ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ 5 ಅತ್ಯುತ್ತಮ ದೇಶಭಕ್ತಿ ಸಿನಿಮಾ: ಯಾವ ಓಟಿಟಿಯಲ್ಲಿ ವೀಕ್ಷಣೆಗೆ ಲಭ್ಯ?

Patriotic Movies: ದೇಶಕ್ಕಾಗಿ ಪ್ರಾಣ ಅರ್ಪಿಸಿದ ಹುತಾತ್ಮರಿಗೆ, ಸ್ವಾತಂತ್ರ್ಯ ತಂದುಕೊಟ್ಟ ವೀರರಿಗೆ, ಗಡಿಯಲ್ಲಿ ಕಾಯುತ್ತಿರುವ ಸೈನಿಕರಿಗೆ ಸಿನಿಮಾಗಳ ಮೂಲಕ ಗೌರವ ಸಲ್ಲಿಸುವ ಕೆಲಸ ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ದೇಶಭಕ್ತಿ ಹೊಮ್ಮಿಸುವ 5 ಬೆಸ್ಟ್​ ಸಿನಿಮಾಗಳ ಮೇಲೊಂದು ಕಿರುನೋಟ ಇಲ್ಲಿದೆ.

ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ 5 ಅತ್ಯುತ್ತಮ ದೇಶಭಕ್ತಿ ಸಿನಿಮಾ: ಯಾವ ಓಟಿಟಿಯಲ್ಲಿ ವೀಕ್ಷಣೆಗೆ ಲಭ್ಯ?
ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ 5 ಅತ್ಯುತ್ತಮ ದೇಶಭಕ್ತಿ ಸಿನಿಮಾ: ಯಾವ ಓಟಿಟಿಯಲ್ಲಿ ವೀಕ್ಷಣೆಗೆ ಲಭ್ಯ?
Follow us
| Updated By: ಮದನ್​ ಕುಮಾರ್​

Updated on: Aug 15, 2021 | 9:40 AM

ಆ.15 ಎಂದರೆ ಭಾರತೀಯರ ಪಾಲಿಗೆ ಹಬ್ಬ. ದೇಶಾದ್ಯಂತ ಇಂದು 75ನೇ ಸ್ವಾತಂತ್ರ್ಯ ದಿನಾಚರಣೆ (75th Independence Day) ಸಂಭ್ರಮ ಮನೆ ಮಾಡಿದೆ. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಅನೇಕ ವೀರರನ್ನು ಸ್ಮರಿಸಲಾಗುತ್ತಿದೆ. ಸ್ವಾತಂತ್ರ್ಯ ದೊರಕಿಸಿ ಕೊಡಲು ಹೋರಾಡಿ ಮಡಿದ ಯೋಧರ ಕಥೆಯನ್ನು ಅನೇಕ​ ಸಿನಿಮಾಗಳು ಕಣ್ಣಿಗೆ ಕಟ್ಟುವಂತೆ ಚಿತ್ರಿಸಿವೆ. ಇನ್ನು, ಸ್ವಾತಂತ್ರ್ಯ ಬಂದ ನಂತರ ಕೂಡ ಗಡಿಯಲ್ಲಿ ನಿಂತು ದೇಶದ ರಕ್ಷಣೆ ಮಾಡುತ್ತಿರುವ ಸೈನಿಕರಿಗೆ ಗೌರವ ಸಲ್ಲಿಸುವ ಸಲುವಾಗಿ ಹಲವು ಸಿನಿಮಾಗಳು ಮೂಡಿಬಂದಿವೆ. ಆ ಮೂಲಕ ಯುದ್ಧಭೂಮಿಯಲ್ಲಿ ಮಡಿದ ಸೈನಿಕರಿಗೂ ನಮನ ಸಲ್ಲಿಸಲಾಗಿದೆ. ಸ್ವಾತಂತ್ರ್ಯೋತ್ಸವಕ್ಕೆ ಪ್ರಯುಕ್ತ ನೋಡಬಹುದಾದ 5 ಅತ್ಯುತ್ತಮ ದೇಶಭಕ್ತಿ ಸಿನಿಮಾಗಳ ಬಗ್ಗೆ ಮಾಹಿತಿ ಇಲ್ಲಿದೆ.

ಭುಜ್​: ದಿ ಪ್ರೈಡ್​ ಆಫ್​ ಇಂಡಿಯಾ

ಅಜಯ್​ ದೇವಗನ್​, ಸೋನಾಕ್ಷಿ ಸಿನ್ಹಾ, ನೋರಾ ಫತೇಹಿ ನಟಿಸಿರುವ ‘ಭುಜ್​: ದಿ ಪ್ರೈಡ್​ ಆಫ್​ ಇಂಡಿಯಾ’ ಸಿನಿಮಾ ಈಗಷ್ಟೇ ಬಿಡುಗಡೆ ಆಗಿದೆ. ಆ.13ರಂದು ತೆರೆಕಂಡ ಈ ಚಿತ್ರಕ್ಕೆ ಜನರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​ನಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. 1971ರಲ್ಲಿ ಭುಜ್​ ವಾಯುನೆಲೆ ಮೇಲೆ ನಡೆದ ದಾಳಿಯನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ.

ಉರಿ: ದಿ ಸರ್ಜಿಕಲ್​ ಸ್ಟ್ರೈಕ್​

ಪಾಕ್​ ಭಯೋತ್ಪಾದಕರು ನಡೆಸಿದ ದಾಳಿಗೆ ಪ್ರತಿಯಾಗಿ ಭಾರತೀಯ ಸೈನಿಕರು ತಕ್ಕ ಪಾಠ ಕಲಿಸಿದ ಘಟನೆಯನ್ನು ಆಧರಿಸಿ ‘ಉರಿ: ದಿ ಸರ್ಜಿಕಲ್​ ಸ್ಟ್ರೈಕ್’ ಚಿತ್ರ ಮೂಡಿಬಂದಿದೆ. ಈ ಸಿನಿಮಾದಲ್ಲಿ ವಿಕ್ಕಿ ಕೌಶಲ್​, ಯಾಮಿ ಗೌತಮ್​ ಮುಖ್ಯ ಪಾತ್ರ ನಿಭಾಯಿಸಿದ್ದಾರೆ. ಆದಿತ್ಯ ಧಾರ್​ ನಿರ್ದೇಶನ ಮಾಡಿರುವ ಈ ಚಿತ್ರ ಅಮೇಜಾನ್​ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ.

ಹೃತಿಕ್​ ನಟನೆಯ ‘ಲಕ್ಷ್ಯ’

ಬಾಲಿವುಡ್​ನ ಸ್ಟಾರ್​ ನಟ ಹೃತಿಕ್​ ರೋಷನ್​ ಅಭಿನಯಿಸಿರುವ ‘ಲಕ್ಷ್ಯ’ ಸಿನಿಮಾ ತೆರೆಕಂಡು 17 ವರ್ಷಗಳೇ ಕಳೆದಿವೆ. ಸಿನಿಪ್ರಿಯರ ಫೇವರಿಟ್​ ಚಿತ್ರಗಳ ಪಟ್ಟಿಯಲ್ಲಿ ಈ ಚಿತ್ರಕ್ಕೆ ಈಗಲೂ ವಿಶೇಷ ಸ್ಥಾನವಿದೆ. ಕಾರ್ಗಿಲ್​ ಯುದ್ಧದ ಘಟನೆಗಳನ್ನು ಆಧರಿಸಿ ಈ ಸಿನಿಮಾ ತಯಾರಾಗಿದ್ದು, ಅಮೇಜಾನ್​ ಪ್ರೈಂನಲ್ಲಿ ಲಭ್ಯವಿದೆ.

ಅಕ್ಷಯ್​ ಕುಮಾರ್​ ಅಭಿನಯದ ‘ಕೇಸರಿ’

ದೇಶಭಕ್ತಿ ಸಿನಿಮಾಗಳನ್ನು ಮಾಡುವಲ್ಲಿ ಅಕ್ಷಯ್​ ಕುಮಾರ್​ ಸದಾ ಆಸಕ್ತಿ ತೋರಿಸುತ್ತಾರೆ. ಅವರು ನಟಿಸಿದ ‘ಕೇಸರಿ’ ಚಿತ್ರ 2019ರಲ್ಲಿ ತೆರೆಕಂಡು ಹಿಟ್​ ಆಯಿತು. ಸರಗಡಿ ಯುದ್ಧವನ್ನು ಆಧರಿಸಿ ಈ ಸಿನಿಮಾ ಮೂಡಿಬಂದಿದ್ದು, ಹವಿಲ್ದಾರ್​ ಇಶಾರ್​ ಸಿಂಗ್​ ಎಂಬ ಪಾತ್ರದಲ್ಲಿ ಅಕ್ಷಯ್​ ಕುಮಾರ್​ ಕಾಣಿಸಿಕೊಂಡಿದ್ದಾರೆ. ಅಮೇಜಾನ್​ ಪ್ರೈಮ್​ನಲ್ಲಿ ಲಭ್ಯವಿರುವ ಈ ಚಿತ್ರದ ಹಾಡುಗಳು ಕೂಡ ಸೂಪರ್​ ಹಿಟ್​ ಆಗಿವೆ.

ಆಲಿಯಾ ಭಟ್​ ನಟನೆಯ ‘ರಾಝಿ’

ದೇಶಭಕ್ತಿ ಸಿನಿಮಾಗಳಲ್ಲಿ ತುಂಬಾ ಭಿನ್ನವಾಗಿ ನಿಲ್ಲುವ ಸಿನಿಮಾ ‘ರಾಝಿ’. ದೇಶಭಕ್ತಿ ಎಂದರೆ ಬರೀ ಯುದ್ಧಭೂಮಿಯಲ್ಲಿ ಹೋರಾಡುವುದಷ್ಟೇ ಅಲ್ಲ. ಅದರ ಹೊರತಾಗಿಯೂ ದೇಶ ಕಾಯುವ ಕೆಲಸ ಬೇರೆ ಬೇರೆ ಇರುತ್ತವೆ ಎಂಬುದಕ್ಕೆ ‘ರಾಝಿ’ ಸಿನಿಮಾ ಅತ್ಯುತ್ತಮ ಉದಾಹರಣೆ. ಈ ಸಿನಿಮಾದಲ್ಲಿ ಆಲಿಯಾ ಭಟ್​ ನಟನೆ ಅತ್ಯುತ್ತಮವಾಗಿದೆ. ನೆಟ್​ಫ್ಲಿಕ್ಸ್​ನಲ್ಲಿ ರಾಝಿ ಚಿತ್ರ ಲಭ್ಯವಿದೆ.

ಇದನ್ನೂ ಓದಿ:

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ; ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದವರನ್ನು ಸ್ಮರಿಸಿದ ಬೊಮ್ಮಾಯಿ

75th Indian Independence Day: 100ನೇ ಸ್ವಾತಂತ್ರ್ಯ ದಿನಾಚರಣೆ ಹೊತ್ತಿಗೆ ಆದರ್ಶ ಭಾರತ ನಿರ್ಮಾಣದ ಗುರಿ: ಪ್ರಧಾನಿ ಮೋದಿ

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು