Yeh Jawaani Hai Deewani: ಮಾಜಿ ಪ್ರಿಯಕರ ರಣಬೀರ್ ಕಪೂರ್​ನ ತಬ್ಬಿ ನಿಂತ ದೀಪಿಕಾ ಪಡುಕೋಣೆ; ಏನಿದು ಸಮಾಚಾರ?

10 Years of Yeh Jawaani Hai Deewani: ದೀಪಿಕಾ ಪಡುಕೋಣೆ ಹಾಗೂ ರಣಬೀರ್ ಕಪೂರ್ ಪರಸ್ಪರ ಪ್ರೀತಿಸುತ್ತಿದ್ದರು. ಪ್ರಿಯಕರನಿಗೋಸ್ಕರ ದೀಪಿಕಾ ಕತ್ತಿನ ಹಿಂಭಾಗದಲ್ಲಿ ಆರ್​ಕೆ ಎಂದು ಹಚ್ಚೆ ಕೂಡ ಹಾಕಿಸಿಕೊಂಡಿದ್ದರು. ಆದರೆ, ಇವರ ಸಂಬಂಧ 2009ರಲ್ಲಿ ಮುರಿದು ಬಿತ್ತು.

Yeh Jawaani Hai Deewani: ಮಾಜಿ ಪ್ರಿಯಕರ ರಣಬೀರ್ ಕಪೂರ್​ನ ತಬ್ಬಿ ನಿಂತ ದೀಪಿಕಾ ಪಡುಕೋಣೆ; ಏನಿದು ಸಮಾಚಾರ?
ಯೇ ಜವಾನಿ ಹೈ ದಿವಾನಿ ಚಿತ್ರತಂಡ
Follow us
|

Updated on: Jun 01, 2023 | 4:07 PM

ಬಾಲಿವುಡ್​ನಲ್ಲಿ ಬ್ರೇಕಪ್, ವಿಚ್ಛೇದನ ತುಂಬಾನೇ ಕಾಮನ್. ಇಬ್ಬರು ಬೇರೆ ಆದ ಬಳಿಕ ಒಬ್ಬರ ಮುಖ ಒಬ್ಬರು ನೋಡಿಕೊಳ್ಳುವುದಿಲ್ಲ ಅನ್ನೋದೆಲ್ಲ ಅಪರೂಪ. ಪರಸ್ಪರ ಪ್ರೀತಿಸುತ್ತಿದ್ದವರು, ಬ್ರೇಕಪ್ ಬಳಿಕ ಒಟ್ಟಾಗಿ ಸಿನಿಮಾ ಮಾಡಿದ ಸಾಕಷ್ಟು ಉದಾಹರಣೆ ಇದೆ. ಈಗ ದೀಪಿಕಾ ಪಡುಕೋಣೆ ಹಾಗೂ ರಣಬೀರ್ ಕಪೂರ್ (Ranbir Kapoor) ಮತ್ತೆ ಒಂದಾಗಿದ್ದಾರೆ. ಮಾಜಿ ಪ್ರಿಯಕರ ರಣಬೀರ್​ ಕಪೂರ್​ ಅವರನ್ನು ದೀಪಿಕಾ ಪಡುಕೋಣೆ ತಬ್ಬಿ ನಿಂತಿದ್ದಾರೆ. ಈ ಫೋಟೋಗಳನ್ನು ಸ್ವತಃ ದೀಪಿಕಾ ಪಡುಕೋಣೆ (Deepika Padukone) ಹಂಚಿಕೊಂಡಿದ್ದಾರೆ. ಅಂದಹಾಗೆ, ಇವರ ರೀಯೂನಿಯನ್​ಗೆ ಕಾರಣ ‘ಯೇ ಜವಾನಿ ಹೈ ದಿವಾನಿ’ ಸಿನಿಮಾಗೆ 10 ವರ್ಷ ತುಂಬಿರೋದು. ಅಭಿಮಾನಿಗಳು ಕೂಡ ಈ ಫೋಟೋವನ್ನು ಶೇರ್​ ಮಾಡಿಕೊಳ್ಳುತ್ತಿದ್ದಾರೆ. ‘ಯೇ ಜವಾನಿ ಹೈ ದಿವಾನಿ’ (Yeh Jawaani Hai Deewani) ಸಿನಿಮಾದ ನೆನಪುಗಳನ್ನು ಫ್ಯಾನ್ಸ್ ಮೆಲುಕು ಹಾಕಲಾಗುತ್ತಿದೆ.

ದೀಪಿಕಾ ಪಡುಕೋಣೆ ಹಾಗೂ ರಣಬೀರ್ ಕಪೂರ್ ಪರಸ್ಪರ ಪ್ರೀತಿಸುತ್ತಿದ್ದರು. ಪ್ರಿಯಕರನಿಗೋಸ್ಕರ ದೀಪಿಕಾ ಕತ್ತಿನ ಹಿಂಭಾಗದಲ್ಲಿ ಆರ್​ಕೆ ಎಂದು ಹಚ್ಚೆ ಕೂಡ ಹಾಕಿಸಿಕೊಂಡಿದ್ದರು. ಆದರೆ, ಇವರ ಸಂಬಂಧ 2009ರಲ್ಲಿ ಮುರಿದು ಬಿತ್ತು. ವಿಶೇಷ ಎಂದರೆ ಆ ಬಳಿಕವೂ ಇವರು ಒಟ್ಟಾಗಿ ಸಿನಿಮಾ ಮಾಡಿದ್ದರು. ಇವರು ಒಟ್ಟಾಗಿ ನಟಿಸಿದ ‘ಯೇ ಜವಾನಿ ಹೈ ದಿವಾನಿ’ ಸಿನಿಮಾ 2013ರ ಮೇ 31ರಂದು ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರಕ್ಕೆ 10 ವರ್ಷ ತುಂಬಿದ ಸಂಭ್ರಮಾಚಾರಣೆಗೆ ಎಲ್ಲರೂ ಒಂದೆಡೆ ಸೇರಿದ್ದರು.

ಇದನ್ನೂ ಓದಿ: ಆಸ್ಕರ್ ಅವಾರ್ಡ್ ಕಾರ್ಯಕ್ರಮದಲ್ಲಿ ದೀಪಿಕಾ ಪಡುಕೋಣೆಗೆ ಅವಮಾನ; ಸಿಟ್ಟಿಗೆದ್ದ ಫ್ಯಾನ್ಸ್

‘ಯೇ ಜವಾನಿ ಹೈ ದಿವಾನಿ’ ಸಿನಿಮಾದ ಕಲಾವಿದರಾದ ದೀಪಿಕಾ ಪಡುಕೋಣೆ, ಕಲ್ಕಿ ಕೇಕ್ಲಾ, ಆದಿತ್ಯ ರಾಯ್ ಕಪೂರ್, ನಿರ್ದೇಶಕ ಅಯಾನ್ ಮುಖರ್ಜಿ, ನಿರ್ಮಾಪಕ ಕರಣ್ ಜೋಹರ್ ಮೊದಲಾದವರು ಒಂದೆಡೆ ಸೇರಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಾಗಿದೆ.

ಇದನ್ನೂ ಓದಿ: ‘ಪ್ರಾಜೆಕ್ಟ್​ ಕೆ’ ಚಿತ್ರಕ್ಕೆ ಭರ್ಜರಿ ಸಂಭಾವನೆ ಪಡೆದ ದೀಪಿಕಾ ಪಡುಕೋಣೆ; ಸ್ಟಾರ್​ ಹೀರೋಗಿಂತ ಹೆಚ್ಚು ರೆಮ್ಯುನರೇಷನ್

ರಣಬೀರ್-ದೀಪಿಕಾ ಪಡುಕೋಣೆ ಒಂದೇ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಹಲವು ಬಾರಿ ಮುಖಾಮುಖಿ ಆಗುವ ಸಂದರ್ಭ ಬರುತ್ತದೆ. ಈ ಕಾರಣಕ್ಕೆ ದೀಪಿಕಾ ಪಡುಕೋಣೆ ಹಾಗೂ ರಣಬೀರ್ ಇಬ್ಬರೂ ಹಳೆಯ ಘಟನೆಗಳನ್ನು ಮರೆತು ಮುಂದೆ ಬಂದಿದ್ದಾರೆ. ಹೀಗಾಗಿ, ರೀಯೂನಿಯನ್ ಸಂದರ್ಭದಲ್ಲಿ ಒಂದೆಡೆ ಸೇರಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ‘ಯೇ ಜವಾನಿ ಹೈ ದಿವಾನಿ’ ಸಿನಿಮಾ ಈಗಲೂ ಅನೇಕರ ಫೇವರಿಟ್ ಚಿತ್ರ ಎನಿಸಿಕೊಂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ