 ಬಾಲಿವುಡ್​ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಮೊದಲ ಸಿನಿಮಾ ಸುರಂಗ್​​ 1953ರಲ್ಲಿ ಬಿಡುಗಡೆಯಾಗಿದೆ. ಗೇಟ್​ವೇ ಆಫ್​ ಇಂಡಿಯಾ, ಫ್ಯಾಶನ್​, ಬರ್ಸತ್​ ಕಿ ರಾತ್​ ಮತ್ತಿತರ ಪ್ರಮುಖ ಸಿನಿಮಾಗಳಲ್ಲಿ ಪೋಷಕ ಪಾತ್ರವನ್ನು ನಿರ್ವಹಿಸಿದ್ದರು.

ಬಾಲಿವುಡ್ ಹಿರಿಯ ನಟ, ರಾಮಾಯಣ ಧಾರಾವಾಹಿಯಲ್ಲಿ ಸುಮಂತನ ಪಾತ್ರದ ಮೂಲಕ ಜನಮನ ಗೆದ್ದಿದ್ದ ಚಂದ್ರಶೇಖರ್​ ಇನ್ನಿಲ್ಲ
ನಟ ಚಂದ್ರಶೇಖರ್​
TV9 Web
| Edited By: |

Updated on: Jun 16, 2021 | 12:48 PM

Share

1987ರಲ್ಲಿ ಪ್ರಸಾರವಾಗುತ್ತಿದ್ದ ರಾಮಾಯಣ ಧಾರಾವಾಹಿಯಲ್ಲಿ ದಶರಥ ಮಹಾರಾಜನ ಮಂತ್ರಿ ಸುಮಂತನ ಪಾತ್ರ ನಿರ್ವಹಿಸಿ, ಖ್ಯಾತರಾಗಿದ್ದ ಬಾಲಿವುಡ್​ ನಟ ಚಂದ್ರಶೇಖರ್ ಇಂದು ನಿಧನರಾದರು. ಅವರಿಗೆ 97ವರ್ಷ ವಯಸ್ಸಾಗಿತ್ತು. ಬಾಲಿವುಡ್​ನ ಸಿನಿ ಮತ್ತು ಟಿವಿ ಕಲಾವಿದರ ಸಂಘ (CINTAA)ದ ಅನಿಲ್​ ಗಾಯಕ್​ವಾಡ್​ ಈ ಬಗ್ಗೆ ದೃಢಪಡಿಸಿದ್ದಾರೆ. ಇಂದು ಮುಂಜಾನೆ 7ಗಂಟೆ ಹೊತ್ತಿಗೆ ಚಂದ್ರಶೇಖರ್​ ಮೃತಪಟ್ಟಿದ್ದು, ಇಂದೇ ಅಂತ್ಯಕ್ರಿಯೆ ನಡೆಯುವುದು ಎಂದು ತಿಳಿಸಿದ್ದಾರೆ.

ಚಂದ್ರಶೇಖರ್​ ಅವರಿಗೆ ಯಾವುದೇ ಗಂಭೀರ ಆರೋಗ್ಯ ಸಮಸ್ಯೆಯೂ ಇರಲಿಲ್ಲ. ವಯೋಸಹಜವಾದ ಕೆಲವು ತೊಂದರೆಗಳು ಇದ್ದವು. ರಾತ್ರಿ ಮಲಗಿದ್ದವರು ಬೆಳಗ್ಗೆ ಅನ್ನುವಷ್ಟರಲ್ಲಿ ಇಲ್ಲ. ಕಳೆದ ಗುರುವಾರ ಒಂದು ದಿನದ ಮಟ್ಟಿಗೆ ಚೆಕಪ್​​ಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ನಂತರ ಮನೆಗೆ ಕರೆದುಕೊಂಡು ಬಂದಿದ್ದೆವು. ಕಳೆದ ರಾತ್ರಿಯೂ ಆರೋಗ್ಯವಾಗಿಯೇ ಇದ್ದರು. ಬೆಳಗ್ಗೆ ಅನ್ನುವಷ್ಟರಲ್ಲಿ ಮೃತಪಟ್ಟಿದ್ದಾರೆ. ಇಂದು ಸಂಜೆ 4ಗಂಟೆಗೆ ವೈಲ್​ ಪಾರ್ಲೆಯ ಪವನ್​ ಹಂಸ್​​ನಲ್ಲಿ ಅಂತ್ಯಕ್ರಿಯೆ ನೆರವೇರಿಸುತ್ತೇವೆ ಎಂದು ಅವರ ಪುತ್ರ ಅಶೋಕ್​ ತಿಳಿಸಿದ್ದಾರೆ.

ಚಂದ್ರಶೇಖರ್​ ಸುಮಾರು 250 ಬಾಲಿವುಡ್​ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಮೊದಲ ಸಿನಿಮಾ ಸುರಂಗ್​​ 1953ರಲ್ಲಿ ಬಿಡುಗಡೆಯಾಗಿದೆ. ಗೇಟ್​ವೇ ಆಫ್​ ಇಂಡಿಯಾ, ಫ್ಯಾಶನ್​, ಬರ್ಸತ್​ ಕಿ ರಾತ್​ ಮತ್ತಿತರ ಪ್ರಮುಖ ಸಿನಿಮಾಗಳಲ್ಲಿ ಪೋಷಕ ಪಾತ್ರವನ್ನು ನಿರ್ವಹಿಸಿದ್ದರು. 1964ರಲ್ಲಿ ಚಾ ಚಾ ಚಾ ಎಂಬ ಮ್ಯೂಸಿಕಲ್​ ಸಿನಿಮಾವನ್ನು ನಿರ್ದೇಶಿಸಿದ್ದರು. ಅದರಲ್ಲಿ ಖ್ಯಾತ ನಟಿ, ನೃತ್ಯಗಾರ್ತಿ ಹೆಲೆನ್​ ಮುಖ್ಯಭೂಮಿಕೆಯಲ್ಲಿ ಇದ್ದರು. ಇನ್ನು 1985ರಿಂದ 1996ರವರೆಗೆ ಸಿನಿ ಮತ್ತು ಕಲಾವಿದರ ಸಂಘದ (CINTAA) ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಖ್ಯಾತ ಕಿರುತೆರೆ ಕಲಾವಿದ ಶಕ್ತಿ ಅರೋರಾ ಚಂದ್ರಶೇಖರ್​ ಅವರ ಮೊಮ್ಮಗನೇ ಆಗಿದ್ದಾರೆ.

ಇದನ್ನೂ ಓದಿ: Tunga Dam: ತುಂಗಾ ಡ್ಯಾಂ ಭರ್ತಿ; ಮಲೆನಾಡಿನ ಸೌಂದರ್ಯದ ಹೆಚ್ಚಳಕ್ಕೆ ಸಾಕ್ಷಿ ಆಯ್ತು ಮುಂಗಾರು ಮಳೆ

Follow Us
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ