AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನಲ್ಲಿ 69ನೇ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ ಸಮಾರಂಭ; ರಂಗೇರಿತು ಮೊದಲ ದಿನ

69ನೇ ಫಿಲ್ಮ್​ ಫೇರ್​ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅಪಾರಶಕ್ತಿ ಖುರಾನ ಮತ್ತು ಕರೀಷ್ಮಾ ತನ್ನಾ ಅವರು ನಿರೂಪಣೆ ಮಾಡಿದ್ದಾರೆ. ಪ್ರಶಸ್ತಿ ಪ್ರದಾನದ ಜೊತೆ ಫ್ಯಾಷನ್​ ಶೋ, ಮನರಂಜನಾ ಕಾರ್ಯಕ್ರ ಕೂಡ ಜರುಗಿವೆ. ಫಿಲ್ಮ್​ ಫೇರ್​ ಜೊತೆ ಡಿಸೈನರ್​ ಶಾಂತನು-ನಿಖಿಲ್​ ಮೆಹ್ತಾ ಅವರ ಸಹಯೋಗದೊಂದಿಗೆ ಈ ಫ್ಯಾಷನ್​ ಶೋ ನಡೆದಿದೆ.

ಗುಜರಾತ್​ನಲ್ಲಿ 69ನೇ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ ಸಮಾರಂಭ; ರಂಗೇರಿತು ಮೊದಲ ದಿನ
69ನೇ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ ಸಮಾರಂಭ
ಮದನ್​ ಕುಮಾರ್​
|

Updated on:Jan 28, 2024 | 10:40 AM

Share

‘ಗುಜರಾತ್​​ ಪ್ರವಾಸೋದ್ಯಮ ಇಲಾಖೆ’ (Gujarat Tourism) ಸಹಯೋಗದೊಂದಿಗೆ 69ನೇ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ  (69th Filmfare Awards) ಕಾರ್ಯಕ್ರಮ ನಡೆಯುತ್ತಿದೆ. ಗುಜರಾತ್​ನ ಗಾಂಧಿನಗರದ ಮಹಾತ್ಮ ಮಂದಿರ್​ ಕನ್ವೆನ್ಷನ್​ ಮತ್ತು ಎಕ್ಸಿಬ್ಯುಷನ್​ ಸೆಂಟರ್​ನಲ್ಲಿ ಎರಡು ದಿನಗಳ ಕಾಲ ಈ ಅದ್ದೂರಿ ಸಮಾರಂಭ ನಡೆಯುತ್ತಿದೆ. ಮೊದಲ ದಿನವಾದ ಜನವರಿ 27ರಂದು ಬಾಲಿವುಡ್​ (Bollywood) ಸಿನಿಮಾಗಳ ಹಲವು ತಾಂತ್ರಿಕ ವಿಭಾಗಗಳಿಗೆ ಪ್ರಶಸ್ತಿ ನೀಡಲಾಗಿದೆ. ಕಲರ್​ಫುಲ್​ ವೇದಿಕೆ ಮೇಲೆ ಫ್ಯಾಷನ್​ ಶೋ ಕೂಡ ನಡೆದಿದೆ. ಬಾಲಿವುಡ್​ ನಟಿ ಜಾನ್ವಿ ಕಪೂರ್​ ಜೊತೆ ಅನೇಕ ಮಾಡೆಲ್​ಗಳು ರ‍್ಯಾಂಪ್​ ವಾಕ್​ ಮಾಡಿದ್ದಾರೆ. ಫಿಲ್ಮ್​ಫೇರ್​ ಜೊತೆ ಡಿಸೈನರ್​ ಶಾಂತನು-ನಿಖಿಲ್​ ಮೆಹ್ತಾ ಅವರ ಸಹಯೋಗದೊಂದಿಗೆ ಈ ಫ್ಯಾಷನ್​ ಶೋ ನಡೆದಿದೆ.

ವಿಕ್ಕಿ ಕೌಶಲ್​ ನಟನೆಯ ‘ಸ್ಯಾಮ್​ ಬಹದ್ದೂರ್​’ ಚಿತ್ರವು ಮೂರು ತಾಂತ್ರಿಕ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ. ಅತ್ಯುತ್ತಮ ವಸ್ತ್ರ ವಿನ್ಯಾಸ, ಅತ್ಯುತ್ತಮ ಸೌಂಡ್​ ಡಿಸೈನ್​ ಹಾಗೂ ಅತ್ಯುತ್ತಮ ಪ್ರೊಡಕ್ಷನ್ ಡಿಸೈನ್​ ವಿಭಾಗದಲ್ಲಿ ಈ ಸಿನಿಮಾಗೆ ಫಿಲ್ಮ್​ಫೇರ್ ಪ್ರಶಸ್ತಿ ಸಿಕ್ಕಿದೆ. 69ನೇ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅಪಾರಶಕ್ತಿ ಖುರಾನ ಮತ್ತು ಕರೀಷ್ಮಾ ತನ್ನಾ ಅವರು ನಿರೂಪಣೆ ಮಾಡಿದ್ದಾರೆ.

‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದ ‘ವಾಟ್​ ಜುಮ್ಕಾ..’ ಹಾಡಿಗಾಗಿ ಗಣೇಶ್​ ಆಚಾರ್ಯ ಅವರು ಅತ್ಯುತ್ತಮ ನೃತ್ಯ ನಿರ್ದೇಶಕ ಪ್ರಶಸ್ತಿ ಪಡೆದಿದ್ದಾರೆ. ವೇದಿಕೆಯಲ್ಲಿ ಡ್ಯಾನ್ಸ್​ ಮಾಡಿ ಅವರು ಎಲ್ಲರನ್ನೂ ರಂಜಿಸಿದ್ದಾರೆ. ವಿಧು ವಿನೋದ್​ ಚೋಪ್ರಾ ನಿರ್ದೇಶನದ ‘12th ಫೇಲ್​’ ಸಿನಿಮಾಗೆ ಅತ್ಯುತ್ತಮ ಸಂಕಲನ ಪ್ರಶಸ್ತಿ ಸಿಕ್ಕಿದೆ. ಶಾರುಖ್​ ಖಾನ್​ ನಟನೆಯ ‘ಜವಾನ್​’ ಸಿನಿಮಾಗೆ ಅತ್ಯುತ್ತಮ ಸಾಹಸ ನಿರ್ದೇಶನ ಮತ್ತು ಅತ್ಯುತ್ತಮ ಸ್ಪೆಷಲ್​ ಎಫೆಕ್ಟ್​ ವಿಭಾಗದಲ್ಲಿ ಫಿಲ್ಮ್​ಫೇರ್​ ಪ್ರಶಸ್ತಿ ಸಿಕ್ಕಿದೆ.

ಇದನ್ನೂ ಓದಿ: 96th Oscars Shortlist: ಆಸ್ಕರ್​ ರೇಸ್​ನಿಂದ ಹೊರಬಿದ್ದ ಭಾರತದ ‘2018’ ಸಿನಿಮಾ; ಮತ್ತೆ ನಿರಾಸೆ

ಸಂದೀಪ್​ ರೆಡ್ಡಿ ವಂಗ ನಿರ್ದೇಶನದ ‘ಅನಿಮಲ್​’ ಸಿನಿಮಾಗೆ ಅತ್ಯುತ್ತಮ ಸೌಂಡ್​ ಹಿನ್ನೆಲೆ ಸಂಗೀತ ಪ್ರಶಸ್ತಿ ಸಿಕ್ಕಿದೆ. ಅತ್ಯುತ್ತಮ ಸೌಂಡ್​ ಡಿಸೈನ್​ ವಿಭಾಗದಲ್ಲಿ ‘ಸ್ಯಾಮ್​ ಬಹದ್ದೂರ್​’ ಚಿತ್ರದ ಜೊತೆ ‘ಅನಿಮಲ್​’ ಕೂಡ ಪ್ರಶಸ್ತಿ ಹಂಚಿಕೊಂಡಿದೆ. ‘ತ್ರಿ ಆಫ್​ ಅಸ್​’ ಸಿನಿಮಾದ ಛಾಯಾಗ್ರಹಣಕ್ಕೆ ಅವಿನಾಶ್​ ಅರುಣ್​ ಧಾವರೆ ಅವರು ಪ್ರಶಸ್ತಿ ಪಡೆದಿದ್ದಾರೆ. ಇನ್ನುಳಿದ ಮುಖ್ಯ ವಿಭಾಗಗಳ ಪ್ರಶಸ್ತಿಗಳನ್ನು ಇಂದು (ಜನವರಿ 28) ನೀಡಲಾಗುತ್ತದೆ.

ಇದನ್ನೂ ಓದಿ: ಫಿಲ್ಮ್​ಫೇರ್​ನಲ್ಲಿ ಮೈಚಳಿ ಬಿಟ್ಟು ಕುಣಿದ ಜಾಕ್ವೆಲಿನ್

‘ಫಿಲ್ಮ್​ಫೇರ್​ ಜೊತೆ ‘ಶಾಂತನು ಮತ್ತು ನಿಖಿಲ್​’ ಸಹಯೋಗ ಆಗಿರುವುದು ಹೊಸದೇನೂ ಅಲ್ಲ. ಮಿಸ್​ ಇಂಡಿಯಾ ಸೇರಿ ಹಲವು ಕಾರ್ಯಕ್ರಮ ನಮ್ಮ ಸಹಯೋಗದಲ್ಲಿ ಆಗಿತ್ತು. ಗುಜರಾತ್​ನಲ್ಲಿ ನಡೆಯುತ್ತಿರುವ 69ನೇ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿರುವುದು ಗೌರವದ ಸಂಗತಿ’ ಎಂದು ಫ್ಯಾಷನ್​ ಡಿಸೈನರ್​ ನಿಖಿಲ್​ ಮೆಹ್ರಾ ಹೇಳಿದ್ದಾರೆ. ‘ಗುಜರಾತ್​ನಲ್ಲಿನ ಸಿನಿಮಾ ಪ್ರೇಮಿಗಳಿಗೆ ಇದು ಮಹತ್ವದ ದಿನ. ಈ ಕಾರ್ಯಕ್ರಮ ಗುಜರಾತ್​ನಲ್ಲಿ ನಡೆಯುತ್ತಿರುವುದರ ಸಂಪೂರ್ಣ ಕೀರ್ತಿ ಇಲ್ಲಿನ ಪ್ರವಾಸೋದ್ಯಮ ಇಲಾಖೆಗೆ ಸಲ್ಲುತ್ತದೆ. ಗುಜರಾತಿ ಸಿನಿಮಾಗಳಿಗಾಗಿಯೇ ವಿಶೇಷ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುವ ದಿನಗಳು ಕೂಡ ದೂರ ಇಲ್ಲ’ ಎಂದು ಗಾಯಕ ಪಾರ್ಥಿವ್​ ಗೋಹಿಲ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:24 am, Sun, 28 January 24

ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ