AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ಹಿರಿಯ ನಟ, ರಾಮಾಯಣ ಧಾರಾವಾಹಿಯಲ್ಲಿ ಸುಮಂತನ ಪಾತ್ರದ ಮೂಲಕ ಜನಮನ ಗೆದ್ದಿದ್ದ ಚಂದ್ರಶೇಖರ್​ ಇನ್ನಿಲ್ಲ

ಚಂದ್ರಶೇಖರ್​ ಸುಮಾರು 250 ಬಾಲಿವುಡ್​ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಮೊದಲ ಸಿನಿಮಾ ಸುರಂಗ್​​ 1953ರಲ್ಲಿ ಬಿಡುಗಡೆಯಾಗಿದೆ. ಗೇಟ್​ವೇ ಆಫ್​ ಇಂಡಿಯಾ, ಫ್ಯಾಶನ್​, ಬರ್ಸತ್​ ಕಿ ರಾತ್​ ಮತ್ತಿತರ ಪ್ರಮುಖ ಸಿನಿಮಾಗಳಲ್ಲಿ ಪೋಷಕ ಪಾತ್ರವನ್ನು ನಿರ್ವಹಿಸಿದ್ದರು.

ಬಾಲಿವುಡ್ ಹಿರಿಯ ನಟ, ರಾಮಾಯಣ ಧಾರಾವಾಹಿಯಲ್ಲಿ ಸುಮಂತನ ಪಾತ್ರದ ಮೂಲಕ ಜನಮನ ಗೆದ್ದಿದ್ದ ಚಂದ್ರಶೇಖರ್​ ಇನ್ನಿಲ್ಲ
ನಟ ಚಂದ್ರಶೇಖರ್​
TV9 Web
| Edited By: |

Updated on: Jun 16, 2021 | 12:48 PM

Share

1987ರಲ್ಲಿ ಪ್ರಸಾರವಾಗುತ್ತಿದ್ದ ರಾಮಾಯಣ ಧಾರಾವಾಹಿಯಲ್ಲಿ ದಶರಥ ಮಹಾರಾಜನ ಮಂತ್ರಿ ಸುಮಂತನ ಪಾತ್ರ ನಿರ್ವಹಿಸಿ, ಖ್ಯಾತರಾಗಿದ್ದ ಬಾಲಿವುಡ್​ ನಟ ಚಂದ್ರಶೇಖರ್ ಇಂದು ನಿಧನರಾದರು. ಅವರಿಗೆ 97ವರ್ಷ ವಯಸ್ಸಾಗಿತ್ತು. ಬಾಲಿವುಡ್​ನ ಸಿನಿ ಮತ್ತು ಟಿವಿ ಕಲಾವಿದರ ಸಂಘ (CINTAA)ದ ಅನಿಲ್​ ಗಾಯಕ್​ವಾಡ್​ ಈ ಬಗ್ಗೆ ದೃಢಪಡಿಸಿದ್ದಾರೆ. ಇಂದು ಮುಂಜಾನೆ 7ಗಂಟೆ ಹೊತ್ತಿಗೆ ಚಂದ್ರಶೇಖರ್​ ಮೃತಪಟ್ಟಿದ್ದು, ಇಂದೇ ಅಂತ್ಯಕ್ರಿಯೆ ನಡೆಯುವುದು ಎಂದು ತಿಳಿಸಿದ್ದಾರೆ.

ಚಂದ್ರಶೇಖರ್​ ಅವರಿಗೆ ಯಾವುದೇ ಗಂಭೀರ ಆರೋಗ್ಯ ಸಮಸ್ಯೆಯೂ ಇರಲಿಲ್ಲ. ವಯೋಸಹಜವಾದ ಕೆಲವು ತೊಂದರೆಗಳು ಇದ್ದವು. ರಾತ್ರಿ ಮಲಗಿದ್ದವರು ಬೆಳಗ್ಗೆ ಅನ್ನುವಷ್ಟರಲ್ಲಿ ಇಲ್ಲ. ಕಳೆದ ಗುರುವಾರ ಒಂದು ದಿನದ ಮಟ್ಟಿಗೆ ಚೆಕಪ್​​ಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ನಂತರ ಮನೆಗೆ ಕರೆದುಕೊಂಡು ಬಂದಿದ್ದೆವು. ಕಳೆದ ರಾತ್ರಿಯೂ ಆರೋಗ್ಯವಾಗಿಯೇ ಇದ್ದರು. ಬೆಳಗ್ಗೆ ಅನ್ನುವಷ್ಟರಲ್ಲಿ ಮೃತಪಟ್ಟಿದ್ದಾರೆ. ಇಂದು ಸಂಜೆ 4ಗಂಟೆಗೆ ವೈಲ್​ ಪಾರ್ಲೆಯ ಪವನ್​ ಹಂಸ್​​ನಲ್ಲಿ ಅಂತ್ಯಕ್ರಿಯೆ ನೆರವೇರಿಸುತ್ತೇವೆ ಎಂದು ಅವರ ಪುತ್ರ ಅಶೋಕ್​ ತಿಳಿಸಿದ್ದಾರೆ.

ಚಂದ್ರಶೇಖರ್​ ಸುಮಾರು 250 ಬಾಲಿವುಡ್​ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಮೊದಲ ಸಿನಿಮಾ ಸುರಂಗ್​​ 1953ರಲ್ಲಿ ಬಿಡುಗಡೆಯಾಗಿದೆ. ಗೇಟ್​ವೇ ಆಫ್​ ಇಂಡಿಯಾ, ಫ್ಯಾಶನ್​, ಬರ್ಸತ್​ ಕಿ ರಾತ್​ ಮತ್ತಿತರ ಪ್ರಮುಖ ಸಿನಿಮಾಗಳಲ್ಲಿ ಪೋಷಕ ಪಾತ್ರವನ್ನು ನಿರ್ವಹಿಸಿದ್ದರು. 1964ರಲ್ಲಿ ಚಾ ಚಾ ಚಾ ಎಂಬ ಮ್ಯೂಸಿಕಲ್​ ಸಿನಿಮಾವನ್ನು ನಿರ್ದೇಶಿಸಿದ್ದರು. ಅದರಲ್ಲಿ ಖ್ಯಾತ ನಟಿ, ನೃತ್ಯಗಾರ್ತಿ ಹೆಲೆನ್​ ಮುಖ್ಯಭೂಮಿಕೆಯಲ್ಲಿ ಇದ್ದರು. ಇನ್ನು 1985ರಿಂದ 1996ರವರೆಗೆ ಸಿನಿ ಮತ್ತು ಕಲಾವಿದರ ಸಂಘದ (CINTAA) ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಖ್ಯಾತ ಕಿರುತೆರೆ ಕಲಾವಿದ ಶಕ್ತಿ ಅರೋರಾ ಚಂದ್ರಶೇಖರ್​ ಅವರ ಮೊಮ್ಮಗನೇ ಆಗಿದ್ದಾರೆ.

ಇದನ್ನೂ ಓದಿ: Tunga Dam: ತುಂಗಾ ಡ್ಯಾಂ ಭರ್ತಿ; ಮಲೆನಾಡಿನ ಸೌಂದರ್ಯದ ಹೆಚ್ಚಳಕ್ಕೆ ಸಾಕ್ಷಿ ಆಯ್ತು ಮುಂಗಾರು ಮಳೆ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ