AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ದುರಂತ: ‘12th ಫೇಲ್’ ಸಿನಿಮಾ ನಟನ ಸಂಬಂಧಿ, ಕರ್ನಾಟಕದ ಕ್ಲೈವ್ ಕುಂದರ್ ಸಾವು

ಪತನವಾದ ಏರ್ ಇಂಡಿಯಾ ವಿಮಾನದಲ್ಲಿ ಕ್ಲೈವ್ ಕುಂದರ್ ಅವರು ಕೋ-ಪೈಲೆಟ್ ಆಗಿದ್ದರು. ಕರ್ನಾಟಕ ಮೂಲದ ಅವರು ಬಾಲಿವುಡ್ ನಟ ವಿಕ್ರಾಂತ್ ಮಾಸಿಯ ಸಂಬಂಧಿ ಎಂಬುದು ತಿಳಿದು ಬಂದಿದೆ. ಕ್ಲೈವ್ ಕುಂದರ್ ನಿಧನಕ್ಕೆ ವಿಕ್ರಾಂತ್ ಮಾಸಿ ಅವರು ಕಂಬನಿ ಮಿಡಿದ್ದಾರೆ. ಆ ಬಗ್ಗೆ ಇಲ್ಲಿದೆ ಇನ್ನಷ್ಟು ವಿವರ..

ವಿಮಾನ ದುರಂತ: ‘12th ಫೇಲ್’ ಸಿನಿಮಾ ನಟನ ಸಂಬಂಧಿ, ಕರ್ನಾಟಕದ ಕ್ಲೈವ್ ಕುಂದರ್ ಸಾವು
Vikrant Massey, Clive Kunder
ಮದನ್​ ಕುಮಾರ್​
|

Updated on: Jun 12, 2025 | 11:13 PM

Share

ಇಂಥದ್ದೊಂದು ದುರಂತ ಸಂಭವಿಸುತ್ತದೆ ಎಂದು ಯಾರೂ ಊಹಿಸಿರಲಿಲ್ಲ. 242 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ (Air India) ವಿಮಾನ ಇಂದು (ಜೂನ್ 12) ಪತನ ಆಗಿದೆ. ಈ ದುರ್ಘಟನೆಗೆ ಇಡೀ ವಿಶ್ವದ ಜನರು ಸಂತಾಪ ಸೂಚಿಸುತ್ತಿದ್ದಾರೆ. ತಮ್ಮವರನ್ನು ಕಳೆದುಕೊಂಡ ಕುಟುಂಬದವರು ಶೋಕದಲ್ಲಿ ಮುಳುಗಿದ್ದಾರೆ. ಈ ವಿಮಾನದಲ್ಲಿ ಕೋ-ಪೈಲೆಟ್ ಆಗಿದ್ದ ಕರ್ನಾಟಕ ಮೂಲದ ಕ್ಲೈವ್ ಕುಂದರ್ (Clive Kunder) ಅವರು ಕೂಡ ನಿಧನರಾಗಿದ್ದಾರೆ. ಅಂದಹಾಗೆ, ಕ್ಲೈವ್ ಕುಂದರ್ ಅವರು ಬಾಲಿವುಡ್ ನಟ ವಿಕ್ರಾಂತ್ ಮಾಸಿ ಅವರ ಸಂಬಂಧಿ ಎಂಬುದು ತಿಳಿದುಬಂದಿದೆ. ಇದನ್ನು ವಿಕ್ರಾಂತ್ ಮಾಸಿ (Vikrant Massey) ಅವರೇ ಖಚಿತಪಡಿಸಿದ್ದಾರೆ.

‘12th ಫೇಲ್’ ಸಿನಿಮಾ ಮೂಲಕ ನಟ ವಿಕ್ರಾಂತ್ ಮಾಸಿ ಅವರು ಅಪಾರ ಜನಪ್ರಿಯತೆ ಗಳಿಸಿದ್ದಾರೆ. ಅಹಮದಾಬಾದ್​ನಲ್ಲಿ ವಿಮಾನ ಪತನ ಆದ ಬಳಿಕ ವಿಕ್ರಾಂತ್ ಮಾಸಿ ಅವರು ಸೋಶಿಯಲ್ ಮೀಡಿಯಾದಲ್ಲಿ ಸಂತಾಪ ಸೂಚಿಸಿದ್ದಾರೆ. ತಮ್ಮ ಕಸಿನ್ ಆದ ಕ್ಲೈವ್ ಕುಂದರ್ ನಿಧನಕ್ಕೆ ಅವರು ಕಂಬನಿ ಮಿಡಿದ್ದಾರೆ.

‘ಅಹಮದಾಬಾದ್ ವಿಮಾನ ದುರಂತದಲ್ಲಿ ಮೃತರಾದವರ ಕುಟುಂಬದವರು ಮತ್ತು ಆಪ್ತರ ಬಗ್ಗೆ ನೆನಪಿಸಿಕೊಂಡಾಗ ತೀವ್ರ ನೋವಾಗುತ್ತದೆ. ನನ್ನ ಅಂಕಲ್ ಕ್ಲಿಫೋರ್ಡ್​ ಕುಂದರ್ ಅವರ ಮಗ ಕ್ಲೈವ್ ಕುಂದರ್ ಕೂಡ ಮೃತರಾಗಿದ್ದಾರೆ ಎಂಬುದು ತಿಳಿದ ಬಳಿಕ ಹೆಚ್ಚು ನೋವಾಯಿತು. ಆ ವಿಮಾನದಲ್ಲಿ ಕ್ಲೈವ್ ಕುಂದರ್ ಫಸ್ಟ್​ ಆಫೀಸರ್ ಆಗಿದ್ದರು’ ಎಂದು ವಿಕ್ರಾಂತ್ ಮಾಸಿ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
Image
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
Image
ಅಪಘಾತಕ್ಕೊಳಗಾದ ಏರ್ ಇಂಡಿಯಾ ವಿಮಾನದಲ್ಲಿ ಮಾಜಿ ಸಿಎಂ ರೂಪಾನಿ ಇದ್ರು
Image
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ

ವಿಮಾನ ಪತನದ ಬಳಿಕ ಚಿತ್ರರಂಗದ ಹಲವರು ಪ್ರತಿಕ್ರಿಯಿಸಿದ್ದಾರೆ. ಶಾರುಖ್ ಖಾನ್, ಸಲ್ಮಾನ್ ಖಾನ್, ಯಶ್, ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ರಮ್ಯಾ, ಅಕ್ಷಯ್ ಕುಮಾರ್, ಆಲಿಯಾ ಭಟ್, ಕಂಗನಾ ರಣಾವತ್, ಸೋನು ಸೂದ್, ರಣವೀರ್ ಸಿಂಗ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ವಿಮಾನ ಪತನದ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಅಹಮದಾಬಾದ್​ ವಿಮಾನ ಪತನ: ಮೃತರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ ಗ್ರೂಪ್

ನಟ ಶಾರುಖ್ ಖಾನ್ ಅವರು ಟ್ವೀಟ್ ಮಾಡಿ, ‘ಅಹಮದಾಬಾದ್ ವಿಮಾನ ದುರಂತದ ಸುದ್ದಿ ತಿಳಿದು ಬಹಳ ನೋವಾಯಿತು. ಮೃತರ ಕುಟುಂಬಕ್ಕಾಗಿ, ತೊಂದರೆ ಒಳಗಾದ ಎಲ್ಲರಿಗಾಗಿ ನನ್ನ ಪ್ರಾರ್ಥನೆಗಳು’ ಎಂದಿದ್ದಾರೆ. ನಟ ಸಲ್ಮಾನ್ ಖಾನ್ ಕೂಡ ಇನ್​ಸ್ಟಾಗ್ರಾಮ್ ಸ್ಟೋರಿ ಪೋಸ್ಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!