AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘2 ಸ್ಟೇಟ್ಸ್​’ ನಟ ಶಿವಕುಮಾರ್​ ಸುಬ್ರಮಣಿಯಂ ಇನ್ನಿಲ್ಲ; ಮಗ ಸತ್ತು 2 ತಿಂಗಳು ಕಳೆಯೋದರಲ್ಲಿ ತಂದೆ ನಿಧನ

Shiv Kumar Subramaniam Death: ನಟ ಶಿವಕುಮಾರ್​ ಶಿವಸುಬ್ರಮಣಿಯಂ ಅವರು ಇಂದು (ಏ.11) ನಿಧನರಾಗಿದ್ದು, ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಮುಂಬೈನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

‘2 ಸ್ಟೇಟ್ಸ್​’ ನಟ ಶಿವಕುಮಾರ್​ ಸುಬ್ರಮಣಿಯಂ ಇನ್ನಿಲ್ಲ; ಮಗ ಸತ್ತು 2 ತಿಂಗಳು ಕಳೆಯೋದರಲ್ಲಿ ತಂದೆ ನಿಧನ
ಶಿವಕುಮಾರ್ ಸುಬ್ರಮಣಿಯಂ
TV9 Web
| Updated By: ಮದನ್​ ಕುಮಾರ್​|

Updated on:Apr 11, 2022 | 12:05 PM

Share

ಬಾಲಿವುಡ್​ನ ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್​ ಆಗಿದ್ದ ನಟ ಶಿವಕುಮಾರ್​ ಸುಬ್ರಮಣಿಯಂ (Shiv Kumar Subramaniam) ಅವರು ನಿಧನರಾಗಿದ್ದಾರೆ. ಸೋಮವಾರ (ಏ.11) ಮುಂಜಾನೆ ಅವರ ಮರಣದ ಸುದ್ದಿ ಕೇಳಿ ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ವಿಪರ್ಯಾಸ ಎಂದರೆ, ಕೇವಲ ಎರಡು ತಿಂಗಳ ಹಿಂದೆ ಶಿವಕುಮಾರ್​ ಶಿವಸುಬ್ರಮಣಿಯಂ ಅವರು ಮಗನನ್ನು ಕಳೆದುಕೊಂಡಿದ್ದರು. ಕ್ಯಾನ್ಸರ್​ನಿಂದ (Cancer) ಅವರ ಪುತ್ರನ ಸಾವು ಸಂಭವಿಸಿತ್ತು. ಆ ನೋವು ಮಾಸುವ ಮುನ್ನವೇ ಶಿವಕುಮಾರ್​ ಶಿವಸುಬ್ರಮಣಿಯಂ ಕೊನೆಯುಸಿರು ಎಳೆದಿರುವುದು (Shiv Kumar Subramaniam Death) ಇಡೀ ಕುಟುಂಬಕ್ಕೆ ಆಘಾತ ಉಂಟು ಮಾಡಿದೆ. ‘2 ಸ್ಟೇಟ್ಸ್​’, ‘ಮೀನಾಕ್ಷಿ ಸುಂದರೇಶ್ವರ್​’, ‘ನೇಲ್​ ಪಾಲಿಶ್​’, ‘ಹಿಚ್ಕಿ’ ಮುಂತಾದ ಬಾಲಿವುಡ್​ ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಕಥೆ ಮತ್ತು ಚಿತ್ರಕಥೆ ಬರಹಗಾರರಾಗಿಯೂ ಅವರು ಗುರುತಿಸಿಕೊಂಡಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು, ಸ್ನೇಹಿತರು ಮತ್ತು ಸೆಲೆಬ್ರಿಟಿಗಳು ಪ್ರಾರ್ಥಿಸುತ್ತಿದ್ದಾರೆ. ಮುಂಬೈನಲ್ಲಿ ಶಿವಕುಮಾರ್​ ಸುಬ್ರಮಣಿಯಂ ಅವರ ಅಂತ್ಯಕ್ರಿಯೆ ಸೋಮವಾರ ನಡೆಯಲಿದೆ.

1989ರಲ್ಲಿ ವಿಧು ವಿನೋದ್​ ಚೋಪ್ರಾ ಅವರ ‘ಪರಿಂದಾ’ ಸಿನಿಮಾಗೆ ಚಿತ್ರಕಥೆ ಬರೆಯುವ ಮೂಲಕ ಶಿವಕುಮಾರ್​ ಸುಬ್ರಮಣಿಯಂ ಅವರು ಚಿತ್ರರಂಗದಲ್ಲಿ ತಮ್ಮ ಜರ್ನಿ ಆರಂಭಿಸಿದ್ದರು. ‘1942: ಎ ಲವ್​ ಸ್ಟೋರಿ’, ‘ಇಸ್​ ರಾತ್​ ಕಿ ಸುಬಾಹ್​ ನಹೀ’, ‘ಅರ್ಜುನ್​ ಪಂಡಿತ್’, ‘ಚಮೇಲಿ’, ‘ಹಜಾರೋ ಕ್ವಾಯಿಷೆ ಐಸಿ’ ಮುಂತಾದ ಸಿನಿಮಾಗಳಿಗೆ ಅವರು ಬರಹಗಾರನಾಗಿ ಕೆಲಸ ಮಾಡಿದ್ದರು.

‘ಪರಿಂದಾ’ ಚಿತ್ರದ ಚಿತ್ರಕಥೆ ಹಾಗೂ ‘ಹಜಾರೋ ಕ್ವಾಯಿಷೆ ಐಸಿ’ ಸಿನಿಮಾದ ಕಥೆಗಾಗಿ ಅವರು ಪ್ರಶಸ್ತಿ ಪಡೆದಿದ್ದರು. ಕಿರುತೆರೆಯಲ್ಲಿಯೂ ಶಿವಕುಮಾರ್​ ಸುಬ್ರಮಣಿಯಂ ಫೇಮಸ್​ ಆಗಿದ್ದರು. ‘ಮುಕ್ತಿ ಬಂಧನ್​’ ಧಾರಾವಾಹಿಯಲ್ಲಿ ಅವರು ಮುಖ್ಯ ಪಾತ್ರ ಮಾಡುವ ಮೂಲಕ ಮನೆಮಾತಾಗಿದ್ದರು. ಹೀಗೆ ಸಿನಿಮಾ ಮತ್ತು ಕಿರುತೆರೆ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅವರ ಅಗಲಿಕೆಗೆ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಗುತ್ತಿದೆ.

ಪತ್ನಿ ದಿವ್ಯಾ ಅವರನ್ನು ಶಿವಕುಮಾರ್​ ಸುಬ್ರಮಣಿಯಂ ಅಗಲಿದ್ದಾರೆ. ಸೆಲೆಬ್ರಿಟಿಗಳಾದ ಹನ್ಸಲ್​ ಮೆಹ್ತಾ, ಅಶೋಕ್​ ಪಂಡಿತ್​, ಆಯೆಶಾ ಮಿಶ್ರಾ ಮುಂತಾದವರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ:

Mannava Balayya: 300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ ಮನ್ನವ ಬಾಲಯ್ಯ ನಿಧನ; ಕಂಬನಿ ಮಿಡಿದ ಚಿತ್ರರಂಗ

Mannava Balayya: 300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ ಮನ್ನವ ಬಾಲಯ್ಯ ನಿಧನ; ಕಂಬನಿ ಮಿಡಿದ ಚಿತ್ರರಂಗ

Published On - 11:44 am, Mon, 11 April 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ