AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತಿ ಪಡೆಯುವ ಮಾತಾಡಿದ ‘12th ಫೇಲ್​’ ಚಿತ್ರದ ನಟ; ಇದಕ್ಕೆ ಕಾರಣ ಕರೀನಾ ಕಪೂರ್​

‘12th ಫೇಲ್​’ ಸಿನಿಮಾದ ನಟ ವಿಕ್ರಾಂತ್​ ಮಾಸ್ಸಿ ಅವರಿಗೆ ಬೇಡಿಕೆ ಹೆಚ್ಚಿದೆ. ಅನೇಕ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಹಲವು ಸೆಲೆಬ್ರಿಟಿಗಳು ವಿಕ್ರಾಂತ್​ ಮಾಸ್ಸಿ ಅಭಿನಯಕ್ಕೆ ಭೇಷ್​ ಎನ್ನುತ್ತಿದ್ದಾರೆ. ಇಂಥ ಸಮಯದಲ್ಲಿ ಅವರು ನಿವೃತ್ತಿಯ ಬಗ್ಗೆ ಮಾತನಾಡಿದ್ದು ಯಾಕೆ? ಅದಕ್ಕೆ ಕಾರಣ ಆಗಿರುವುದು ನಟಿ ಕರೀನಾ ಕಪೂರ್​ ಖಾನ್​. ಆ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ..

ನಿವೃತ್ತಿ ಪಡೆಯುವ ಮಾತಾಡಿದ ‘12th ಫೇಲ್​’ ಚಿತ್ರದ ನಟ; ಇದಕ್ಕೆ ಕಾರಣ ಕರೀನಾ ಕಪೂರ್​
ವಿಕ್ರಾಂತ್​ ಮಾಸ್ಸಿ, ಕರೀನಾ ಕಪೂರ್​ ಖಾನ್​
ಮದನ್​ ಕುಮಾರ್​
|

Updated on: Feb 02, 2024 | 6:43 PM

Share

ನಟ ವಿಕ್ರಾಂತ್​ ಮಾಸ್ಸಿ (Vikrant Massey) ಅವರು ‘12th ಫೇಲ್​’ ಸಿನಿಮಾದ ಯಶಸ್ಸಿನಿಂದ ಸಖತ್​ ಫೇಮಸ್​ ಆಗಿದ್ದಾರೆ. ಚಿತ್ರಮಂದಿರದಲ್ಲಿ ಉತ್ತಮ ಕಲೆಕ್ಷನ್​ ಮಾಡಿ, ನಂತರ ಒಟಿಟಿಯಲ್ಲೂ ಅಬ್ಬರಿಸಿದ ಈ ಚಿತ್ರದ ಬಗ್ಗೆ ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಹೃತಿಕ್​ ರೋಷನ್​, ಜಾನ್ವಿ ಕಪೂರ್​, ಕಂಗನಾ ರಣಾವತ್​ ಮುಂತಾದವರು ‘12th ಫೇಲ್​’ (12th Fail Movie) ಸಿನಿಮಾವನ್ನು ಮನಸಾರೆ ಹೊಗಳಿದ್ದಾರೆ. ಈಗ ನಟಿ ಕರೀನಾ ಕಪೂರ್​ (Kareena Kapoor Khan) ಕೂಡ ಈ ಸಿನಿಮಾವನ್ನು ನೋಡಿ ಇಷ್ಟಪಟ್ಟಿದ್ದಾರೆ. ಇನ್​​ಸ್ಟಾಗ್ರಾಮ್​ ಸ್ಟೋರಿ ಮೂಲಕ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಅವರ ಹೊಗಳಿಕೆಯಿಂದ ನಟ ವಿಕ್ರಾಂತ್​ ಮಾಸ್ಸಿ ಅವರಿಗೆ ಖುಷಿಯಾಗಿದೆ. ಅದೇ ಖುಷಿಯಲ್ಲಿ ಅವರು ನಿವೃತ್ತಿ ಪಡೆಯುವ ಬಗ್ಗೆ ಪ್ರಸ್ತಾಪಿಸಿದ್ದಾರೆ!

ರಿಯಲ್​ ಲೈಫ್​ ಘಟನೆಗಳನ್ನು ಆಧರಿಸಿ ‘12th ಫೇಲ್​’ ಸಿನಿಮಾ ತಯಾರಾಗಿದೆ. ವಿಧು ವಿನೋದ್​ ಚೋಪ್ರಾ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ವಿಕ್ರಾಂತ್​ ಮಾಸ್ಸಿ, ಮೇಧಾ ಶಂಕರ್​ ಅವರು ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ತುಂಬ ರಿಯಲಿಸ್ಟಿಕ್​ ಆಗಿ ಈ ಸಿನಿಮಾ ಮೂಡಿಬಂದಿದೆ. ಹಲವರಿಗೆ ‘12th ಫೇಲ್​’ ಸ್ಫೂರ್ತಿ ತುಂಬುತ್ತಿದೆ. ಕರೀನಾ ಕಪೂರ್​ ಖಾನ್​ ಅವರಂತೂ ಸಿಕ್ಕಾಪಟ್ಟೆ ಹೊಗಳಿದ್ದಾರೆ.

ಇದನ್ನೂ ಓದಿ: ‘ಇರ್ಫಾನ್​ ಖಾನ್​ ಅವರ ಸ್ಥಾನವನ್ನು ಈ ನಟ ತುಂಬುತ್ತಾರೆ’; ವಿಕ್ರಾಂತ್​ ಮಾಸ್ಸಿಗೆ ಕಂಗನಾ ಹೊಗಳಿಕೆ

‘12th ಫೇಲ್​ ಸಿನಿಮಾದ ನಿರ್ದೇಶಕ ವಿಧು ವಿನೋದ್​ ಚೋಪ್ರಾ, ನಟರಾದ ವಿಕ್ರಾಂತ್​ ಮಾಸ್ಸಿ, ಮೇಧಾ ಶಂಕರ್​, ಅಂಶುಮಾನ್​ ಪುಷ್ಕರ್​, ಅನಂತ್​ ವಿ. ಜೋಶಿ ಮತ್ತು ಇಡೀ ಪಾತ್ರವರ್ಗದವರು ಲೆಜೆಂಡ್​ಗಳು’ ಎಂದು ಕರೀನಾ ಕಪೂರ್​ ಖಾನ್​ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಮಾತು ಕೇಳಿ ವಿಕ್ರಾಂತ್​ ಮಾಸ್ಸಿ ಅವರಿಗೆ ಖುಷಿ ಆಗಿದೆ. ‘ನಾನು ಈಗ ನಿವೃತ್ತಿ ಪಡೆಯಬಹುದು. ಧನ್ಯವಾದಗಳು ಮೇಡಂ’ ಎಂದು ವಿಕ್ರಾಂತ್​ ಮಾಸ್ಸಿ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ‘12th ಫೇಲ್​’ ಚಿತ್ರದಿಂದ ಹೆಚ್ಚಿತು ವಿಕ್ರಾಂತ್​ ಮಾಸ್ಸಿ ಜನಪ್ರಿಯತೆ

ಒಂದಷ್ಟು ದಿನಗಳ ಹಿಂದೆ ಕರೀನಾ ಕಪೂರ್​ ಖಾನ್​ ಮತ್ತು ವಿಕ್ರಾಂತ್​ ಮಾಸ್ಸಿ ಅವರು ಜೊತೆಯಾಗಿ ಒಂದು ಸಂದರ್ಶನದಲ್ಲಿ ಭಾಗಿ ಆಗಿದ್ದರು. ಆಗ ಕರೀನಾ ಕಪೂರ್​ ಬಗ್ಗೆ ತಮಗೆ ಇರುವ ಅಭಿಮಾನ ಎಂಥದ್ದು ಎಂಬುದನ್ನು ವಿಕ್ರಾಂತ್​ ಮಾಸ್ಸಿ ವಿವರಿಸಿದ್ದರು. ಈಗ ತಮ್ಮ ಇಷ್ಟದ ನಟಿಯಿಂದಲೇ ಮೆಚ್ಚುಗೆ ಸಿಕ್ಕಿರುವುದಕ್ಕೆ ಅವರಿಗೆ ತುಂಬ ಖುಷಿ ಆಗಿದೆ. ‘12th ಫೇಲ್​’ ಸೂಪರ್​ ಹಿಟ್​ ಆದ ಬಳಿಕ ಅವರ ಬೇಡಿಕೆ ಹೆಚ್ಚಾಗಿದೆ. ಹೊಸ ಹೊಸ ಅವಕಾಶಗಳು ಅವರಿಗೆ ಸಿಗುತ್ತಿವೆ. ಅವರ ಮುಂಬರುವ ಸಿನಿಮಾಗಳ ಮೇಲೆ ಭಾರಿ ನಿರೀಕ್ಷೆ ಮೂಡುವಂತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ