AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆಗೂ ಮುನ್ನ ‘83’ ಚಿತ್ರ ನೋಡಲು ನಿರಾಕರಿಸಿದ್ದ 1983 ವಿಶ್ವಕಪ್​ ಟೀಮ್ ಆಟಗಾರರು​; ಕಾರಣ ಏನು?

83 Movie: ಭಾರಿ ನಿರೀಕ್ಷೆಯೊಂದಿಗೆ ಬಿಡುಗಡೆ ಆಗಿರುವ ‘83’ ಚಿತ್ರ ಹಿಂದಿಯಲ್ಲಿ ನಿರ್ಮಾಣ ಆಗಿದ್ದು ಕನ್ನಡ, ಮಲಯಾಳಂ, ತೆಲುಗು ಮತ್ತು ತಮಿಳು ಭಾಷೆಗಳಿಗೆ ಡಬ್​ ಆಗಿ ತೆರೆಕಂಡಿದೆ. ರಣವೀರ್​ ಸಿಂಗ್​ ಈ ಚಿತ್ರದ ಹೀರೋ.

ಬಿಡುಗಡೆಗೂ ಮುನ್ನ ‘83’ ಚಿತ್ರ ನೋಡಲು ನಿರಾಕರಿಸಿದ್ದ 1983 ವಿಶ್ವಕಪ್​ ಟೀಮ್ ಆಟಗಾರರು​; ಕಾರಣ ಏನು?
83 ಸಿನಿಮಾ ಪೋಸ್ಟರ್​
Follow us
TV9 Web
| Updated By: Digi Tech Desk

Updated on:Dec 24, 2021 | 9:35 AM

ಬಹುನಿರೀಕ್ಷಿತ ‘83’ ಸಿನಿಮಾ (83 Movie) ಇಂದು (ಡಿ.24) ಅದ್ದೂರಿಯಾಗಿ ಬಿಡುಗಡೆ ಆಗಿದೆ. 1983ರಲ್ಲಿ ಟೀಮ್​ ಇಂಡಿಯಾ ವಿಶ್ವಕಪ್​ (1983 World Cup) ಗೆದ್ದ ಘಟನೆಯನ್ನೇ ಆಧರಿಸಿ ಈ ಚಿತ್ರ ತಯಾರಾಗಿದೆ. ರಣವೀರ್​ ಸಿಂಗ್​ (Ranveer Singh) ಅವರು ಕಪಿಲ್​ ದೇವ್​ (Kapil Dev) ಪಾತ್ರವನ್ನು ಮಾಡಿದ್ದಾರೆ. ಮೊದಲ ಲಾಕ್​ಡೌನ್​ ಆರಂಭ ಆಗುವುದಕ್ಕೂ ಮುನ್ನವೇ ಈ ಚಿತ್ರ ಬಿಡುಗಡೆಗೆ ಸಜ್ಜಾಗಿತ್ತು. ಆದರೆ ಕೊರೊನಾ ಕಾರಣದಿಂದ ಇಷ್ಟು ತಡವಾಗಿ ರಿಲೀಸ್​ ಆಗಿದೆ. ರಿಲೀಸ್​ಗೂ ಮುನ್ನ ಆಪ್ತರಿಗಾಗಿ ಪ್ರದರ್ಶನ ಏರ್ಪಡಿಸಲಾಗಿತ್ತು. ಆದರೆ ಬಿಡುಗಡೆ​ ಆಗುವುದಕ್ಕಿಂತ ಮೊದಲು ಈ ಚಿತ್ರವನ್ನು ನೋಡಬಾರದು ಎಂದು 1983ರಲ್ಲಿ ವಿಶ್ವಕಪ್​ ಗೆದ್ದ ಭಾರತ ತಂಡದ ಆಟಗಾರರು ನಿರ್ಧರಿಸಿದ್ದರು! ಅದಕ್ಕೆ ಕಾರಣ ಏನು ಎಂಬುದನ್ನು ನಿರ್ದೇಶಕ ಕಬೀರ್​ ಖಾನ್​ (Kabir Khan) ಈಗ ವಿವರಿಸಿದ್ದಾರೆ.

‘ಅಂದು ವಿಶ್ವಕಪ್​ ಗೆದ್ದ ಟೀಮ್​ ಇಂಡಿಯಾದ ಎಲ್ಲ ಆಟಗಾರರು ತಮ್ಮ ಬಗೆಗಿನ ವಿವರಗಳನ್ನು ನಮಗೆ ನೀಡಿದರು. ಅದನ್ನು ತೆರೆ ಮೇಲೆ ಹೇಗೆ ಚಿತ್ರಿಸಬೇಕು ಎಂಬ ಸಂಪೂರ್ಣ ಸ್ವಾತಂತ್ರ್ಯವನ್ನು ಅವರು ನನಗೆ ನೀಡಿದರು. ನನ್ನ ಮೇಲೆ ಅವರಿಗೆ ನಂಬಿಕೆ ಇತ್ತು. ಆದ್ದರಿಂದ ಸಿನಿಮಾ ರಿಲೀಸ್​ಗೂ ಮುನ್ನ ಚಿತ್ರದ ಕಂಟೆಂಟ್​ನಲ್ಲಿ ಮೂಗು ತೂರಿಸಲು ಅವರು ಯಾರೂ ಬರಲಿಲ್ಲ. ಹಾಗಾಗಿ ರಿಲೀಸ್​ಗೂ ಮೊದಲು ಈ ಸಿನಿಮಾ ನೋಡಲು ಅವರು ಒಪ್ಪಲಿಲ್ಲ. ರಿಲೀಸ್​ ಬಳಿಕ ಎಲ್ಲರ ಜೊತೆ ಕುಳಿತು ಸಿನಿಮಾ ನೋಡುವುದಾಗಿ ತಿಳಿಸಿದ್ದರು’ ಎಂದು ನಿರ್ದೇಶಕ ಕಬೀರ್ ಖಾನ್​ ಹೇಳಿದ್ದಾರೆ.

1983ರ ವಿಶ್ವಕಪ್​ ವೇಳೆ ಏನೆಲ್ಲ ನಡೆಯಿತು ಎಂಬುದಕ್ಕೆ ಈಗ ಸೂಕ್ತ ದಾಖಲೆಗಳಿಲ್ಲ. ಈ ಘಟನೆಗಳಿಗೆ ಸಂಬಂಧಿಸಿದಂತೆ ವಿಡಿಯೋಗಳು ಕೂಡ ಹೆಚ್ಚು ಲಭ್ಯವಿಲ್ಲ. ಹಾಗಾಗಿ ಅಂದು ಭಾರತ ತಂಡದಲ್ಲಿ ಇದ್ದ ಆಟಗಾರರನ್ನೇ ಮಾತನಾಡಿಸಿ ವಿವರಗಳನ್ನು ಕಲೆ ಹಾಕಬೇಕಾಯಿತು. ಆ ವಿವರಗಳನ್ನು ಪಡೆಯಲು ‘83’ ನಿರ್ಮಾಪಕರು ಕೋಟ್ಯಂತರ ರೂಪಾಯಿ ವೆಚ್ಚ ಮಾಡಿದ್ದಾರೆ. ಟೀಮ್​ನಲ್ಲಿದ್ದ ಎಲ್ಲ ಆಟಗಾರರಿಗೂ ಸೇರಿ ಒಟ್ಟು 15 ಕೋಟಿ ರೂ.ಗಳನ್ನು ನೀಡಲಾಗಿದೆ. ಅದರಲ್ಲಿ ಕ್ಯಾಪ್ಟನ್​ ಕಪಿಲ್​ ದೇವ್​ ಅವರಿಗೆ ಬರೋಬ್ಬರಿ 5 ಕೋಟಿ ಕೊಡಲಾಗಿದೆ.

ಭಾರಿ ನಿರೀಕ್ಷೆಯೊಂದಿಗೆ ಬಿಡುಗಡೆ ಆಗಿರುವ ಈ ಚಿತ್ರ ಹಿಂದಿಯಲ್ಲಿ ನಿರ್ಮಾಣ ಆಗಿದ್ದು ಕನ್ನಡ, ಮಲಯಾಳಂ, ತೆಲುಗು ಮತ್ತು ತಮಿಳು ಭಾಷೆಗಳಿಗೆ ಡಬ್​ ಆಗಿ ತೆರೆಕಂಡಿದೆ. ಕರ್ನಾಟಕದಲ್ಲಿ ಈ ಚಿತ್ರವನ್ನು ಕಿಚ್ಚ ಸುದೀಪ್​ ಅವರು ಅರ್ಪಿಸಿದ್ದಾರೆ. ಶಾಲಿನಿ ಆರ್ಟ್ಸ್ ಹಾಗೂ ರಿಲಯನ್ಸ್ ಎಂಟರ್​ಟೇನ್ಮೆಂಟ್​ ಸಂಸ್ಥೆ ವಿತರಣೆಯ ಜವಾಬ್ದಾರಿಯನ್ನು ಹೊತ್ತುಕೊಂಡಿವೆ. ದೀಪಿಕಾ ಪಡುಕೋಣೆ, ಕಬೀರ್ ಖಾನ್, ವಿಷ್ಣು ವರ್ಧನ್ ಇಂದುರಿ, ಸಾಜಿದ್ ನಾಡಿಯದ್ವಾಲ, ಫಾಂಟಮ್ ಫಿಲ್ಮ್ಸ್ ಹಾಗೂ 83 ಫಿಲ್ಮ್ ಲಿಮಿಟೆಡ್ ಮೂಲಕ ಈ ಚಿತ್ರ ನಿರ್ಮಾಣ ಆಗಿದೆ. ಇಂದು ಸಿನಿಮಾ ರಿಲೀಸ್​ ಆಗಿ ಎಲ್ಲರಿಂದ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

ಇದನ್ನೂ ಓದಿ:

83 Review: ಇದು ಬರೀ ಸಿನಿಮಾ ಅಲ್ಲ; ಕ್ರಿಕೆಟ್​ಪ್ರಿಯರ ಎಮೋಷನ್​, ವಿಶ್ವಕಪ್​ ಗೆಲುವಿನ ಹೊಸ ಸೆಲೆಬ್ರೇಷನ್​

ಡಬ್ಬಿಂಗ್​ ಚಿತ್ರದ ಕನ್ನಡ ವರ್ಷನ್​ಗೆ ಹೆಚ್ಚು ಥಿಯೇಟರ್​ ಸಿಗಲ್ಲ ಯಾಕೆ? ಪ್ರಾಕ್ಟಿಕಲ್​ ಕಾರಣ ತಿಳಿಸಿದ ‘83’ ವಿತರಕ ಜಾಕ್​​ ಮಂಜು

Published On - 9:03 am, Fri, 24 December 21

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ