AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿ ಶಂಕರ್ ಗುರೂಜಿ ಪಾತ್ರ ಮಾಡಲಿರುವ ‘12th ಫೇಲ್’ ನಟ ವಿಕ್ರಾಂತ್ ಮಾಸಿ

‘12th ಫೇಲ್’, ‘ದಿ ಸಾಬರಮತಿ ರಿಪೋರ್ಟ್’ ಮುಂತಾದ ಸಿನಿಮಾಗಳ ಮೂಲಕ ಹೆಸರು ಮಾಡಿರುವ ನಟ ವಿಕ್ರಾಂತ್ ಮಾಸಿ ಅವರಿಗೆ ಈಗ ಇನ್ನೊಂದು ಅವಕಾಶ ಸಿಕ್ಕಿದೆ. ‘ವೈಟ್’ ಸಿನಿಮಾದಲ್ಲಿ ವಿಕ್ರಾಂತ್ ಮಾಸಿ ಅವರು ಶ್ರೀ ಶ್ರೀ ರವಿಶಂಕರ್ ಗುರೂಜಿ ಪಾತ್ರವನ್ನು ಮಾಡಲು ಸಜ್ಜಾಗಿದ್ದಾರೆ. ‘ಪಠಾಣ್’, ‘ವಾರ್’, ‘ಫೈಟರ್’ ಸಿನಿಮಾಗಳ ಖ್ಯಾತಿಯ ನಿರ್ಮಾಪಕ ಸಿದ್ದಾರ್ಥ್ ಆನಂದ್ ಅವರು ‘ವೈಟ್’ ಸಿನಿಮಾ ನಿರ್ಮಿಸಲಿದ್ದಾರೆ.

ರವಿ ಶಂಕರ್ ಗುರೂಜಿ ಪಾತ್ರ ಮಾಡಲಿರುವ ‘12th ಫೇಲ್’ ನಟ ವಿಕ್ರಾಂತ್ ಮಾಸಿ
Sri Sri Ravi Shankar, Vikrant Massey
ಮದನ್​ ಕುಮಾರ್​
|

Updated on: Apr 25, 2025 | 6:45 PM

Share

ನಟ ವಿಕ್ರಾಂತ್ ಮಾಸಿ ಅವರು ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತು ಮಾಡಿದ್ದಾರೆ. ‘12th ಫೇಲ್’ (12th Fail) ಸಿನಿಮಾ ಮೂಲಕ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ಸಿಕ್ಕಿತು. ಕಳೆದ ವರ್ಷ ಬಿಡುಗಡೆ ಆದ ‘ದಿ ಸಾಬರಮತಿ ರಿಪೋರ್ಟ್’ ಸಿನಿಮಾದಲ್ಲಿ ಕೂಡ ಅವರ ನಟನೆಗೆ ಜನರು ಮೆಚ್ಚುಗೆ ಸೂಚಿಸಿದರು. ಈಗ ವಿಕ್ರಾಂತ್ ಮಾಸಿ (Vikrant Massey) ಅವರಿಗೆ ಹೊಸ ಹೊಸ ಅವಕಾಶಗಳು ಸಿಗುತ್ತಿವೆ. ಹೊಸ ಸಿನಿಮಾದಲ್ಲಿ ಅವರು ಶ್ರೀ ಶ್ರೀ ರವಿಶಂಕರ್ ಗುರೂಜಿ (Sri Sri Ravi Shankar) ಪಾತ್ರವನ್ನು ಮಾಡಲಿದ್ದಾರೆ. ಈ ಚಿತ್ರಕ್ಕೆ ‘ವೈಟ್’ ಎಂದು ಹೆಸರು ಇಡಲಾಗಿದೆ. ಈಗಾಗಲೇ ಈ ಸಿನಿಮಾಗಾಗಿ ಅವರು ತಯಾರಿ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

‘ಆರ್ಟ್ ಆಫ್ ಲಿವಿಂಗ್’ ಸಂಸ್ಥಾಪಕ ರವಿ ಶಂಕರ್ ಗುರೂಜಿ ಅವರು ವಿದೇಶದಲ್ಲಿ ಸಹ ತಮ್ಮ ಛಾಪು ಮೂಡಿಸಿದ್ದಾರೆ. ಕೊಲಂಬಿಯಾದ ಸಿವಿಲ್ ವಾರ್ ಅಂತ್ಯಗೊಳಿಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದಾರೆ. ‘ವೈಟ್’ ಸಿನಿಮಾದಲ್ಲಿ ಈ ವಿಷಯವನ್ನು ತೋರಿಸಲಾಗುವುದು. ವಿಕ್ರಾಂತ್ ಮಾಸಿ ಅವರು ರವಿಶಂಕರ್ ಗುರೂಜಿ ಪಾತ್ರದಲ್ಲಿ ಹೇಗೆ ಕಾಣಿಸುತ್ತಾರೆ ಎಂಬುದನ್ನು ನೋಡಲು ಫ್ಯಾನ್ಸ್ ಉತ್ಸುಕರಾಗಿದ್ದಾರೆ.

ಶ್ರೀ ಶ್ರೀ ರವಿಶಂಕರ್ ಗುರೂಜಿ ಪಾತ್ರವನ್ನು ಮಾಡಲು ವಿಕ್ರಾಂತ್ ಮಾಸಿ ಅವರು ಈಗಾಗಲೇ ಉದ್ದ ಕೂದಲು ಬಿಡುತ್ತಿದ್ದಾರೆ. ಹಳೇ ವಿಡಿಯೋಗಳನ್ನು ನೋಡಿ ರವಿಶಂಕರ್ ಅವರ ಬಾಡಿ ಲಾಂಗ್ವೇಜ್ ಗಮನಿಸುತ್ತಿದ್ದಾರೆ. ಎಲ್ಲವೂ ಎಂದುಕೊಂಡಂತೆ ನಡೆದರೆ ಜೂನ್ ತಿಂಗಳಲ್ಲಿ ‘ವೈಟ್’ ಸಿನಿಮಾದ ಶೂಟಿಂಗ್ ಆರಂಭ ಆಗಲಿದೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟ ಆಗಿದೆ.

ಇದನ್ನೂ ಓದಿ
Image
‘ದಿ ಸಾಬರಮತಿ ರಿಪೋರ್ಟ್’ ಸಿನಿಮಾ ನಟನಿಗೆ ಕೊಲೆ ಬೆದರಿಕೆ
Image
ರಾಮನ ಭಕ್ತರಿಗೆ ಅಪಮಾನ: ಹಳೆ ಟ್ವೀಟ್​ಗೆ ಕ್ಷಮೆ ಕೇಳಿದ ‘12th ಫೇಲ್’ ನಟ
Image
ನಿವೃತ್ತಿ ಪಡೆಯುವ ಮಾತಾಡಿದ ‘12th ಫೇಲ್​’ ಚಿತ್ರದ ನಟ; ಇದಕ್ಕೆ ಕಾರಣ ಕರೀನಾ
Image
ಬಾಲಿವುಡ್​ ಮಂದಿಯನ್ನು ಬೆರಗುಗೊಳಿಸಿದ 12th ಫೇಲ್​; ಕರಣ್​ ಜೋಹರ್​ ಚಪ್ಪಾಳೆ

ಇದನ್ನೂ ಓದಿ: ಮೋದಿ ಮೆಚ್ಚಿದ ನಟ ವಿಕ್ರಾಂತ್ ಮಾಸಿ ನಿವೃತ್ತಿ ಘೋಷಿಸಿಲ್ಲ; ಇಲ್ಲಿದೆ ಅಸಲಿ ವಿಚಾರ

‘ವೈಟ್’ ಸಿನಿಮಾ ಥ್ರಿಲ್ಲರ್ ಶೈಲಿಯಲ್ಲಿ ಮೂಡಿಬರಲಿದೆ. ಬಾಲಿವುಡ್​ನ ಖ್ಯಾತ ನಿರ್ಮಾಪಕ ಸಿದ್ದಾರ್ಥ್ ಆನಂದ್ ಅವರು ಈ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ. ಮಹಾವೀರ್ ಜೈನ್ ಮತ್ತು ಆನಂದ್ ಕೂಡ ನಿರ್ಮಾಣದಲ್ಲಿ ಕೈ ಜೋಡಿಸಲಿದ್ದಾರೆ. ವಿದೇಶದ ತಂತ್ರಜ್ಞರು ಈ ಸಿನಿಮಾಗಾಗಿ ಕೆಲಸ ಮಾಡಲಿದ್ದಾರೆ. ಈಗಾಗಲೇ ಕೊಲಂಬಿಯಾದಲ್ಲಿ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ ಎನ್ನಲಾಗಿದೆ. 2026ರಲ್ಲಿ ‘ವೈಟ್’ ಸಿನಿಮಾ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!