AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vicky kaushal: ಇಂದೋರ್​ನ ಗಲ್ಲಿಗಳಲ್ಲಿ ಸಾರಾ ಜತೆ ಸುತ್ತಾಡಿದ ವಿಕ್ಕಿ ಕೌಶಲ್​ಗೆ ಎದುರಾಯ್ತು ಸಂಕಷ್ಟ! ಏನಿದು ಪ್ರಕರಣ?

Sara Ali Khan: ವಿಕ್ಕಿ ಕೌಶಲ್​ಗೆ ಸಂಕಷ್ಟ ಎದುರಾಗಿದೆ. ಇಂದೋರ್​ನಲ್ಲಿ ಅವರ ವಿರುದ್ಧ ಪ್ರಕರಣವೂ ದಾಖಲಾಗಿದೆ. ಏನಿದು ಸಮಾಚಾರ? ಇಲ್ಲಿದೆ ಮಾಹಿತಿ.

Vicky kaushal: ಇಂದೋರ್​ನ ಗಲ್ಲಿಗಳಲ್ಲಿ ಸಾರಾ ಜತೆ ಸುತ್ತಾಡಿದ ವಿಕ್ಕಿ ಕೌಶಲ್​ಗೆ ಎದುರಾಯ್ತು ಸಂಕಷ್ಟ! ಏನಿದು ಪ್ರಕರಣ?
ಇಂದೋರ್​ನಲ್ಲಿ ಬೈಕ್ ಸವಾರಿ ಮಾಡುತ್ತಿರುವ ವಿಕ್ಕಿ- ಸಾರಾ ಅಲಿ ಖಾನ್
TV9 Web
| Updated By: shivaprasad.hs|

Updated on:Jan 02, 2022 | 11:36 AM

Share

ಬಾಲಿವುಡ್​ ನಟ ವಿಕ್ಕಿ ಕೌಶಲ್ ಸಂಭಾವಿತ ನಟ ಎಂದು ಅಭಿಮಾನಿಗಳಿಂದ ಗುರುತಿಸಿಕೊಳ್ಳುತ್ತಾರೆ. ಹೊಸ ವರ್ಷವನ್ನು ಆಚರಿಸಲು ಅವರು ಇತ್ತೀಚೆಗೆ ಆಗಮಿಸಿ, ನಿನ್ನೆ ಮತ್ತೆ ಚಿತ್ರೀಕರಣಕ್ಕೆ ವಾಪಸ್ಸಾಗಿದ್ದರು. ಇದರ ಬೆನ್ನಲ್ಲೇ ಅವರಿಗೆ ಶಾಕಿಂಗ್ ಸುದ್ದಿ ಎದುರಾಗಿದೆ. ಇಂದೋರ್​ನಲ್ಲಿ ವಿಕ್ಕಿ ಕೌಶಲ್​ ಅಕ್ರಮವಾಗಿ ತಮ್ಮ ನಂಬರ್ ಪ್ಲೇಟ್ ನಕಲಿಸಿದ್ದಾರೆ ಎಂದು ವ್ಯಕ್ತಿಯೋರ್ವರು ಪೊಲೀಸ್ ಕಂಪ್ಲೇಂಟ್ ನೀಡಿದ್ದಾರೆ. ಮೋಟಾರ್ ಸೈಕಲ್ ಆಕ್ಟ್​​ ಅನ್ವಯ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ವಿಕ್ಕಿ ಕೌಶಲ್ ಇಂದೋರ್​ನ ಗಲ್ಲಿಗಳಲ್ಲಿ ಸಹ ನಟಿ ಸಾರಾ ಅಲಿ ಖಾನ್ ಜತೆ ಬೈಕ್​ನಲ್ಲಿ ಸುತ್ತಾಡಿದ್ದರು. ಇದು ಚಿತ್ರೀಕರಣದ ಉದ್ದೇಶದಿಂದ ಮಾಡಿದ್ದಾಗಿತ್ತು. ಆದರೆ ಈ ವೇಳೆ ಚಿತ್ರತಂಡ ಎಡವಟ್ಟು ಮಾಡಿಕೊಂಡಿದೆ.

ಪ್ರಕರಣವೇನು? ಇತ್ತೀಚೆಗೆ ವಿಕ್ಕಿ ಕೌಶಲ್ ಹಾಗೂ ನಟಿ ಸಾರಾ ಅಲಿ ಖಾನ್ ಡಿ-ಗ್ಲಾಮ್ ಲುಕ್​ನಲ್ಲಿ ಬೈಕ್ ಸವಾರಿ ಮಾಡಿದ್ದು ದೊಡ್ಡ ಸುದ್ದಿಯಾಗಿತ್ತು. ಇಂದೋರ್​ನ ಬೀದಿಗಳಲ್ಲಿ ಸಾಮಾನ್ಯ ಬೈಕ್​ನಲ್ಲಿ ಈ ನಟರು ಸಂಚರಿಸಿದ್ದರು. ಆ ಸಂದರ್ಭದ ಚಿತ್ರಗಳು ವೈರಲ್ ಆಗಿದ್ದವು. ಆದರೆ ಇದೀಗ ಜೈ ಸಿಂಗ್ ಯಾದವ್ ಎಂಬ ವ್ಯಕ್ತಿಯೋರ್ವರು ಈ ಘಟನೆಯ ಕುರಿತು ಪೊಲೀಸ್​ಗೆ ದೂರು ನೀಡಿದ್ದಾರೆ.

ಜೈ ಸಿಂಗ್ ಯಾದವ್ ದೂರೇನು? ವಿಕ್ಕಿ ಕೌಶಲ್ ಹಾಗೂ ಸಾರಾ ಅಲಿ ಖಾನ್ ಸಂಚರಿಸುತ್ತಿದ್ದ ಗಾಡಿಯ ನಂಬರ್ ಪ್ಲೇಟ್ ತಮ್ಮ ಗಾಡಿಯದ್ದಾಗಿದೆ ಎಂದು ದೂರುದಾರ ಜೈ ಸಿಂಗ್ ಯಾದವ್ ಹೇಳಿದ್ದಾರೆ. ಚಿತ್ರತಂಡಕ್ಕೆ ಈ ಕುರಿತು ಅರಿವಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಮತ್ತೊಬ್ಬರ ನಂಬರ್ ಪ್ಲೇಟ್​ ಅನ್ನು ಅನುಮತಿಯಿಲ್ಲದೇ ಅಕ್ರಮವಾಗಿ ಬಳಸುವುದು ತಪ್ಪು ಎಂದು ಯಾದವ್ ಹೇಳಿದ್ದಾರೆ. ಅಲ್ಲದೇ ಈ ಕುರಿತು ಅವರು ಪೂರಕ ದಾಖಲೆಗಳನ್ನೂ ಒದಗಿಸಿದ್ದಾರೆ.

ಈ ಕುರಿತು ಪೊಲೀಸರು ಪ್ರತಿಕ್ರಿಯಿಸಿದ್ದು, ದೂರು ದಾಖಲಾಗಿದ್ದನ್ನು ಖಚಿತಪಡಿಸಿದ್ದಾರೆ. ಈ ಕುರಿತು ಮೊಟಾರ್ ಸೈಕಲ್ ಕಾಯ್ದೆಯ ಅನ್ವಯ ತನಿಖೆ ಮಾಡಲಾಗುವುದು. ಚಿತ್ರತಂಡ ಇಂದೋರ್​ನಲ್ಲಿಯೇ ಇದ್ದರೆ ಅವರನ್ನು ಸಂಪರ್ಕಿಸಿ ವಿಚಾರಣೆ ನಡೆಸಲಾಗುವುದು ಎಂದು ಬಂಗಾಂಗದ ಎಸ್​ಐ ರಾಜೇಂದ್ರ ಸೋನಿ ಎಎನ್​ಐಗೆ ತಿಳಿಸಿದ್ದಾರೆ.

ಪ್ರಕರಣದ ಕುರಿತು ಎಎನ್​ಐ ಟ್ವೀಟ್ ಇಲ್ಲಿದೆ:

ವಿಕ್ಕಿ ಕೌಶಲ್ ಹಾಗೂ ಸಾರಾ ಅಲಿ ಖಾನ್ ಈರ್ವರೂ ಜತೆಯಾಗಿ ನಟಿಸುತ್ತಿರುವ ಚಿತ್ರವೊಂದರ ಚಿತ್ರೀಕರಣದ ದೃಶ್ಯದಲ್ಲಿ ಕಾಣಿಸಿಕೊಳ್ಳುವಾಗ ಆ ಬೈಕ್ ಬಳಸಿದ್ದರು. ಆದರೆ ಈರ್ವರೂ ಜತೆಯಾಗಿ ಓಡಾಡಿದ ಚಿತ್ರಗಳು ಅಂತರ್ಜಾಲದಲ್ಲಿ ಸಖತ್ ವೈರಲ್ ಆಗಿದ್ದವು.

ಇದನ್ನೂ ಓದಿ:

Katrina Kaif: ಮತ್ತೆ ಅಭಿಮಾನಿಗಳ ಮನಗೆದ್ದ ವಿಕ್ಕಿ- ಕತ್ರಿನಾ; ಏನಿದು ಸಮಾಚಾರ? ವಿಡಿಯೋ ನೋಡಿ

ಶಿಲ್ಪಾ ಶೆಟ್ಟಿ ತಂಗಿಗೆ ಸಲ್ಮಾನ್​ ಖಾನ್ ಖಡಕ್​ ವಾರ್ನಿಂಗ್​​​; ಎಲ್ಲರ ಎದುರು ಕಣ್ಣೀರು ಹಾಕಿದ ಶಮಿತಾ

Published On - 9:59 am, Sun, 2 January 22

ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?
ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ
ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ