AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ ಹಿರಿಯ ನಟನ ಮಗ ಡ್ರಗ್​ ಕೇಸ್​ನಲ್ಲಿ ಅರೆಸ್ಟ್​; ವಾಟ್ಸ್​ಆ್ಯಪ್​ ಮೆಸೇಜ್​ ಬಿಚ್ಚಿಡ್ತು ನಿಜ ವಿಚಾರ

ಏಪ್ರಿಲ್​ 20ರಂದು ಮುಜಮ್ಮಿಲ್​ ಶೇಖ್​​ ಅವರನ್ನು ಮಾದಕ ವಸ್ತು ನಿಯಂತ್ರಣ ಘಟಕವು ಬಂಧಿಸಿತ್ತು. ಈತನಿಂದ 35 ಗ್ರಾಂ ಡ್ರಗ್​ ವಶಕ್ಕೆ ಪಡೆಯಲಾಗಿತ್ತು. ಈ ವೇಳೆ ಮುಜಮ್ಮಿಲ್ ಮೊಬೈಲ್​ಅನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು.

ಬಾಲಿವುಡ್​ ಹಿರಿಯ ನಟನ ಮಗ ಡ್ರಗ್​ ಕೇಸ್​ನಲ್ಲಿ ಅರೆಸ್ಟ್​; ವಾಟ್ಸ್​ಆ್ಯಪ್​ ಮೆಸೇಜ್​ ಬಿಚ್ಚಿಡ್ತು ನಿಜ ವಿಚಾರ
ದಿಲೀಙ್​ ತಾಹಿಲ್​-ಧ್ರುವ್​ ತಾಹಿಲ್
ರಾಜೇಶ್ ದುಗ್ಗುಮನೆ
|

Updated on: May 05, 2021 | 10:32 PM

Share

ಮುಂಬೈ: ಬಾಲಿವುಡ್​ನಲ್ಲಿ ಡ್ರಗ್​ ಕೇಸ್​ ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟು ಹಾಕಿದೆ. ಡ್ರಗ್​ ಕೇಸ್​ಗೆ ಸಂಬಂಧಿಸಿದಂತೆ ಅನೇಕರು ವಿಚಾರಣೆಗೆ ಒಳಪಟ್ಟಿದ್ದಾರೆ. ಇನ್ನೂ, ಕೆಲವರನ್ನು ಬಂಧಿಸಲಾಗಿದೆ.  ಈಗ  ಬಾಲಿವುಡ್​ ​ಹಿರಿಯ ನಟ ದಿಲೀಪ್​ ತಾಹಿಲ್​ ಮಗ ಧ್ರುವ್​ ತಾಹಿಲ್ ಅವರನ್ನು​ ಮಾದಕ ವಸ್ತು ನಿಯಂತ್ರಣ ಘಟಕವು ಡ್ರಗ್​ ಕೇಸ್​ನಲ್ಲಿ ಬಂಧಿಸಿದೆ.

ಏಪ್ರಿಲ್​ 20ರಂದು ಮುಜಮ್ಮಿಲ್​ ಶೇಖ್​​ ಅವರನ್ನು ಮಾದಕ ವಸ್ತು ನಿಯಂತ್ರಣ ಘಟಕವು ಬಂಧಿಸಿತ್ತು. ಈತನಿಂದ 35 ಗ್ರಾಂ ಡ್ರಗ್​ ವಶಕ್ಕೆ ಪಡೆಯಲಾಗಿತ್ತು. ಈ ವೇಳೆ ಮುಜಮ್ಮಿಲ್ ಮೊಬೈಲ್​ಅನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಅವರ ವಾಟ್ಸ್​ಆ್ಯಪ್​ ಪರಿಶೀಲಿಸಿದಾಗ ಧ್ರುವ್​ ತಾಹಿಲ್ ಜತೆಗಿನ ಚ್ಯಾಟ್​ ಸಿಕ್ಕಿದೆ. ಧ್ರುವ್​ ಸಾಕಷ್ಟು ಬಾರಿ ಈತನ ಬಳಿ ಡ್ರಗ್ಸ್​ಗೆ ಬೇಡಿಕೆ ಇಟ್ಟಿದ್ದರು ಎನ್ನುವ ವಿಚಾರ ಬಯಲಾಗಿದೆ. ಹೀಗಾಗಿ ಧ್ರುವ್​ ಅವರನ್ನು ಬಂಧಿಸಲಾಗಿದೆ.

ಇಲ್ಲಿ ಗಮನಿಸಬೇಕಾದ ಮತ್ತೊಂದು ವಿಚಾರ ಎಂದರೆ, ಡ್ರಗ್ಸ್​ ಖರೀದಿ ಮಾಡಲು ಮುಜಮ್ಮಿಲ್​ ಖಾತೆಗೆ ಧ್ರುವ್​ ಸಾಕಷ್ಟು ಬಾರಿ ಹಣ ವರ್ಗಾವಣೆ ಮಾಡಿದ್ದಾರೆ. ಮಾರ್ಚ್​ 2019ರಿಂದ ಶೇಖ್​ ಜತೆಗೆ ಧ್ರುವ್​ ಸಂಪರ್ಕಕ್ಕೆ ಬಂದಿದ್ದರು. ನಂತರ ನಿರಂತರವಾಗಿ ಡ್ರಗ್​ ಪಡೆಯುತ್ತಿದ್ದರು ಎಂದು ಮಾದಕ ವಸ್ತು ನಿಯಂತ್ರಣ ಘಟಕ ಸ್ಪಷ್ಟಪಡಿಸಿದೆ. ಸದ್ಯ ಧ್ರುವ್​ ಅವರನ್ನು ವಶಕ್ಕೆ ಪಡೆಯಲಾಗಿದೆ. ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಇನ್ನೂ ಅನೇಕರ ಹೆಸರು ಇದರಲ್ಲಿ ಬರುವ ಸಾಧ್ಯತೆಇದೆ. ಧ್ರುವ್​ ಕೂಡ ಮಾಡೆಲಿಂಗ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರು ನಟನಾ ಕ್ಷೇತ್ರಕ್ಕೆ ಕಾಲಿಡಲು ಪ್ರಯತ್ನಿಸಿದ್ದಾರೆ.

ಇದನ್ನೂ ಓದಿ: ಸುದ್ದಿ ವಿಶ್ಲೇಷಣೆ | ಡ್ರಗ್ಸ್​ ಜಾಲ ನಿರ್ಮೂಲನೆಯಾಗಿಲ್ಲ, ಇದು ಕಳಂಕವಲ್ಲದೇ ಇನ್ನೇನು?

ಸಿಸಿಬಿ ಪೊಲೀಸರಿಂದ ಇಬ್ಬರು ಡ್ರಗ್ಸ್ ಪೆಡ್ಲರ್​ಗಳ ಬಂಧನ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ