AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆಗೂ ಮುನ್ನ ‘83’ ಚಿತ್ರ ನೋಡಲು ನಿರಾಕರಿಸಿದ್ದ 1983 ವಿಶ್ವಕಪ್​ ಟೀಮ್ ಆಟಗಾರರು​; ಕಾರಣ ಏನು?

83 Movie: ಭಾರಿ ನಿರೀಕ್ಷೆಯೊಂದಿಗೆ ಬಿಡುಗಡೆ ಆಗಿರುವ ‘83’ ಚಿತ್ರ ಹಿಂದಿಯಲ್ಲಿ ನಿರ್ಮಾಣ ಆಗಿದ್ದು ಕನ್ನಡ, ಮಲಯಾಳಂ, ತೆಲುಗು ಮತ್ತು ತಮಿಳು ಭಾಷೆಗಳಿಗೆ ಡಬ್​ ಆಗಿ ತೆರೆಕಂಡಿದೆ. ರಣವೀರ್​ ಸಿಂಗ್​ ಈ ಚಿತ್ರದ ಹೀರೋ.

ಬಿಡುಗಡೆಗೂ ಮುನ್ನ ‘83’ ಚಿತ್ರ ನೋಡಲು ನಿರಾಕರಿಸಿದ್ದ 1983 ವಿಶ್ವಕಪ್​ ಟೀಮ್ ಆಟಗಾರರು​; ಕಾರಣ ಏನು?
83 ಸಿನಿಮಾ ಪೋಸ್ಟರ್​
TV9 Web
| Edited By: |

Updated on:Dec 24, 2021 | 9:35 AM

Share

ಬಹುನಿರೀಕ್ಷಿತ ‘83’ ಸಿನಿಮಾ (83 Movie) ಇಂದು (ಡಿ.24) ಅದ್ದೂರಿಯಾಗಿ ಬಿಡುಗಡೆ ಆಗಿದೆ. 1983ರಲ್ಲಿ ಟೀಮ್​ ಇಂಡಿಯಾ ವಿಶ್ವಕಪ್​ (1983 World Cup) ಗೆದ್ದ ಘಟನೆಯನ್ನೇ ಆಧರಿಸಿ ಈ ಚಿತ್ರ ತಯಾರಾಗಿದೆ. ರಣವೀರ್​ ಸಿಂಗ್​ (Ranveer Singh) ಅವರು ಕಪಿಲ್​ ದೇವ್​ (Kapil Dev) ಪಾತ್ರವನ್ನು ಮಾಡಿದ್ದಾರೆ. ಮೊದಲ ಲಾಕ್​ಡೌನ್​ ಆರಂಭ ಆಗುವುದಕ್ಕೂ ಮುನ್ನವೇ ಈ ಚಿತ್ರ ಬಿಡುಗಡೆಗೆ ಸಜ್ಜಾಗಿತ್ತು. ಆದರೆ ಕೊರೊನಾ ಕಾರಣದಿಂದ ಇಷ್ಟು ತಡವಾಗಿ ರಿಲೀಸ್​ ಆಗಿದೆ. ರಿಲೀಸ್​ಗೂ ಮುನ್ನ ಆಪ್ತರಿಗಾಗಿ ಪ್ರದರ್ಶನ ಏರ್ಪಡಿಸಲಾಗಿತ್ತು. ಆದರೆ ಬಿಡುಗಡೆ​ ಆಗುವುದಕ್ಕಿಂತ ಮೊದಲು ಈ ಚಿತ್ರವನ್ನು ನೋಡಬಾರದು ಎಂದು 1983ರಲ್ಲಿ ವಿಶ್ವಕಪ್​ ಗೆದ್ದ ಭಾರತ ತಂಡದ ಆಟಗಾರರು ನಿರ್ಧರಿಸಿದ್ದರು! ಅದಕ್ಕೆ ಕಾರಣ ಏನು ಎಂಬುದನ್ನು ನಿರ್ದೇಶಕ ಕಬೀರ್​ ಖಾನ್​ (Kabir Khan) ಈಗ ವಿವರಿಸಿದ್ದಾರೆ.

‘ಅಂದು ವಿಶ್ವಕಪ್​ ಗೆದ್ದ ಟೀಮ್​ ಇಂಡಿಯಾದ ಎಲ್ಲ ಆಟಗಾರರು ತಮ್ಮ ಬಗೆಗಿನ ವಿವರಗಳನ್ನು ನಮಗೆ ನೀಡಿದರು. ಅದನ್ನು ತೆರೆ ಮೇಲೆ ಹೇಗೆ ಚಿತ್ರಿಸಬೇಕು ಎಂಬ ಸಂಪೂರ್ಣ ಸ್ವಾತಂತ್ರ್ಯವನ್ನು ಅವರು ನನಗೆ ನೀಡಿದರು. ನನ್ನ ಮೇಲೆ ಅವರಿಗೆ ನಂಬಿಕೆ ಇತ್ತು. ಆದ್ದರಿಂದ ಸಿನಿಮಾ ರಿಲೀಸ್​ಗೂ ಮುನ್ನ ಚಿತ್ರದ ಕಂಟೆಂಟ್​ನಲ್ಲಿ ಮೂಗು ತೂರಿಸಲು ಅವರು ಯಾರೂ ಬರಲಿಲ್ಲ. ಹಾಗಾಗಿ ರಿಲೀಸ್​ಗೂ ಮೊದಲು ಈ ಸಿನಿಮಾ ನೋಡಲು ಅವರು ಒಪ್ಪಲಿಲ್ಲ. ರಿಲೀಸ್​ ಬಳಿಕ ಎಲ್ಲರ ಜೊತೆ ಕುಳಿತು ಸಿನಿಮಾ ನೋಡುವುದಾಗಿ ತಿಳಿಸಿದ್ದರು’ ಎಂದು ನಿರ್ದೇಶಕ ಕಬೀರ್ ಖಾನ್​ ಹೇಳಿದ್ದಾರೆ.

1983ರ ವಿಶ್ವಕಪ್​ ವೇಳೆ ಏನೆಲ್ಲ ನಡೆಯಿತು ಎಂಬುದಕ್ಕೆ ಈಗ ಸೂಕ್ತ ದಾಖಲೆಗಳಿಲ್ಲ. ಈ ಘಟನೆಗಳಿಗೆ ಸಂಬಂಧಿಸಿದಂತೆ ವಿಡಿಯೋಗಳು ಕೂಡ ಹೆಚ್ಚು ಲಭ್ಯವಿಲ್ಲ. ಹಾಗಾಗಿ ಅಂದು ಭಾರತ ತಂಡದಲ್ಲಿ ಇದ್ದ ಆಟಗಾರರನ್ನೇ ಮಾತನಾಡಿಸಿ ವಿವರಗಳನ್ನು ಕಲೆ ಹಾಕಬೇಕಾಯಿತು. ಆ ವಿವರಗಳನ್ನು ಪಡೆಯಲು ‘83’ ನಿರ್ಮಾಪಕರು ಕೋಟ್ಯಂತರ ರೂಪಾಯಿ ವೆಚ್ಚ ಮಾಡಿದ್ದಾರೆ. ಟೀಮ್​ನಲ್ಲಿದ್ದ ಎಲ್ಲ ಆಟಗಾರರಿಗೂ ಸೇರಿ ಒಟ್ಟು 15 ಕೋಟಿ ರೂ.ಗಳನ್ನು ನೀಡಲಾಗಿದೆ. ಅದರಲ್ಲಿ ಕ್ಯಾಪ್ಟನ್​ ಕಪಿಲ್​ ದೇವ್​ ಅವರಿಗೆ ಬರೋಬ್ಬರಿ 5 ಕೋಟಿ ಕೊಡಲಾಗಿದೆ.

ಭಾರಿ ನಿರೀಕ್ಷೆಯೊಂದಿಗೆ ಬಿಡುಗಡೆ ಆಗಿರುವ ಈ ಚಿತ್ರ ಹಿಂದಿಯಲ್ಲಿ ನಿರ್ಮಾಣ ಆಗಿದ್ದು ಕನ್ನಡ, ಮಲಯಾಳಂ, ತೆಲುಗು ಮತ್ತು ತಮಿಳು ಭಾಷೆಗಳಿಗೆ ಡಬ್​ ಆಗಿ ತೆರೆಕಂಡಿದೆ. ಕರ್ನಾಟಕದಲ್ಲಿ ಈ ಚಿತ್ರವನ್ನು ಕಿಚ್ಚ ಸುದೀಪ್​ ಅವರು ಅರ್ಪಿಸಿದ್ದಾರೆ. ಶಾಲಿನಿ ಆರ್ಟ್ಸ್ ಹಾಗೂ ರಿಲಯನ್ಸ್ ಎಂಟರ್​ಟೇನ್ಮೆಂಟ್​ ಸಂಸ್ಥೆ ವಿತರಣೆಯ ಜವಾಬ್ದಾರಿಯನ್ನು ಹೊತ್ತುಕೊಂಡಿವೆ. ದೀಪಿಕಾ ಪಡುಕೋಣೆ, ಕಬೀರ್ ಖಾನ್, ವಿಷ್ಣು ವರ್ಧನ್ ಇಂದುರಿ, ಸಾಜಿದ್ ನಾಡಿಯದ್ವಾಲ, ಫಾಂಟಮ್ ಫಿಲ್ಮ್ಸ್ ಹಾಗೂ 83 ಫಿಲ್ಮ್ ಲಿಮಿಟೆಡ್ ಮೂಲಕ ಈ ಚಿತ್ರ ನಿರ್ಮಾಣ ಆಗಿದೆ. ಇಂದು ಸಿನಿಮಾ ರಿಲೀಸ್​ ಆಗಿ ಎಲ್ಲರಿಂದ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

ಇದನ್ನೂ ಓದಿ:

83 Review: ಇದು ಬರೀ ಸಿನಿಮಾ ಅಲ್ಲ; ಕ್ರಿಕೆಟ್​ಪ್ರಿಯರ ಎಮೋಷನ್​, ವಿಶ್ವಕಪ್​ ಗೆಲುವಿನ ಹೊಸ ಸೆಲೆಬ್ರೇಷನ್​

ಡಬ್ಬಿಂಗ್​ ಚಿತ್ರದ ಕನ್ನಡ ವರ್ಷನ್​ಗೆ ಹೆಚ್ಚು ಥಿಯೇಟರ್​ ಸಿಗಲ್ಲ ಯಾಕೆ? ಪ್ರಾಕ್ಟಿಕಲ್​ ಕಾರಣ ತಿಳಿಸಿದ ‘83’ ವಿತರಕ ಜಾಕ್​​ ಮಂಜು

Published On - 9:03 am, Fri, 24 December 21

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ