AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ದುರಂತ: ‘12th ಫೇಲ್’ ಸಿನಿಮಾ ನಟನ ಸಂಬಂಧಿ, ಕರ್ನಾಟಕದ ಕ್ಲೈವ್ ಕುಂದರ್ ಸಾವು

ಪತನವಾದ ಏರ್ ಇಂಡಿಯಾ ವಿಮಾನದಲ್ಲಿ ಕ್ಲೈವ್ ಕುಂದರ್ ಅವರು ಕೋ-ಪೈಲೆಟ್ ಆಗಿದ್ದರು. ಕರ್ನಾಟಕ ಮೂಲದ ಅವರು ಬಾಲಿವುಡ್ ನಟ ವಿಕ್ರಾಂತ್ ಮಾಸಿಯ ಸಂಬಂಧಿ ಎಂಬುದು ತಿಳಿದು ಬಂದಿದೆ. ಕ್ಲೈವ್ ಕುಂದರ್ ನಿಧನಕ್ಕೆ ವಿಕ್ರಾಂತ್ ಮಾಸಿ ಅವರು ಕಂಬನಿ ಮಿಡಿದ್ದಾರೆ. ಆ ಬಗ್ಗೆ ಇಲ್ಲಿದೆ ಇನ್ನಷ್ಟು ವಿವರ..

ವಿಮಾನ ದುರಂತ: ‘12th ಫೇಲ್’ ಸಿನಿಮಾ ನಟನ ಸಂಬಂಧಿ, ಕರ್ನಾಟಕದ ಕ್ಲೈವ್ ಕುಂದರ್ ಸಾವು
Vikrant Massey, Clive Kunder
ಮದನ್​ ಕುಮಾರ್​
|

Updated on: Jun 12, 2025 | 11:13 PM

Share

ಇಂಥದ್ದೊಂದು ದುರಂತ ಸಂಭವಿಸುತ್ತದೆ ಎಂದು ಯಾರೂ ಊಹಿಸಿರಲಿಲ್ಲ. 242 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ (Air India) ವಿಮಾನ ಇಂದು (ಜೂನ್ 12) ಪತನ ಆಗಿದೆ. ಈ ದುರ್ಘಟನೆಗೆ ಇಡೀ ವಿಶ್ವದ ಜನರು ಸಂತಾಪ ಸೂಚಿಸುತ್ತಿದ್ದಾರೆ. ತಮ್ಮವರನ್ನು ಕಳೆದುಕೊಂಡ ಕುಟುಂಬದವರು ಶೋಕದಲ್ಲಿ ಮುಳುಗಿದ್ದಾರೆ. ಈ ವಿಮಾನದಲ್ಲಿ ಕೋ-ಪೈಲೆಟ್ ಆಗಿದ್ದ ಕರ್ನಾಟಕ ಮೂಲದ ಕ್ಲೈವ್ ಕುಂದರ್ (Clive Kunder) ಅವರು ಕೂಡ ನಿಧನರಾಗಿದ್ದಾರೆ. ಅಂದಹಾಗೆ, ಕ್ಲೈವ್ ಕುಂದರ್ ಅವರು ಬಾಲಿವುಡ್ ನಟ ವಿಕ್ರಾಂತ್ ಮಾಸಿ ಅವರ ಸಂಬಂಧಿ ಎಂಬುದು ತಿಳಿದುಬಂದಿದೆ. ಇದನ್ನು ವಿಕ್ರಾಂತ್ ಮಾಸಿ (Vikrant Massey) ಅವರೇ ಖಚಿತಪಡಿಸಿದ್ದಾರೆ.

‘12th ಫೇಲ್’ ಸಿನಿಮಾ ಮೂಲಕ ನಟ ವಿಕ್ರಾಂತ್ ಮಾಸಿ ಅವರು ಅಪಾರ ಜನಪ್ರಿಯತೆ ಗಳಿಸಿದ್ದಾರೆ. ಅಹಮದಾಬಾದ್​ನಲ್ಲಿ ವಿಮಾನ ಪತನ ಆದ ಬಳಿಕ ವಿಕ್ರಾಂತ್ ಮಾಸಿ ಅವರು ಸೋಶಿಯಲ್ ಮೀಡಿಯಾದಲ್ಲಿ ಸಂತಾಪ ಸೂಚಿಸಿದ್ದಾರೆ. ತಮ್ಮ ಕಸಿನ್ ಆದ ಕ್ಲೈವ್ ಕುಂದರ್ ನಿಧನಕ್ಕೆ ಅವರು ಕಂಬನಿ ಮಿಡಿದ್ದಾರೆ.

‘ಅಹಮದಾಬಾದ್ ವಿಮಾನ ದುರಂತದಲ್ಲಿ ಮೃತರಾದವರ ಕುಟುಂಬದವರು ಮತ್ತು ಆಪ್ತರ ಬಗ್ಗೆ ನೆನಪಿಸಿಕೊಂಡಾಗ ತೀವ್ರ ನೋವಾಗುತ್ತದೆ. ನನ್ನ ಅಂಕಲ್ ಕ್ಲಿಫೋರ್ಡ್​ ಕುಂದರ್ ಅವರ ಮಗ ಕ್ಲೈವ್ ಕುಂದರ್ ಕೂಡ ಮೃತರಾಗಿದ್ದಾರೆ ಎಂಬುದು ತಿಳಿದ ಬಳಿಕ ಹೆಚ್ಚು ನೋವಾಯಿತು. ಆ ವಿಮಾನದಲ್ಲಿ ಕ್ಲೈವ್ ಕುಂದರ್ ಫಸ್ಟ್​ ಆಫೀಸರ್ ಆಗಿದ್ದರು’ ಎಂದು ವಿಕ್ರಾಂತ್ ಮಾಸಿ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
Image
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
Image
ಅಪಘಾತಕ್ಕೊಳಗಾದ ಏರ್ ಇಂಡಿಯಾ ವಿಮಾನದಲ್ಲಿ ಮಾಜಿ ಸಿಎಂ ರೂಪಾನಿ ಇದ್ರು
Image
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ

ವಿಮಾನ ಪತನದ ಬಳಿಕ ಚಿತ್ರರಂಗದ ಹಲವರು ಪ್ರತಿಕ್ರಿಯಿಸಿದ್ದಾರೆ. ಶಾರುಖ್ ಖಾನ್, ಸಲ್ಮಾನ್ ಖಾನ್, ಯಶ್, ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ರಮ್ಯಾ, ಅಕ್ಷಯ್ ಕುಮಾರ್, ಆಲಿಯಾ ಭಟ್, ಕಂಗನಾ ರಣಾವತ್, ಸೋನು ಸೂದ್, ರಣವೀರ್ ಸಿಂಗ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ವಿಮಾನ ಪತನದ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಅಹಮದಾಬಾದ್​ ವಿಮಾನ ಪತನ: ಮೃತರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ ಗ್ರೂಪ್

ನಟ ಶಾರುಖ್ ಖಾನ್ ಅವರು ಟ್ವೀಟ್ ಮಾಡಿ, ‘ಅಹಮದಾಬಾದ್ ವಿಮಾನ ದುರಂತದ ಸುದ್ದಿ ತಿಳಿದು ಬಹಳ ನೋವಾಯಿತು. ಮೃತರ ಕುಟುಂಬಕ್ಕಾಗಿ, ತೊಂದರೆ ಒಳಗಾದ ಎಲ್ಲರಿಗಾಗಿ ನನ್ನ ಪ್ರಾರ್ಥನೆಗಳು’ ಎಂದಿದ್ದಾರೆ. ನಟ ಸಲ್ಮಾನ್ ಖಾನ್ ಕೂಡ ಇನ್​ಸ್ಟಾಗ್ರಾಮ್ ಸ್ಟೋರಿ ಪೋಸ್ಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ