AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘2 ಸ್ಟೇಟ್ಸ್​’ ನಟ ಶಿವಕುಮಾರ್​ ಸುಬ್ರಮಣಿಯಂ ಇನ್ನಿಲ್ಲ; ಮಗ ಸತ್ತು 2 ತಿಂಗಳು ಕಳೆಯೋದರಲ್ಲಿ ತಂದೆ ನಿಧನ

Shiv Kumar Subramaniam Death: ನಟ ಶಿವಕುಮಾರ್​ ಶಿವಸುಬ್ರಮಣಿಯಂ ಅವರು ಇಂದು (ಏ.11) ನಿಧನರಾಗಿದ್ದು, ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಮುಂಬೈನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

‘2 ಸ್ಟೇಟ್ಸ್​’ ನಟ ಶಿವಕುಮಾರ್​ ಸುಬ್ರಮಣಿಯಂ ಇನ್ನಿಲ್ಲ; ಮಗ ಸತ್ತು 2 ತಿಂಗಳು ಕಳೆಯೋದರಲ್ಲಿ ತಂದೆ ನಿಧನ
ಶಿವಕುಮಾರ್ ಸುಬ್ರಮಣಿಯಂ
TV9 Web
| Edited By: |

Updated on:Apr 11, 2022 | 12:05 PM

Share

ಬಾಲಿವುಡ್​ನ ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್​ ಆಗಿದ್ದ ನಟ ಶಿವಕುಮಾರ್​ ಸುಬ್ರಮಣಿಯಂ (Shiv Kumar Subramaniam) ಅವರು ನಿಧನರಾಗಿದ್ದಾರೆ. ಸೋಮವಾರ (ಏ.11) ಮುಂಜಾನೆ ಅವರ ಮರಣದ ಸುದ್ದಿ ಕೇಳಿ ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ವಿಪರ್ಯಾಸ ಎಂದರೆ, ಕೇವಲ ಎರಡು ತಿಂಗಳ ಹಿಂದೆ ಶಿವಕುಮಾರ್​ ಶಿವಸುಬ್ರಮಣಿಯಂ ಅವರು ಮಗನನ್ನು ಕಳೆದುಕೊಂಡಿದ್ದರು. ಕ್ಯಾನ್ಸರ್​ನಿಂದ (Cancer) ಅವರ ಪುತ್ರನ ಸಾವು ಸಂಭವಿಸಿತ್ತು. ಆ ನೋವು ಮಾಸುವ ಮುನ್ನವೇ ಶಿವಕುಮಾರ್​ ಶಿವಸುಬ್ರಮಣಿಯಂ ಕೊನೆಯುಸಿರು ಎಳೆದಿರುವುದು (Shiv Kumar Subramaniam Death) ಇಡೀ ಕುಟುಂಬಕ್ಕೆ ಆಘಾತ ಉಂಟು ಮಾಡಿದೆ. ‘2 ಸ್ಟೇಟ್ಸ್​’, ‘ಮೀನಾಕ್ಷಿ ಸುಂದರೇಶ್ವರ್​’, ‘ನೇಲ್​ ಪಾಲಿಶ್​’, ‘ಹಿಚ್ಕಿ’ ಮುಂತಾದ ಬಾಲಿವುಡ್​ ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಕಥೆ ಮತ್ತು ಚಿತ್ರಕಥೆ ಬರಹಗಾರರಾಗಿಯೂ ಅವರು ಗುರುತಿಸಿಕೊಂಡಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು, ಸ್ನೇಹಿತರು ಮತ್ತು ಸೆಲೆಬ್ರಿಟಿಗಳು ಪ್ರಾರ್ಥಿಸುತ್ತಿದ್ದಾರೆ. ಮುಂಬೈನಲ್ಲಿ ಶಿವಕುಮಾರ್​ ಸುಬ್ರಮಣಿಯಂ ಅವರ ಅಂತ್ಯಕ್ರಿಯೆ ಸೋಮವಾರ ನಡೆಯಲಿದೆ.

1989ರಲ್ಲಿ ವಿಧು ವಿನೋದ್​ ಚೋಪ್ರಾ ಅವರ ‘ಪರಿಂದಾ’ ಸಿನಿಮಾಗೆ ಚಿತ್ರಕಥೆ ಬರೆಯುವ ಮೂಲಕ ಶಿವಕುಮಾರ್​ ಸುಬ್ರಮಣಿಯಂ ಅವರು ಚಿತ್ರರಂಗದಲ್ಲಿ ತಮ್ಮ ಜರ್ನಿ ಆರಂಭಿಸಿದ್ದರು. ‘1942: ಎ ಲವ್​ ಸ್ಟೋರಿ’, ‘ಇಸ್​ ರಾತ್​ ಕಿ ಸುಬಾಹ್​ ನಹೀ’, ‘ಅರ್ಜುನ್​ ಪಂಡಿತ್’, ‘ಚಮೇಲಿ’, ‘ಹಜಾರೋ ಕ್ವಾಯಿಷೆ ಐಸಿ’ ಮುಂತಾದ ಸಿನಿಮಾಗಳಿಗೆ ಅವರು ಬರಹಗಾರನಾಗಿ ಕೆಲಸ ಮಾಡಿದ್ದರು.

‘ಪರಿಂದಾ’ ಚಿತ್ರದ ಚಿತ್ರಕಥೆ ಹಾಗೂ ‘ಹಜಾರೋ ಕ್ವಾಯಿಷೆ ಐಸಿ’ ಸಿನಿಮಾದ ಕಥೆಗಾಗಿ ಅವರು ಪ್ರಶಸ್ತಿ ಪಡೆದಿದ್ದರು. ಕಿರುತೆರೆಯಲ್ಲಿಯೂ ಶಿವಕುಮಾರ್​ ಸುಬ್ರಮಣಿಯಂ ಫೇಮಸ್​ ಆಗಿದ್ದರು. ‘ಮುಕ್ತಿ ಬಂಧನ್​’ ಧಾರಾವಾಹಿಯಲ್ಲಿ ಅವರು ಮುಖ್ಯ ಪಾತ್ರ ಮಾಡುವ ಮೂಲಕ ಮನೆಮಾತಾಗಿದ್ದರು. ಹೀಗೆ ಸಿನಿಮಾ ಮತ್ತು ಕಿರುತೆರೆ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅವರ ಅಗಲಿಕೆಗೆ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಗುತ್ತಿದೆ.

ಪತ್ನಿ ದಿವ್ಯಾ ಅವರನ್ನು ಶಿವಕುಮಾರ್​ ಸುಬ್ರಮಣಿಯಂ ಅಗಲಿದ್ದಾರೆ. ಸೆಲೆಬ್ರಿಟಿಗಳಾದ ಹನ್ಸಲ್​ ಮೆಹ್ತಾ, ಅಶೋಕ್​ ಪಂಡಿತ್​, ಆಯೆಶಾ ಮಿಶ್ರಾ ಮುಂತಾದವರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ:

Mannava Balayya: 300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ ಮನ್ನವ ಬಾಲಯ್ಯ ನಿಧನ; ಕಂಬನಿ ಮಿಡಿದ ಚಿತ್ರರಂಗ

Mannava Balayya: 300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ ಮನ್ನವ ಬಾಲಯ್ಯ ನಿಧನ; ಕಂಬನಿ ಮಿಡಿದ ಚಿತ್ರರಂಗ

Published On - 11:44 am, Mon, 11 April 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ