AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿ ಶಂಕರ್ ಗುರೂಜಿ ಪಾತ್ರ ಮಾಡಲಿರುವ ‘12th ಫೇಲ್’ ನಟ ವಿಕ್ರಾಂತ್ ಮಾಸಿ

‘12th ಫೇಲ್’, ‘ದಿ ಸಾಬರಮತಿ ರಿಪೋರ್ಟ್’ ಮುಂತಾದ ಸಿನಿಮಾಗಳ ಮೂಲಕ ಹೆಸರು ಮಾಡಿರುವ ನಟ ವಿಕ್ರಾಂತ್ ಮಾಸಿ ಅವರಿಗೆ ಈಗ ಇನ್ನೊಂದು ಅವಕಾಶ ಸಿಕ್ಕಿದೆ. ‘ವೈಟ್’ ಸಿನಿಮಾದಲ್ಲಿ ವಿಕ್ರಾಂತ್ ಮಾಸಿ ಅವರು ಶ್ರೀ ಶ್ರೀ ರವಿಶಂಕರ್ ಗುರೂಜಿ ಪಾತ್ರವನ್ನು ಮಾಡಲು ಸಜ್ಜಾಗಿದ್ದಾರೆ. ‘ಪಠಾಣ್’, ‘ವಾರ್’, ‘ಫೈಟರ್’ ಸಿನಿಮಾಗಳ ಖ್ಯಾತಿಯ ನಿರ್ಮಾಪಕ ಸಿದ್ದಾರ್ಥ್ ಆನಂದ್ ಅವರು ‘ವೈಟ್’ ಸಿನಿಮಾ ನಿರ್ಮಿಸಲಿದ್ದಾರೆ.

ರವಿ ಶಂಕರ್ ಗುರೂಜಿ ಪಾತ್ರ ಮಾಡಲಿರುವ ‘12th ಫೇಲ್’ ನಟ ವಿಕ್ರಾಂತ್ ಮಾಸಿ
Sri Sri Ravi Shankar, Vikrant Massey
ಮದನ್​ ಕುಮಾರ್​
|

Updated on: Apr 25, 2025 | 6:45 PM

Share

ನಟ ವಿಕ್ರಾಂತ್ ಮಾಸಿ ಅವರು ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತು ಮಾಡಿದ್ದಾರೆ. ‘12th ಫೇಲ್’ (12th Fail) ಸಿನಿಮಾ ಮೂಲಕ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ಸಿಕ್ಕಿತು. ಕಳೆದ ವರ್ಷ ಬಿಡುಗಡೆ ಆದ ‘ದಿ ಸಾಬರಮತಿ ರಿಪೋರ್ಟ್’ ಸಿನಿಮಾದಲ್ಲಿ ಕೂಡ ಅವರ ನಟನೆಗೆ ಜನರು ಮೆಚ್ಚುಗೆ ಸೂಚಿಸಿದರು. ಈಗ ವಿಕ್ರಾಂತ್ ಮಾಸಿ (Vikrant Massey) ಅವರಿಗೆ ಹೊಸ ಹೊಸ ಅವಕಾಶಗಳು ಸಿಗುತ್ತಿವೆ. ಹೊಸ ಸಿನಿಮಾದಲ್ಲಿ ಅವರು ಶ್ರೀ ಶ್ರೀ ರವಿಶಂಕರ್ ಗುರೂಜಿ (Sri Sri Ravi Shankar) ಪಾತ್ರವನ್ನು ಮಾಡಲಿದ್ದಾರೆ. ಈ ಚಿತ್ರಕ್ಕೆ ‘ವೈಟ್’ ಎಂದು ಹೆಸರು ಇಡಲಾಗಿದೆ. ಈಗಾಗಲೇ ಈ ಸಿನಿಮಾಗಾಗಿ ಅವರು ತಯಾರಿ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

‘ಆರ್ಟ್ ಆಫ್ ಲಿವಿಂಗ್’ ಸಂಸ್ಥಾಪಕ ರವಿ ಶಂಕರ್ ಗುರೂಜಿ ಅವರು ವಿದೇಶದಲ್ಲಿ ಸಹ ತಮ್ಮ ಛಾಪು ಮೂಡಿಸಿದ್ದಾರೆ. ಕೊಲಂಬಿಯಾದ ಸಿವಿಲ್ ವಾರ್ ಅಂತ್ಯಗೊಳಿಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದಾರೆ. ‘ವೈಟ್’ ಸಿನಿಮಾದಲ್ಲಿ ಈ ವಿಷಯವನ್ನು ತೋರಿಸಲಾಗುವುದು. ವಿಕ್ರಾಂತ್ ಮಾಸಿ ಅವರು ರವಿಶಂಕರ್ ಗುರೂಜಿ ಪಾತ್ರದಲ್ಲಿ ಹೇಗೆ ಕಾಣಿಸುತ್ತಾರೆ ಎಂಬುದನ್ನು ನೋಡಲು ಫ್ಯಾನ್ಸ್ ಉತ್ಸುಕರಾಗಿದ್ದಾರೆ.

ಶ್ರೀ ಶ್ರೀ ರವಿಶಂಕರ್ ಗುರೂಜಿ ಪಾತ್ರವನ್ನು ಮಾಡಲು ವಿಕ್ರಾಂತ್ ಮಾಸಿ ಅವರು ಈಗಾಗಲೇ ಉದ್ದ ಕೂದಲು ಬಿಡುತ್ತಿದ್ದಾರೆ. ಹಳೇ ವಿಡಿಯೋಗಳನ್ನು ನೋಡಿ ರವಿಶಂಕರ್ ಅವರ ಬಾಡಿ ಲಾಂಗ್ವೇಜ್ ಗಮನಿಸುತ್ತಿದ್ದಾರೆ. ಎಲ್ಲವೂ ಎಂದುಕೊಂಡಂತೆ ನಡೆದರೆ ಜೂನ್ ತಿಂಗಳಲ್ಲಿ ‘ವೈಟ್’ ಸಿನಿಮಾದ ಶೂಟಿಂಗ್ ಆರಂಭ ಆಗಲಿದೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟ ಆಗಿದೆ.

ಇದನ್ನೂ ಓದಿ
Image
‘ದಿ ಸಾಬರಮತಿ ರಿಪೋರ್ಟ್’ ಸಿನಿಮಾ ನಟನಿಗೆ ಕೊಲೆ ಬೆದರಿಕೆ
Image
ರಾಮನ ಭಕ್ತರಿಗೆ ಅಪಮಾನ: ಹಳೆ ಟ್ವೀಟ್​ಗೆ ಕ್ಷಮೆ ಕೇಳಿದ ‘12th ಫೇಲ್’ ನಟ
Image
ನಿವೃತ್ತಿ ಪಡೆಯುವ ಮಾತಾಡಿದ ‘12th ಫೇಲ್​’ ಚಿತ್ರದ ನಟ; ಇದಕ್ಕೆ ಕಾರಣ ಕರೀನಾ
Image
ಬಾಲಿವುಡ್​ ಮಂದಿಯನ್ನು ಬೆರಗುಗೊಳಿಸಿದ 12th ಫೇಲ್​; ಕರಣ್​ ಜೋಹರ್​ ಚಪ್ಪಾಳೆ

ಇದನ್ನೂ ಓದಿ: ಮೋದಿ ಮೆಚ್ಚಿದ ನಟ ವಿಕ್ರಾಂತ್ ಮಾಸಿ ನಿವೃತ್ತಿ ಘೋಷಿಸಿಲ್ಲ; ಇಲ್ಲಿದೆ ಅಸಲಿ ವಿಚಾರ

‘ವೈಟ್’ ಸಿನಿಮಾ ಥ್ರಿಲ್ಲರ್ ಶೈಲಿಯಲ್ಲಿ ಮೂಡಿಬರಲಿದೆ. ಬಾಲಿವುಡ್​ನ ಖ್ಯಾತ ನಿರ್ಮಾಪಕ ಸಿದ್ದಾರ್ಥ್ ಆನಂದ್ ಅವರು ಈ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ. ಮಹಾವೀರ್ ಜೈನ್ ಮತ್ತು ಆನಂದ್ ಕೂಡ ನಿರ್ಮಾಣದಲ್ಲಿ ಕೈ ಜೋಡಿಸಲಿದ್ದಾರೆ. ವಿದೇಶದ ತಂತ್ರಜ್ಞರು ಈ ಸಿನಿಮಾಗಾಗಿ ಕೆಲಸ ಮಾಡಲಿದ್ದಾರೆ. ಈಗಾಗಲೇ ಕೊಲಂಬಿಯಾದಲ್ಲಿ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ ಎನ್ನಲಾಗಿದೆ. 2026ರಲ್ಲಿ ‘ವೈಟ್’ ಸಿನಿಮಾ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ಬೆಂಗಳೂರು: ಮೂರು ತಿಂಗಳಲ್ಲಿ ಮತ್ತೆ ಹೆಬ್ಬಾಳ ಫ್ಲೈಓವರ್ ವಿಸ್ತರಣೆ
ಬೆಂಗಳೂರು: ಮೂರು ತಿಂಗಳಲ್ಲಿ ಮತ್ತೆ ಹೆಬ್ಬಾಳ ಫ್ಲೈಓವರ್ ವಿಸ್ತರಣೆ