AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತಿ ಪಡೆಯುವ ಮಾತಾಡಿದ ‘12th ಫೇಲ್​’ ಚಿತ್ರದ ನಟ; ಇದಕ್ಕೆ ಕಾರಣ ಕರೀನಾ ಕಪೂರ್​

‘12th ಫೇಲ್​’ ಸಿನಿಮಾದ ನಟ ವಿಕ್ರಾಂತ್​ ಮಾಸ್ಸಿ ಅವರಿಗೆ ಬೇಡಿಕೆ ಹೆಚ್ಚಿದೆ. ಅನೇಕ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಹಲವು ಸೆಲೆಬ್ರಿಟಿಗಳು ವಿಕ್ರಾಂತ್​ ಮಾಸ್ಸಿ ಅಭಿನಯಕ್ಕೆ ಭೇಷ್​ ಎನ್ನುತ್ತಿದ್ದಾರೆ. ಇಂಥ ಸಮಯದಲ್ಲಿ ಅವರು ನಿವೃತ್ತಿಯ ಬಗ್ಗೆ ಮಾತನಾಡಿದ್ದು ಯಾಕೆ? ಅದಕ್ಕೆ ಕಾರಣ ಆಗಿರುವುದು ನಟಿ ಕರೀನಾ ಕಪೂರ್​ ಖಾನ್​. ಆ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ..

ನಿವೃತ್ತಿ ಪಡೆಯುವ ಮಾತಾಡಿದ ‘12th ಫೇಲ್​’ ಚಿತ್ರದ ನಟ; ಇದಕ್ಕೆ ಕಾರಣ ಕರೀನಾ ಕಪೂರ್​
ವಿಕ್ರಾಂತ್​ ಮಾಸ್ಸಿ, ಕರೀನಾ ಕಪೂರ್​ ಖಾನ್​
ಮದನ್​ ಕುಮಾರ್​
|

Updated on: Feb 02, 2024 | 6:43 PM

Share

ನಟ ವಿಕ್ರಾಂತ್​ ಮಾಸ್ಸಿ (Vikrant Massey) ಅವರು ‘12th ಫೇಲ್​’ ಸಿನಿಮಾದ ಯಶಸ್ಸಿನಿಂದ ಸಖತ್​ ಫೇಮಸ್​ ಆಗಿದ್ದಾರೆ. ಚಿತ್ರಮಂದಿರದಲ್ಲಿ ಉತ್ತಮ ಕಲೆಕ್ಷನ್​ ಮಾಡಿ, ನಂತರ ಒಟಿಟಿಯಲ್ಲೂ ಅಬ್ಬರಿಸಿದ ಈ ಚಿತ್ರದ ಬಗ್ಗೆ ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಹೃತಿಕ್​ ರೋಷನ್​, ಜಾನ್ವಿ ಕಪೂರ್​, ಕಂಗನಾ ರಣಾವತ್​ ಮುಂತಾದವರು ‘12th ಫೇಲ್​’ (12th Fail Movie) ಸಿನಿಮಾವನ್ನು ಮನಸಾರೆ ಹೊಗಳಿದ್ದಾರೆ. ಈಗ ನಟಿ ಕರೀನಾ ಕಪೂರ್​ (Kareena Kapoor Khan) ಕೂಡ ಈ ಸಿನಿಮಾವನ್ನು ನೋಡಿ ಇಷ್ಟಪಟ್ಟಿದ್ದಾರೆ. ಇನ್​​ಸ್ಟಾಗ್ರಾಮ್​ ಸ್ಟೋರಿ ಮೂಲಕ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಅವರ ಹೊಗಳಿಕೆಯಿಂದ ನಟ ವಿಕ್ರಾಂತ್​ ಮಾಸ್ಸಿ ಅವರಿಗೆ ಖುಷಿಯಾಗಿದೆ. ಅದೇ ಖುಷಿಯಲ್ಲಿ ಅವರು ನಿವೃತ್ತಿ ಪಡೆಯುವ ಬಗ್ಗೆ ಪ್ರಸ್ತಾಪಿಸಿದ್ದಾರೆ!

ರಿಯಲ್​ ಲೈಫ್​ ಘಟನೆಗಳನ್ನು ಆಧರಿಸಿ ‘12th ಫೇಲ್​’ ಸಿನಿಮಾ ತಯಾರಾಗಿದೆ. ವಿಧು ವಿನೋದ್​ ಚೋಪ್ರಾ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ವಿಕ್ರಾಂತ್​ ಮಾಸ್ಸಿ, ಮೇಧಾ ಶಂಕರ್​ ಅವರು ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ತುಂಬ ರಿಯಲಿಸ್ಟಿಕ್​ ಆಗಿ ಈ ಸಿನಿಮಾ ಮೂಡಿಬಂದಿದೆ. ಹಲವರಿಗೆ ‘12th ಫೇಲ್​’ ಸ್ಫೂರ್ತಿ ತುಂಬುತ್ತಿದೆ. ಕರೀನಾ ಕಪೂರ್​ ಖಾನ್​ ಅವರಂತೂ ಸಿಕ್ಕಾಪಟ್ಟೆ ಹೊಗಳಿದ್ದಾರೆ.

ಇದನ್ನೂ ಓದಿ: ‘ಇರ್ಫಾನ್​ ಖಾನ್​ ಅವರ ಸ್ಥಾನವನ್ನು ಈ ನಟ ತುಂಬುತ್ತಾರೆ’; ವಿಕ್ರಾಂತ್​ ಮಾಸ್ಸಿಗೆ ಕಂಗನಾ ಹೊಗಳಿಕೆ

‘12th ಫೇಲ್​ ಸಿನಿಮಾದ ನಿರ್ದೇಶಕ ವಿಧು ವಿನೋದ್​ ಚೋಪ್ರಾ, ನಟರಾದ ವಿಕ್ರಾಂತ್​ ಮಾಸ್ಸಿ, ಮೇಧಾ ಶಂಕರ್​, ಅಂಶುಮಾನ್​ ಪುಷ್ಕರ್​, ಅನಂತ್​ ವಿ. ಜೋಶಿ ಮತ್ತು ಇಡೀ ಪಾತ್ರವರ್ಗದವರು ಲೆಜೆಂಡ್​ಗಳು’ ಎಂದು ಕರೀನಾ ಕಪೂರ್​ ಖಾನ್​ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಮಾತು ಕೇಳಿ ವಿಕ್ರಾಂತ್​ ಮಾಸ್ಸಿ ಅವರಿಗೆ ಖುಷಿ ಆಗಿದೆ. ‘ನಾನು ಈಗ ನಿವೃತ್ತಿ ಪಡೆಯಬಹುದು. ಧನ್ಯವಾದಗಳು ಮೇಡಂ’ ಎಂದು ವಿಕ್ರಾಂತ್​ ಮಾಸ್ಸಿ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ‘12th ಫೇಲ್​’ ಚಿತ್ರದಿಂದ ಹೆಚ್ಚಿತು ವಿಕ್ರಾಂತ್​ ಮಾಸ್ಸಿ ಜನಪ್ರಿಯತೆ

ಒಂದಷ್ಟು ದಿನಗಳ ಹಿಂದೆ ಕರೀನಾ ಕಪೂರ್​ ಖಾನ್​ ಮತ್ತು ವಿಕ್ರಾಂತ್​ ಮಾಸ್ಸಿ ಅವರು ಜೊತೆಯಾಗಿ ಒಂದು ಸಂದರ್ಶನದಲ್ಲಿ ಭಾಗಿ ಆಗಿದ್ದರು. ಆಗ ಕರೀನಾ ಕಪೂರ್​ ಬಗ್ಗೆ ತಮಗೆ ಇರುವ ಅಭಿಮಾನ ಎಂಥದ್ದು ಎಂಬುದನ್ನು ವಿಕ್ರಾಂತ್​ ಮಾಸ್ಸಿ ವಿವರಿಸಿದ್ದರು. ಈಗ ತಮ್ಮ ಇಷ್ಟದ ನಟಿಯಿಂದಲೇ ಮೆಚ್ಚುಗೆ ಸಿಕ್ಕಿರುವುದಕ್ಕೆ ಅವರಿಗೆ ತುಂಬ ಖುಷಿ ಆಗಿದೆ. ‘12th ಫೇಲ್​’ ಸೂಪರ್​ ಹಿಟ್​ ಆದ ಬಳಿಕ ಅವರ ಬೇಡಿಕೆ ಹೆಚ್ಚಾಗಿದೆ. ಹೊಸ ಹೊಸ ಅವಕಾಶಗಳು ಅವರಿಗೆ ಸಿಗುತ್ತಿವೆ. ಅವರ ಮುಂಬರುವ ಸಿನಿಮಾಗಳ ಮೇಲೆ ಭಾರಿ ನಿರೀಕ್ಷೆ ಮೂಡುವಂತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ