AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

60 ಕೋಟಿ ವಂಚನೆ ಪ್ರಕರಣ: ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾಗೆ ಲುಕ್​ಔಟ್ ನೊಟೀಸ್

Shilpa Shetty-Raj Kundra: ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಬಾಲಿವುಡ್​ನ ಜನಪ್ರಿಯ ದಂಪತಿ. ಉದ್ಯಮಿಗಳೂ ಸಹ ಹೌದು. ಆದರೆ ಆಗಾಗ್ಗೆ ಈ ದಂಪತಿಯ ಮೇಲೆ ವಂಚನೆ ಪ್ರಕರಣಗಳು ಕೇಳಿ ಬರುತ್ತಲೇ ಇರುತ್ತವೆ. ಇತ್ತೀಚೆಗಷ್ಟೆ ಉದ್ಯಮಿಯೊಬ್ಬರು ರಾಜ್ ಕುಂದ್ರಾ ಮತ್ತು ಶಿಲ್ಪಾ ಶೆಟ್ಟಿ ವಿರುದ್ಧ 60 ಕೋಟಿ ಹಣ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿಗಳ ವಿರುದ್ಧ ಲುಕ್​​ಔಟ್ ನೊಟೀಸ್ ಜಾರಿ ಆಗಿದೆ.

60 ಕೋಟಿ ವಂಚನೆ ಪ್ರಕರಣ: ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾಗೆ ಲುಕ್​ಔಟ್ ನೊಟೀಸ್
Raj Kundra Shilpa
ಮಂಜುನಾಥ ಸಿ.
|

Updated on: Sep 05, 2025 | 4:13 PM

Share

ನಟಿ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ದಂಪತಿಗೆ ಸಂಕಷ್ಟಗಳು ಕಡಿಮೆಯೇ ಆಗುತ್ತಿಲ್ಲ. ಕಾಲ ಕಾಲಕ್ಕೆ ಅವರ ಮೇಲೆ ಹಣಕಾಸು ಮತ್ತು ಬ್ಯುಸಿನೆಸ್​​ಗೆ ಸಂಬಂಧಿಸಿದಂತೆ ಆರೋಪಗಳು ಬರುತ್ತಲೇ ಇವೆ. ರಾಜ್ ಕುಂದ್ರಾ ಅಂತೂ ಜೈಲಿಗೆ ಸಹ ಹೋಗಿ ಬಂದಿದ್ದಾಗಿದೆ. ಇದೀಗ ಎಲ್ಲವೂ ಸರಿ ಹೋಯಿತು ಎಂದುಕೊಳ್ಳುತ್ತಿರುವಾಗಲೇ ಇತ್ತೀಚೆಗಷ್ಟೆ ಈ ದಂಪತಿಯ ಮೇಲೆ 60 ಕೋಟಿ ರೂಪಾಯಿ ಹಣಕಾಸು ವಂಚನೆ ಆರೋಪ ಕೇಳಿ ಬಂದಿತ್ತು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ವಿರುದ್ಧ ಲುಕೌಟ್ ನೊಟೀಸ್ ಜಾರಿ ಆಗಿದೆ.

ದೀಪಕ್ ಕೊಠಾರಿ ಹೆಸರಿನ ಉದ್ಯಮಿಯೊಬ್ಬರು ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ವಿರುದ್ಧ ದೂರು ದಾಖಲಿಸಿದ್ದಾರೆ. ಈ ದಂಪತಿ 2015 ಮತ್ತು 2023ರ ನಡುವೆ 60 ಕೋಟಿ ರೂಪಾಯಿ ಹಣವನ್ನು ತಮ್ಮಿಂದ ಉದ್ಯಮ ವಿಸ್ತರಣೆಗೆ ಸಾಲವಾಗಿ ಪಡೆದಿದ್ದಾರೆ. ಆದರೆ ಆ ಹಣವನ್ನು ಸಾಲ ಪಡೆದ ಉದ್ದೇಶಕ್ಕೆ ಬಳಸಿಕೊಳ್ಳದೆ ತಮ್ಮ ವೈಯಕ್ತಿಕ ಕಾರಣಗಳಿಗೆ ಬಳಸಿಕೊಂಡಿದ್ದಾರೆ ಎಂದು ದೀಪಕ್ ಆರೋಪ ಮಾಡಿದ್ದಾರೆ. ಅಲ್ಲದೆ ತಾವು ಕೊಟ್ಟ ಹಣವನ್ನು ಹೂಡಿಕೆ ಎಂದು ತೋರಿಸುವ ಮೂಲಕ ತೆರಿಗೆ ವಂಚನೆಯನ್ನೂ ಸಹ ಮಾಡಿದ್ದಾರೆ ಎಂದು ಅವರು ಆರೋಪ ಮಾಡಿದ್ದಾರೆ.

ಇದನ್ನೂ ಓದಿ:ಶಿಲ್ಪಾ ಶೆಟ್ಟಿ ಹೂಡಿಕೆ ಮಾಡಿರುವ ಉದ್ಯಮಗಳು ಯಾವುವು ಗೊತ್ತೆ?

ತಾವು ಸಾಲವಾಗಿ ಪಡೆದಿರುವ ಹಣಕ್ಕೆ ವಾರ್ಷಿಕ 12% ಬಡ್ಡಿ ಕೊಡುವುದಾಗಿ ದಂಪತಿಗಳು ಒಪ್ಪಂದ ಮಾಡಿಕೊಂಡಿದ್ದರಂತೆ ಅಲ್ಲದೆ 2016 ರಲ್ಲಿ ಶಿಲ್ಪಾ ಶೆಟ್ಟಿ ಸಾಲಕ್ಕೆ ಗ್ಯಾರೆಂಟಿಯನ್ನು ಸಹ ಒದಗಿಸಿದ್ದರಂತೆ. ಆದರೆ ಅದಾದ ಬಳಿಕ ಅವರೇ ಕಂಪೆನಿಯ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರನಡೆದಿದ್ದಾರೆ. ತಾವು ಕೊಟ್ಟ ಹಣವನ್ನು ಹೂಡಿಕೆಗಳಿಗಾಗಿ ಬಳಸಿಕೊಂಡಿದ್ದಲ್ಲದೆ, ಬಡ್ಡಿ ಪಾವತಿಸದೆ ಮೋಸ ಮಾಡಿದ್ದಾರೆ ಎಂದು ದೀಪಕ್ ಆರೋಪ ಮಾಡಿದ್ದಾರೆ.

ಪ್ರಕರಣದ ತನಿಖೆಯನ್ನು ಮುಂಬೈ ಪೊಲೀಸರ ಆರ್ಥಿಕ ಅಪರಾಧ ತಡೆ ವಿಭಾಗ ಮಾಡುತ್ತಿದ್ದು, ಇದೀಗ ನ್ಯಾಯಾಲಯವು ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಅವರಿಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲುಕೌಟ್ ನೊಟೀಸ್ ನೀಡಿದೆ. ನೊಟೀಸ್ ಜಾರಿ ಆಗಿರುವ ಕಾರಣದಿಂದಾಗಿ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಅವರುಗಳು ಹೊರದೇಶಗಳಿಗೆ ಸಂಚಾರ ಮಾಡದಂತಾಗಿದೆ. ಆದರೆ ಈ ಆರೋಪಗಳೆಲ್ಲ ಸುಳ್ಳು, ತಾವು ನ್ಯಾಯಾಲಯದ ಮೂಲಕವೇ ಇದಕ್ಕೆ ಉತ್ತರ ನೀಡುವುದಾಗಿ ರಾಜ್ ಕುಂದ್ರಾ ಹೇಳಿದ್ದಾರೆ.

ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ಅವರುಗಳು ಹಲವಾರು ಕಂಪೆನಿಗಳ ಮೇಲೆ ಹೂಡಿಕೆ ಮಾಡಿದ್ದಾರೆ. ಶಿಲ್ಪಾ ಶೆಟ್ಟಿ ಹಾಗೂ ಕುಂದ್ರಾ ಜೊತೆಯಾಗಿಯೂ ಸಹ ಹಲವು ಸಂಸ್ಥೆಗಳ ಮೇಲೆ ಹೂಡಿಕೆ ಮಾಡಿದ್ದಾರೆ. ಇತ್ತೀಚೆಗಷ್ಟೆ ಶಿಲ್ಪಾ ಶೆಟ್ಟಿ ತಮ್ಮ ಸಹ ಒಡೆತನದ ಬಾಸ್ಟಿಯನ್ ಹೋಟೆಲ್​​ನ ಬಾಂದ್ರಾ ಬ್ರ್ಯಾಂಚ್ ಅನ್ನು ಬಂದ್ ಮಾಡಿದರು. ಆಗಲೂ ಸಹ ಈ 60 ಕೋಟಿ ವಂಚನೆ ಪ್ರಕರಣ ಸುದ್ದಿಗೆ ಬಂದಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್