AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಆಧಾರ್​ ಕಾರ್ಡ್​ ಇಟ್ಟುಕೊಂಡು ಸಲ್ಮಾನ್​ ಖಾನ್​ ಫಾರ್ಮ್​ಹೌಸ್​ಗೆ ನುಗ್ಗಲು ಯತ್ನಿಸಿದ ಇಬ್ಬರ ಬಂಧನ

ಇಬ್ಬರು ಯುವಕರ ವರ್ತನೆ ಕಂಡು ಸಲ್ಮಾನ್​ ಖಾನ್​ ಅವರ ಭದ್ರತಾ ಸಿಬ್ಬಂದಿಗೆ ಅನುಮಾನ ಮೂಡಿದೆ. ಹಾಗಾಗಿ ಅವರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಅಕ್ರಮವಾಗಿ ಫಾರ್ಮ್​ಹೌಸ್​ ಪ್ರವೇಶಿಸಲು ಯತ್ನಿಸಿದ ಇಬ್ಬರನ್ನು ಪನ್ವೇಲ್​ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ಆಗಿದೆ.

ನಕಲಿ ಆಧಾರ್​ ಕಾರ್ಡ್​ ಇಟ್ಟುಕೊಂಡು ಸಲ್ಮಾನ್​ ಖಾನ್​ ಫಾರ್ಮ್​ಹೌಸ್​ಗೆ ನುಗ್ಗಲು ಯತ್ನಿಸಿದ ಇಬ್ಬರ ಬಂಧನ
ಸಲ್ಮಾನ್​ ಖಾನ್
ಮದನ್​ ಕುಮಾರ್​
|

Updated on: Jan 08, 2024 | 2:55 PM

Share

ನಟ ಸಲ್ಮಾನ್​ ಖಾನ್​ (Salman Khan) ಅವರಿಗೆ ಜೀವ ಬೆದರಿಕೆ ಇರುವುದು ಗೊತ್ತೇ ಇದೆ. ಈಗಾಗಲೇ ಅವರ ಮೇಲೆ ಹಲವು ಬಾರಿ ಹತ್ಯೆ ಪ್ರಯತ್ನ ನಡೆದ ಬಗ್ಗೆ ವರದಿ ಆಗಿದೆ. ಹಾಗಾಗಿ ಅವರು ಭದ್ರತೆಯ ಬಗ್ಗೆ ಹೆಚ್ಚು ಗಮನ ಹರಿಸಿದ್ದಾರೆ. ಇಬ್ಬರು ಯುವಕರು ಅನುಮಾನಾಸ್ಪದವಾಗಿ ಸಲ್ಮಾನ್​ ಖಾನ್​ ಅವರ ಫಾರ್ಮ್​ಹೌಸ್​ಗೆ ನುಗ್ಗಲು ಪ್ರಯತ್ನಿಸಿರುವ ಘಟನೆ ಈಗ ಬೆಳಕಿಗೆ ಬಂದಿದೆ. ಪನ್ವೇಲ್​ನಲ್ಲಿ ಸಲ್ಮಾನ್​ ಖಾನ್​ ಅವರು ಫಾರ್ಮ್​ಹೌಸ್​ (Salman Khan Farm House) ಹೊಂದಿದ್ದಾರೆ. ಅದರ ಕಾಂಪೌಂಡ್​ ಒಳಗೆ ನುಸುಳಲು ಪ್ರಯತ್ನಿಸುತ್ತಿದ್ದ ಇಬ್ಬರು ಸಿಕ್ಕಿ ಬಿದ್ದಿದ್ದಾರೆ. ಬಳಿಕ ಭದ್ರತಾ ಸಿಬ್ಬಂದಿಯು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಅಭಿಮಾನಿಗಳು ಎಂದು ಹೇಳಿಕೊಂಡು ಬಂದ ಈ ಇಬ್ಬರನ್ನು ಅಜೇಶ್​ ಕುಮಾರ್​ ಓಂಪ್ರಕಾಶ್​ ಗಿಲ್​ ಹಾಗೂ ಗುರುಸೇವಕ್​ ಸಿಂಗ್​ ಎಂದು ಗುರುತಿಸಿಲಾಗಿದೆ. ಸಿಕ್ಕಿ ಬಿದ್ದಾಗ ಅವರಿಬ್ಬರ ಆಧಾರ್​ ಕಾರ್ಡ್​ ಪರಿಶೀಲನೆ ಮಾಡಲಾಯಿತು. ಅವು ನಕಲಿ ಆಧಾರ್​ ಕಾರ್ಡ್​ ಎಂಬುದು ತಿಳಿದುಬಂದಿದೆ. ಮಹೇಶ್​ ಕುಮಾರ್​ ಮತ್ತು ವಿನೋದ್​ ಕುಮಾರ್​ ಎಂಬ ಹೆಸರಿನಲ್ಲಿ ಅವರು ನಕಲಿ ಆಧಾರ್​ ಕಾರ್ಡ್​ ಸಿದ್ಧಪಡಿಸಿಕೊಂಡು ಮೋಸ ಮಾಡಲು ಪ್ರಯತ್ನಿಸಿದ್ದಾರೆ.

ಇದನ್ನೂ ಓದಿ: ನಟ ಸಲ್ಮಾನ್ ಖಾನ್ ಅವರು ಇನ್ನೂ ಮದುವೆ ಆಗದಿರಲು ಕಾರಣವೇನು?

ಈ ಇಬ್ಬರ ವರ್ತನೆ ಕಂಡು ಸಲ್ಮಾನ್​ ಖಾನ್​ ಅವರ ಭದ್ರತಾ ಸಿಬ್ಬಂದಿಗೆ ಅನುಮಾನ ಮೂಡಿದೆ. ಹಾಗಾಗಿ ಅವರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಅಕ್ರಮವಾಗಿ ಫಾರ್ಮ್​ಹೌಸ್​ ಪ್ರವೇಶಿಸಲು ಯತ್ನಿಸಿದ ಇಬ್ಬರನ್ನು ಪನ್ವೇಲ್​ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ಆಗಿದೆ. ಸದ್ಯಕ್ಕೆ ತನಿಖೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಫಾರ್ಮ್​ಹೌಸ್​ ನುಸುಳಲು ಪ್ರಯತ್ನಿಸಿದ್ದರ ಹಿಂದಿನ ಉದ್ದೇಶ ಏನೆಂಬುದು ಸ್ಪಷ್ಟವಾಗಬೇಕಿದೆ.

ಸಲ್ಮಾನ್​ ಖಾನ್ ಅವರನ್ನು ಕೊಲ್ಲುವುದಾಗಿ ಈಗಾಗಲೇ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯ್​, ಗೋಲ್ಡಿ ಬ್ರಾರ್​ ಮುಂತಾದವರು ಬೆದರಿಕೆ ಹಾಕಿದ್ದಾರೆ. ಸಲ್ಮಾನ್​ ಖಾನ್​ ಅವರ ಆಪ್ತರ ಮೇಲೂ ಹಲ್ಲೆ ಪ್ರಯತ್ನಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಸಲ್ಮಾನ್​ ಖಾನ್​ ಅವರು ಭದ್ರತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಬುಲೆಟ್​ಪ್ರೂಫ್​ ಕಾರುಗಳನ್ನು ಅವರು ಖರೀದಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್