AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ ಹಿರಿಯ ನಟನ ಮಗ ಡ್ರಗ್​ ಕೇಸ್​ನಲ್ಲಿ ಅರೆಸ್ಟ್​; ವಾಟ್ಸ್​ಆ್ಯಪ್​ ಮೆಸೇಜ್​ ಬಿಚ್ಚಿಡ್ತು ನಿಜ ವಿಚಾರ

ಏಪ್ರಿಲ್​ 20ರಂದು ಮುಜಮ್ಮಿಲ್​ ಶೇಖ್​​ ಅವರನ್ನು ಮಾದಕ ವಸ್ತು ನಿಯಂತ್ರಣ ಘಟಕವು ಬಂಧಿಸಿತ್ತು. ಈತನಿಂದ 35 ಗ್ರಾಂ ಡ್ರಗ್​ ವಶಕ್ಕೆ ಪಡೆಯಲಾಗಿತ್ತು. ಈ ವೇಳೆ ಮುಜಮ್ಮಿಲ್ ಮೊಬೈಲ್​ಅನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು.

ಬಾಲಿವುಡ್​ ಹಿರಿಯ ನಟನ ಮಗ ಡ್ರಗ್​ ಕೇಸ್​ನಲ್ಲಿ ಅರೆಸ್ಟ್​; ವಾಟ್ಸ್​ಆ್ಯಪ್​ ಮೆಸೇಜ್​ ಬಿಚ್ಚಿಡ್ತು ನಿಜ ವಿಚಾರ
ದಿಲೀಙ್​ ತಾಹಿಲ್​-ಧ್ರುವ್​ ತಾಹಿಲ್
ರಾಜೇಶ್ ದುಗ್ಗುಮನೆ
|

Updated on: May 05, 2021 | 10:32 PM

Share

ಮುಂಬೈ: ಬಾಲಿವುಡ್​ನಲ್ಲಿ ಡ್ರಗ್​ ಕೇಸ್​ ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟು ಹಾಕಿದೆ. ಡ್ರಗ್​ ಕೇಸ್​ಗೆ ಸಂಬಂಧಿಸಿದಂತೆ ಅನೇಕರು ವಿಚಾರಣೆಗೆ ಒಳಪಟ್ಟಿದ್ದಾರೆ. ಇನ್ನೂ, ಕೆಲವರನ್ನು ಬಂಧಿಸಲಾಗಿದೆ.  ಈಗ  ಬಾಲಿವುಡ್​ ​ಹಿರಿಯ ನಟ ದಿಲೀಪ್​ ತಾಹಿಲ್​ ಮಗ ಧ್ರುವ್​ ತಾಹಿಲ್ ಅವರನ್ನು​ ಮಾದಕ ವಸ್ತು ನಿಯಂತ್ರಣ ಘಟಕವು ಡ್ರಗ್​ ಕೇಸ್​ನಲ್ಲಿ ಬಂಧಿಸಿದೆ.

ಏಪ್ರಿಲ್​ 20ರಂದು ಮುಜಮ್ಮಿಲ್​ ಶೇಖ್​​ ಅವರನ್ನು ಮಾದಕ ವಸ್ತು ನಿಯಂತ್ರಣ ಘಟಕವು ಬಂಧಿಸಿತ್ತು. ಈತನಿಂದ 35 ಗ್ರಾಂ ಡ್ರಗ್​ ವಶಕ್ಕೆ ಪಡೆಯಲಾಗಿತ್ತು. ಈ ವೇಳೆ ಮುಜಮ್ಮಿಲ್ ಮೊಬೈಲ್​ಅನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಅವರ ವಾಟ್ಸ್​ಆ್ಯಪ್​ ಪರಿಶೀಲಿಸಿದಾಗ ಧ್ರುವ್​ ತಾಹಿಲ್ ಜತೆಗಿನ ಚ್ಯಾಟ್​ ಸಿಕ್ಕಿದೆ. ಧ್ರುವ್​ ಸಾಕಷ್ಟು ಬಾರಿ ಈತನ ಬಳಿ ಡ್ರಗ್ಸ್​ಗೆ ಬೇಡಿಕೆ ಇಟ್ಟಿದ್ದರು ಎನ್ನುವ ವಿಚಾರ ಬಯಲಾಗಿದೆ. ಹೀಗಾಗಿ ಧ್ರುವ್​ ಅವರನ್ನು ಬಂಧಿಸಲಾಗಿದೆ.

ಇಲ್ಲಿ ಗಮನಿಸಬೇಕಾದ ಮತ್ತೊಂದು ವಿಚಾರ ಎಂದರೆ, ಡ್ರಗ್ಸ್​ ಖರೀದಿ ಮಾಡಲು ಮುಜಮ್ಮಿಲ್​ ಖಾತೆಗೆ ಧ್ರುವ್​ ಸಾಕಷ್ಟು ಬಾರಿ ಹಣ ವರ್ಗಾವಣೆ ಮಾಡಿದ್ದಾರೆ. ಮಾರ್ಚ್​ 2019ರಿಂದ ಶೇಖ್​ ಜತೆಗೆ ಧ್ರುವ್​ ಸಂಪರ್ಕಕ್ಕೆ ಬಂದಿದ್ದರು. ನಂತರ ನಿರಂತರವಾಗಿ ಡ್ರಗ್​ ಪಡೆಯುತ್ತಿದ್ದರು ಎಂದು ಮಾದಕ ವಸ್ತು ನಿಯಂತ್ರಣ ಘಟಕ ಸ್ಪಷ್ಟಪಡಿಸಿದೆ. ಸದ್ಯ ಧ್ರುವ್​ ಅವರನ್ನು ವಶಕ್ಕೆ ಪಡೆಯಲಾಗಿದೆ. ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಇನ್ನೂ ಅನೇಕರ ಹೆಸರು ಇದರಲ್ಲಿ ಬರುವ ಸಾಧ್ಯತೆಇದೆ. ಧ್ರುವ್​ ಕೂಡ ಮಾಡೆಲಿಂಗ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರು ನಟನಾ ಕ್ಷೇತ್ರಕ್ಕೆ ಕಾಲಿಡಲು ಪ್ರಯತ್ನಿಸಿದ್ದಾರೆ.

ಇದನ್ನೂ ಓದಿ: ಸುದ್ದಿ ವಿಶ್ಲೇಷಣೆ | ಡ್ರಗ್ಸ್​ ಜಾಲ ನಿರ್ಮೂಲನೆಯಾಗಿಲ್ಲ, ಇದು ಕಳಂಕವಲ್ಲದೇ ಇನ್ನೇನು?

ಸಿಸಿಬಿ ಪೊಲೀಸರಿಂದ ಇಬ್ಬರು ಡ್ರಗ್ಸ್ ಪೆಡ್ಲರ್​ಗಳ ಬಂಧನ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!