‘2 ಸ್ಟೇಟ್ಸ್​’ ನಟ ಶಿವಕುಮಾರ್​ ಸುಬ್ರಮಣಿಯಂ ಇನ್ನಿಲ್ಲ; ಮಗ ಸತ್ತು 2 ತಿಂಗಳು ಕಳೆಯೋದರಲ್ಲಿ ತಂದೆ ನಿಧನ

Shiv Kumar Subramaniam Death: ನಟ ಶಿವಕುಮಾರ್​ ಶಿವಸುಬ್ರಮಣಿಯಂ ಅವರು ಇಂದು (ಏ.11) ನಿಧನರಾಗಿದ್ದು, ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಮುಂಬೈನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

‘2 ಸ್ಟೇಟ್ಸ್​’ ನಟ ಶಿವಕುಮಾರ್​ ಸುಬ್ರಮಣಿಯಂ ಇನ್ನಿಲ್ಲ; ಮಗ ಸತ್ತು 2 ತಿಂಗಳು ಕಳೆಯೋದರಲ್ಲಿ ತಂದೆ ನಿಧನ
ಶಿವಕುಮಾರ್ ಸುಬ್ರಮಣಿಯಂ
Follow us
| Updated By: ಮದನ್​ ಕುಮಾರ್​

Updated on:Apr 11, 2022 | 12:05 PM

ಬಾಲಿವುಡ್​ನ ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್​ ಆಗಿದ್ದ ನಟ ಶಿವಕುಮಾರ್​ ಸುಬ್ರಮಣಿಯಂ (Shiv Kumar Subramaniam) ಅವರು ನಿಧನರಾಗಿದ್ದಾರೆ. ಸೋಮವಾರ (ಏ.11) ಮುಂಜಾನೆ ಅವರ ಮರಣದ ಸುದ್ದಿ ಕೇಳಿ ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ವಿಪರ್ಯಾಸ ಎಂದರೆ, ಕೇವಲ ಎರಡು ತಿಂಗಳ ಹಿಂದೆ ಶಿವಕುಮಾರ್​ ಶಿವಸುಬ್ರಮಣಿಯಂ ಅವರು ಮಗನನ್ನು ಕಳೆದುಕೊಂಡಿದ್ದರು. ಕ್ಯಾನ್ಸರ್​ನಿಂದ (Cancer) ಅವರ ಪುತ್ರನ ಸಾವು ಸಂಭವಿಸಿತ್ತು. ಆ ನೋವು ಮಾಸುವ ಮುನ್ನವೇ ಶಿವಕುಮಾರ್​ ಶಿವಸುಬ್ರಮಣಿಯಂ ಕೊನೆಯುಸಿರು ಎಳೆದಿರುವುದು (Shiv Kumar Subramaniam Death) ಇಡೀ ಕುಟುಂಬಕ್ಕೆ ಆಘಾತ ಉಂಟು ಮಾಡಿದೆ. ‘2 ಸ್ಟೇಟ್ಸ್​’, ‘ಮೀನಾಕ್ಷಿ ಸುಂದರೇಶ್ವರ್​’, ‘ನೇಲ್​ ಪಾಲಿಶ್​’, ‘ಹಿಚ್ಕಿ’ ಮುಂತಾದ ಬಾಲಿವುಡ್​ ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಕಥೆ ಮತ್ತು ಚಿತ್ರಕಥೆ ಬರಹಗಾರರಾಗಿಯೂ ಅವರು ಗುರುತಿಸಿಕೊಂಡಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು, ಸ್ನೇಹಿತರು ಮತ್ತು ಸೆಲೆಬ್ರಿಟಿಗಳು ಪ್ರಾರ್ಥಿಸುತ್ತಿದ್ದಾರೆ. ಮುಂಬೈನಲ್ಲಿ ಶಿವಕುಮಾರ್​ ಸುಬ್ರಮಣಿಯಂ ಅವರ ಅಂತ್ಯಕ್ರಿಯೆ ಸೋಮವಾರ ನಡೆಯಲಿದೆ.

1989ರಲ್ಲಿ ವಿಧು ವಿನೋದ್​ ಚೋಪ್ರಾ ಅವರ ‘ಪರಿಂದಾ’ ಸಿನಿಮಾಗೆ ಚಿತ್ರಕಥೆ ಬರೆಯುವ ಮೂಲಕ ಶಿವಕುಮಾರ್​ ಸುಬ್ರಮಣಿಯಂ ಅವರು ಚಿತ್ರರಂಗದಲ್ಲಿ ತಮ್ಮ ಜರ್ನಿ ಆರಂಭಿಸಿದ್ದರು. ‘1942: ಎ ಲವ್​ ಸ್ಟೋರಿ’, ‘ಇಸ್​ ರಾತ್​ ಕಿ ಸುಬಾಹ್​ ನಹೀ’, ‘ಅರ್ಜುನ್​ ಪಂಡಿತ್’, ‘ಚಮೇಲಿ’, ‘ಹಜಾರೋ ಕ್ವಾಯಿಷೆ ಐಸಿ’ ಮುಂತಾದ ಸಿನಿಮಾಗಳಿಗೆ ಅವರು ಬರಹಗಾರನಾಗಿ ಕೆಲಸ ಮಾಡಿದ್ದರು.

‘ಪರಿಂದಾ’ ಚಿತ್ರದ ಚಿತ್ರಕಥೆ ಹಾಗೂ ‘ಹಜಾರೋ ಕ್ವಾಯಿಷೆ ಐಸಿ’ ಸಿನಿಮಾದ ಕಥೆಗಾಗಿ ಅವರು ಪ್ರಶಸ್ತಿ ಪಡೆದಿದ್ದರು. ಕಿರುತೆರೆಯಲ್ಲಿಯೂ ಶಿವಕುಮಾರ್​ ಸುಬ್ರಮಣಿಯಂ ಫೇಮಸ್​ ಆಗಿದ್ದರು. ‘ಮುಕ್ತಿ ಬಂಧನ್​’ ಧಾರಾವಾಹಿಯಲ್ಲಿ ಅವರು ಮುಖ್ಯ ಪಾತ್ರ ಮಾಡುವ ಮೂಲಕ ಮನೆಮಾತಾಗಿದ್ದರು. ಹೀಗೆ ಸಿನಿಮಾ ಮತ್ತು ಕಿರುತೆರೆ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅವರ ಅಗಲಿಕೆಗೆ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಗುತ್ತಿದೆ.

ಪತ್ನಿ ದಿವ್ಯಾ ಅವರನ್ನು ಶಿವಕುಮಾರ್​ ಸುಬ್ರಮಣಿಯಂ ಅಗಲಿದ್ದಾರೆ. ಸೆಲೆಬ್ರಿಟಿಗಳಾದ ಹನ್ಸಲ್​ ಮೆಹ್ತಾ, ಅಶೋಕ್​ ಪಂಡಿತ್​, ಆಯೆಶಾ ಮಿಶ್ರಾ ಮುಂತಾದವರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ:

Mannava Balayya: 300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ ಮನ್ನವ ಬಾಲಯ್ಯ ನಿಧನ; ಕಂಬನಿ ಮಿಡಿದ ಚಿತ್ರರಂಗ

Mannava Balayya: 300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ ಮನ್ನವ ಬಾಲಯ್ಯ ನಿಧನ; ಕಂಬನಿ ಮಿಡಿದ ಚಿತ್ರರಂಗ

Published On - 11:44 am, Mon, 11 April 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ